ಕ್ಷುಲ್ಲಕ ಕಾರಣಕ್ಕೆ ರಸ್ತೆ ಕಾಮಗಾರಿ ನನೆಗುದಿಗೆ

ನಮಗೆ ಪರಿಹಾರ ನೀಡಿದ ನಂತರ ಕಾಮಗಾರಿ ಆರಂಭಿಸುವಂತೆ ಪಟ್ಟು ಹಿಡಿದಿದ್ದಾರೆ.

Team Udayavani, Aug 19, 2021, 6:26 PM IST

Road

ಲಿಂಗಸುಗೂರು: ಕುಂಟು ನೆಪ ಇಟ್ಟುಕೊಂಡು ಗುತ್ತಿಗೆದಾರರೊಬ್ಬರು ಕೆಲಸ ಸ್ಥಗಿತಗೊಳಿಸಿದ್ದರಿಂದ ತಾಲೂಕಿನ ಸುಕ್ಷೇತ್ರ ಅಮರೇಶ್ವರಕ್ಕೆ ಸಂಪರ್ಕ ಕಲ್ಪಿಸುವ
ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದೆ. ಸುಕ್ಷೇತ್ರ ಅಮರೇಶ್ವರ ಜಿಲ್ಲೆಯಲ್ಲೇ ದೊಡ್ಡ ಪುಣ್ಯ ಕ್ಷೇತ್ರವಾಗಿದೆ. ಜಿಲ್ಲೆಯ ದೊಡ್ಡ ಜಾತ್ರೆಗಳಲ್ಲಿ ಅಮರೇಶ್ವರ ಜಾತ್ರೆಯೂ ಒಂದಾಗಿದೆ. ಪುರಾಣ ಐತಿಹ್ಯ ಹೊಂದಿರುವ ಕ್ಷೇತ್ರಕ್ಕೆ ಭಕ್ತರ ಸಮೂಹವೇ ಇದೆ. ಪ್ರತಿ ವರ್ಷ ಹೋಳಿ ಹುಣ್ಣಿಮೆ ದಿನದಂದು ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಾರೆ.

ದ್ವಿಪಥ ರಸ್ತೆಗೆ 8 ಕೋಟಿ ರೂ.: ರಾಷ್ಟ್ರೀಯ ಹೆದ್ದಾರಿ 150ಎ ದಿಂದ ಅಮರೇಶ್ವರ ಸುಕ್ಷೇತ್ರಕ್ಕೆ ದ್ವಿಪಥ ರಸ್ತೆ ಅಭಿವೃದ್ಧಿಗೆ ಎರಡು ಪ್ಯಾಕೇಜ್‌ನಡಿ 8 ಕೋಟಿ ರೂ. ಬಿಡುಗಡೆಯಾಗಿದ್ದು, ಅದನ್ನು ಲೋಕೋಪಯೋಗಿ ಇಲಾಖೆ ಮುಖಾಂತರ ಟೆಂಡರ್‌ ಕರೆದು 2020, ಫೆ.15ರಂದು ಕಾಮಗಾರಿ ಆರಂಭಿಸಲಾಗಿತ್ತು. ಅದರಂತೆ ದೇವರಭೂಪುರ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಸುಕ್ಷೇತ್ರದ ದೊಡ್ಡ ಕಲ್ಯಾಣ ಮಂಟಪ ವರೆಗೆ 12 ಮೀಟರ್‌ ಅಗಲದ ದ್ವಿಪಥ ರಸ್ತೆ ಕಾಮಗಾರಿ
ಶೇ.80 ಪೂರ್ಣಗೊಂಡಿದೆ. ಸುಕ್ಷೇತ್ರದ ತೋಟಗಾರಿಕೆ ಫಾರ್ಮ್ನ ಮುಂದಿನ ರಸ್ತೆ ಬದಿಯಲ್ಲಿ ಪುಟ್‌ಪಾತ್‌ ಗೆ ಕಾಬೋಲ್‌ ಟೈಲ್ಸ್‌ ಅಳವಡಿಸಲಾಗಿದೆ. ದೇವಸ್ಥಾನದ ಬಳಿ ರಸ್ತೆಯ ಮಧ್ಯ ಭಾಗದಲ್ಲಿ ವಿದ್ಯುತ್‌ ಕಂಬ ಅಳವಡಿಸುವುದು ಬಾಕಿ ಇದೆ.

ಎರಡನೇ ಪ್ಯಾಕೇಜ್‌ಗೆ ಗ್ರಹಣ: ಮೊದಲನೇ ಪ್ಯಾಕೇಜ್‌ ಕಾಮಗಾರಿಗೆ ಶೇ.90 ಮುಗಿದಿದೆ. ಎರಡನೇ ಪ್ಯಾಕೇಜ್‌ನ ಟೆಂಡರ್‌ ಪಡೆದು ಗುತ್ತಿಗೆದಾರರು ಐದಾರು ತಿಂಗಳು ನಂತರ ಕಾಮಗಾರಿ ಆರಂಭ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 150ಎಯಿಂದ ದೇವರಭೂಪುರ ಗ್ರಾಪಂ ಕಚೇರಿವರೆಗೆ 4 ಕಿ.ಮೀ. ರಸ್ತೆ ಅಭಿವೃದ್ಧಿ ಮಾಡಬೇಕಾಗಿದೆ. ಆದರೆ, ಮೆಟ್‌ಲಿಂಗ್‌ ಮಾಡಲು ರಸ್ತೆಯ ಒಂದು ಬದಿ ನೆಲ ಅಗೆದಿದ್ದಾರೆ. 12 ಮೀಟರ್‌ ರಸ್ತೆ ಅಗಲೀಕರಣದಿಂದ ರೈತರು ತಮ್ಮ
ಜಮೀನು ರಸ್ತೆಗೆ ಹೋಗುತ್ತೆ. ನಮಗೆ ಪರಿಹಾರ ನೀಡಿದ ನಂತರ ಕಾಮಗಾರಿ ಆರಂಭಿಸುವಂತೆ ಪಟ್ಟು ಹಿಡಿದಿದ್ದಾರೆ. ಇದನ್ನೇ ನೆಪವಾಗಿಸಿಕೊಂಡ ಗುತ್ತಿಗೆದಾರ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.

ಗಮನ ಹರಿಸದ ಅಧಿಕಾರಿಗಳು: ಅನೇಕ ವರ್ಷಗಳ ಬಳಿಕ ಅಮರೇಶ್ವರ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದೆ. ಆದರೆ, ಇದನ್ನು ಗ್ರಾಮಸ್ಥರ, ರೈತರ ಸಹಕಾರ ಪಡೆದು ರಸ್ತೆ ಕಾಮಗಾರಿ ಮುಗಿಸಬೇಕಾದ ಲೋಕೋಪಯೋಗಿ ಅಧಿಕಾರಿಗಳು, ನಿರ್ಲಕ್ಷ್ಯ ವಹಿಸಿದ್ದರಿಂದ ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದೆ. ಸುಸ್ಥಿತಿಯಲ್ಲಿದ್ದ ರಸ್ತೆ ಅಗೆದಿದ್ದರಿಂದ ಶ್ರಾವಣ ಮಾಸದ  ಪ್ರಯುಕ್ತ ಸುಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಭಕ್ತಾದಿಗಳು ಧೂಳಿನಲ್ಲಿ ಸಂಚರಿಸುವಂತಾಗಿದೆ. ಇನ್ನಾದರೂ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಇತ್ತ ಗಮನ ಹರಿಸುತ್ತಾರಾ? ಕಾದು ನೋಡಬೇಕು.

100 ಮೀಟರ್‌ ರಸ್ತೆಯಲ್ಲಿ ಮಾತ್ರ ರೈತ ತಕರಾರು ಇದೆ. ಇನ್ನುಳಿದ ಕಡೆಗಳಲ್ಲಿ ರಸ್ತೆ ಕಾಮಗಾರಿ ಆರಂಭಿಸಬೇಕಾಗಿತ್ತು. ಆದರೆ, ಇದನ್ನೆ ನೆಪವಾಗಿಸಿಕೊಂಡು ಗುತ್ತಿಗೆದಾರರು ಕಾಮಗಾರಿ ಆರಂಭ ಮಾಡುತ್ತಿಲ್ಲ. ಈಗಾಗಲೇ ಗುತ್ತಿಗೆದಾರರಿಗೆ ಎರಡು ಭಾರಿ ನೋಟಿಸ್‌ ಜಾರಿ ಮಾಡಲಾಗಿದೆ. ಬಳ್ಳಾರಿಯಲ್ಲಿ ಈಚೆಗೆ ನಡೆದ ಇಲಾಖೆ ಸಭೆಯಲ್ಲಿ ಮೇಲಧಿ ಕಾರಿಗಳ ಗಮನಕ್ಕೆ ತರಲಾಗಿದೆ. ಕೆಲಸ ಆರಂಭ ಮಾಡಿದರೆ ರೈತರ ಮನವೂಲಿಸುವ ಕೆಲಸ ಮಾಡುತ್ತೇವೆ.
*ಜಗದೇವ ಮೂತಿ, ಎಇಇ ಪಿಡಬ್ಲೂಡಿ, ಲಿಂಗಸುಗೂರು

ರೈತರು ರಸ್ತೆ ಕಾಮಗಾರಿಗೆ ಅಡ್ಡಿ ಪಡಿಸುತ್ತಿದ್ದು, ಪರಿಹಾರ ಕೇಳುತ್ತಿದ್ದಾರೆ. ಆದ ಕಾರಣ ಕಾಮಗಾರಿ ನಿಲ್ಲಿಸಲಾಗಿದೆ. ಶ್ರಾವಣ ಮಾಸ ಮುಗಿದ ನಂತರ ಸಂಸದರ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಂಡು ಕಾಮಗಾರಿ ಶುರು ಮಾಡುತ್ತೇವೆ.
ಅಬ್ರಾರ್‌ ಹುಸೇನ್‌, ಗುತ್ತಿಗೆದಾರ

*ಶಿವರಾಜ ಕೆಂಭಾವಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.