ಆಸ್ಪತ್ರೆ ಆವರಣದಲ್ಲಿ ಮಕ್ಕಳಿಗೆ ಸೀರೆ ತೊಟ್ಟಿಲು


Team Udayavani, Jan 14, 2022, 5:36 PM IST

22saree

ಸಿಂಧನೂರು: ಸರಕಾರಿ ಆಸ್ಪತ್ರೆಯಲ್ಲಿ ಮಹಿಳೆಯರಿಗಾಗಿ ನಡೆಸುವ ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆ ಶಿಬಿರಕ್ಕೆ ಬಂದ ವೇಳೆ ಹಸುಗೂಸುಗಳಿಗೆ ಆಸ್ಪತ್ರೆ ಆವರಣದ ಗಿಡಮರಗಳೇ ಆಸರೆಯಾಗುತ್ತಿವೆ.

ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಂದಿರನ್ನು ಶಸ್ತ್ರ ಚಿಕಿತ್ಸೆಗೆ ಕರೆದೊಯ್ದ ಬಳಿಕ ಜೊತೆಗೆ ಬಂದ ಸಂಬಂಧಿಕರು, ಪುಟ್ಟ ಕಂದಮ್ಮಗಳಿಗೆ ಸೂಕ್ತ ವ್ಯವಸ್ಥೆ ಇಲ್ಲವಾಗಿದೆ.

ಆಸ್ಪತ್ರೆಯೊಳಗೆ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಗೆ ಸಂಬಂಧಿಸಿ ಬೆಡ್‌ ಕೂಡ ನೀಡುತ್ತಿಲ್ಲ. ಸಹಜವಾಗಿಯೇ ಮಹಿಳೆಯರನ್ನು ಆಪರೇಷನ್‌ ಥೇಟರ್‌ಗೆ ಕರೆದುಕೊಂಡ ಬಳಿಕ, ಹಸುಗೂಸು ಸಮೇತ ಪಾಲಕರು ಆಸ್ಪತ್ರೆ ಆವರಣದಲ್ಲಿ ದಿನವೆಲ್ಲ ಕಾಯುವಂತಾಗಿದೆ.

ಸೀರೆಯ ತೊಟ್ಟಿಲು

ಹೆರಿಗೆಯಾ ನಾಲ್ಕೈದು ತಿಂಗಳ ಅವಧಿಯಲ್ಲಿ ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತದೆ. ಪುಟ್ಟ ಕೂಸಿನೊಂದಿಗೆ ತಾಯಂದಿರನ್ನು ಕರೆದುಕೊಂಡು ಬಂದ ಪಾಲಕರು, ಹಸುಗೂಸಿನೊಂದಿಗೆ ಕುಳಿತುಕೊಳ್ಳಲು ಆಸ್ಪತ್ರೆಯೊಳಗೆ ಜಾಗ ಇಲ್ಲದಂತಾಗಿದೆ. ಹೀಗಾಗಿ, ಪುಟ್ಟ ಕಂದಮ್ಮಗಳನ್ನು ಕರೆದುಕೊಂಡು ಹೊರಗಡೆ ಬಂದು ಆಸ್ಪತ್ರೆ ಆವರಣದ ಗಿಡಗಳಿಗೆ ಸೀರೆಯಿಂದ ತೊಟ್ಟಿಲು ಕಟ್ಟಲಾಗುತ್ತದೆ. ಮಕ್ಕಳನ್ನು ಹಾಕಿ, ಅದರಲ್ಲಿ ತೂಗುತ್ತಾ ದಿನವೆಲ್ಲ ಜಾಗರಣೆ ಮಾಡಬೇಕಿದೆ.

ಸೌಲಭ್ಯದತ್ತ ಗಮನವಿಲ್ಲ

ಸರಕಾರಿ ಆಸ್ಪತ್ರೆಯಲ್ಲಿ ಪ್ರತಿ ವಾರಕ್ಕೊಂದು ಈ ಶಿಬಿರ ನಡೆಸಲಾಗುತ್ತದೆ. ಡಾ| ನಾಗರಾಜ್‌ ಕಾಟ್ವಾ ನೇತೃತ್ವದ ತಂಡ ಉತ್ತಮವಾಗಿ ಸ್ಪಂದಿಸುತ್ತಿದೆ. ಸೌಲಭ್ಯದ ವಿಷಯದಲ್ಲಿ ಆಡಳಿತಾತ್ಮಕ ಸಮಸ್ಯೆ ಕಾಣಿಸಿದೆ. ಆರಂಭದಲ್ಲಿ 100ರಿಂದ 150 ಮಹಿಳೆಯರಿಗೆ ಒಂದೇ ಶಿಬಿರದಲ್ಲಿ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗುತ್ತಿತ್ತು. ಈ ಕ್ರಮದಿಂದ ಸುರಕ್ಷತೆ ಕೊರತೆ, ಮಹಿಳೆಯರಿಗೆ ತೊಂದರೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರಿಂಕೋರ್ಟ್‌ ಈ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಿತ್ತು. ಆ ಬಳಿಕ ವಾರಕ್ಕೊಮ್ಮೆ ನಡೆಯುವ ಶಿಬಿರದಲ್ಲಿ 30 ಮಹಿಳೆಯರಿಗೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ. ಸಂಖ್ಯೆ ಕಡಿಮೆ ಮಾಡಿದ ಮೇಲೂ ಸೌಲಭ್ಯ ಕಲ್ಪಿಸುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಳಗಡೆ ಹೋದರೆ ಮಗುವಿಗೆ ಗಾಳಿಯಿಲ್ಲ. ಅತ್ತಾಗ ಸಂತೈಸುವುದು ಕಷ್ಟವಾಗಿ ಗಿಡಕ್ಕೆ ಜೋಕಾಲಿ ಕಟ್ಟಲಾಗಿದೆ. ಆಸ್ಪತ್ರೆ ಒಳಗೆ ನಿಲ್ಲಲಿಕ್ಕೂ ಜಾಗವಿಲ್ಲ. ಇನ್ನೆಲ್ಲಿ ಕುಳಿತುಕೊಳ್ಳುವುದು. -ಹೆಸರು ಹೇಳಿಚ್ಛಿಸದ ಪಾಲಕರು, ಸಿಂಧನೂರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.