ರಾಜ್ಯ ಸರ್ಕಾರದ ವಿರುದ್ದ ಎಸ್ಡಿಪಿಐ ಪ್ರತಿಭಟನೆ
Team Udayavani, Apr 4, 2022, 2:54 PM IST
ರಾಯಚೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದು, ಜನರಲ್ಲಿ ದ್ವೇಷ ಭಾವನೆ ಹುಟ್ಟು ಹಾಕುತ್ತಿದೆ ಎಂದು ಆರೋಪಿಸಿ ಎಸ್ ಡಿಪಿಐ ಸಂಘಟನೆ ಸದಸ್ಯರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಭಾರತ ಬಹುಸಂಸ್ಕೃತಿಯುಳ್ಳ, ವೈವಿಧ್ಯತೆಯ ದೇಶವಾಗಿದೆ. ಇಲ್ಲಿ ಎಲ್ಲರೂ ಸೌಹಾರ್ದ, ಭಾವೈಕ್ಯತೆಯಿಂದ ಬಾಳುತ್ತಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತರೆಲ್ಲರೂ ಸಹೋದರ ಭಾವದಿಂದ ಅನ್ಯೋನತೆಯಿಂದ ಜೀವಿಸುತ್ತಿದ್ದಾರೆ. ಬಸವಣ್ಣ, ಸಂತ ಶಿಶುನಾಳ ಶರೀಫ, ಟಿಪ್ಪು ಸುಲ್ತಾನ್, ಸೂಫಿ ಸಂತರು ಸಾಮರಸ್ಯದ ಸಂದೇಶ ಸಾರಿದ್ದು, ಉತ್ತಮ ಸಮಾಜಕ್ಕೆ ದಾರಿ ದೀಪವಾಗಿದೆ. ಆದರೆ, ಸರ್ಕಾರವೇ ಕೋಮು ವಿಚಾರಗಳಿಗೆ ಪುಷ್ಟಿ ನೀಡಿ ಜನರಲ್ಲಿ ಧಾರ್ಮಿಕ ಸಂಘರ್ಷ ಮೂಡುವಂತೆ ಮಾಡುತ್ತಿದೆ ಎಂದರು.
ರಾಜ್ಯದಲ್ಲಿ ಹಿಜಾಬ್ ವಿವಾದ, ಹಲಾಲ್ ಮಾಂಸ ನಿಷೇಧ, ಮುಸ್ಲಿಂ ವ್ಯಾಪಾರಿಗಳಿಗೆ ಜಾತ್ರೆಗಳಲ್ಲಿ ನಿರ್ಬಂಧ ಸೇರಿ ಇತರೆ ವಿವಾದಗಳಿಂದ ಸಾಮರಸ್ಯ ಹಾಳು ಮಾಡಲಾಗುತ್ತಿದೆ. ಮುಸ್ಲಿಂರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಆರ್ಎಸ್ಎಸ್ ಮುಖಂಡರು ಮುಸ್ಲಿಮರ ಅಂಗಡಿಗಳಿಗೆ ದಾಳಿ ಮಾಡಿ ವ್ಯಾಪಾರಸ್ಥರ ಮೇಲೆ ಹಲಾಲ್ ಹೆಸರಿನಲ್ಲಿ ಹಲ್ಲೆ ಮಾಡುತ್ತಿದ್ದಾರೆ. ಬಿಜೆಪಿಯ ಶಾಸಕರು, ಸಂಸದರು, ಸಚಿವರು ಕೂಡ ಇದಕ್ಕೆ ಪುಷ್ಟಿ ನೀಡುವಂತೆ ಹೇಳಿಕೆಗಳನ್ನು ನೀಡಿ ಪ್ರಚೋದನೆ ನೀಡುತ್ತಿರುವುದು ಖಂಡನೀಯ ಎಂದರು.
ಜಿಲ್ಲಾಧ್ಯಕ್ಷ ತೌಸೀಫ್ ಅಹ್ಮದ್, ಸೈಯದ್ ಇಸಾಕ್, ಉಪಾಧ್ಯಕ್ಷ ಮತೀನ್ ಅನ್ಸಾರಿ, ಜಿಲಾನಿ ಪಾಷಾ, ಬಷೀರ್ ಅಹ್ಮದ್, ಪಾಷಾ ಮುದಗಲ್ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.