Sindhanur: ಬಸ್ ಗಳು ಅಪಘಾತ; ಓರ್ವ ಸಾವು; ಹಲವರಿಗೆ ಗಾಯ
Team Udayavani, Sep 8, 2024, 2:36 PM IST
ಸಿಂಧನೂರು: ಸರಕಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾದ ಘಟನೆ ತಾಲೂಕಿನ ಹಾರಾಪುರ ಗ್ರಾಮದ ಬಳಿ ಹೆದ್ದಾರಿಯಲ್ಲಿ ಸೆ.8ರ ಭಾನುವಾರ ಬೆಳಗ್ಗೆ ನಡೆದಿದೆ.
ಖಾಸಗಿ ಟ್ರಾವೆಲ್ಸ್ ನಿರ್ವಾಹಕ ಪುಂಡಲೀಕ (37) ಮೃತರು.
ಸರಕಾರಿ ಬಸ್ ಚಾಲಕ ಸೇರಿ 9 ಜನರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಯಾದಗಿರಿಗೆ ಹೊರಟಿದ್ದ ಸರಕಾರಿ ಬಸ್ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ಪ್ರಯಾಣಿಕರೊಬ್ಬರನ್ನು ಇಳಿಸಲು ಚಾಲಕ ಹಾರಾಪುರದಲ್ಲಿ ನಿಲ್ಲಿಸಿದ್ದಾನೆ. ಇದೇ ಸಮಯದಲ್ಲಿ ಕಲಬುರಗಿ ಕಡೆ ಹೊರಟಿದ್ದ ಖಾಸಗಿ ಟ್ರಾವೆಲ್ಸ್ನ ಬಸ್, ಸಾರಿಗೆ ಬಸ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಸಾರಿಗೆ ಬಸ್ ರಸ್ತೆ ಬದಿ ಉರುಳಿದ್ದು, ಹಿಂಬದಿ ಜಖಂಗೊಂಡಿದೆ. ಖಾಸಗಿ ಟ್ರಾವೆಲ್ಸ್ ಬಸ್ ಮುಂಬದಿ ನಜ್ಜುಗುಜ್ಜಾಗಿದೆ.
ಈ ಕುರಿತು ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ವೀರಾರೆಡ್ಡಿ.ಹೆಚ್, ಪಿಎಸ್ ಐ ಸುಜಾತಾ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.