Raichur: ಒಳ ಮೀಸಲಾತಿ ಜಾರಿಗಾಗಿ ಬಂದ್
Team Udayavani, Oct 3, 2024, 11:50 AM IST
ರಾಯಚೂರು: ಸುಪ್ರಿಂ ಕೋರ್ಟ್ ಆದೇಶದನ್ಚಯ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಮಾಡದೆ ರಾಜ್ಯ ಸರ್ಕಾರ ವಿಳಂಬ ಧೋರಣೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಆ.3ರ ಗುರುವಾರ ರಾಯಚೂರು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.
ನಗರದ ಕೇಂದ್ರ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ನೀಡಿದರು.
ಹೈದರಾಬಾದ್ ರಸ್ತೆಯಿಂದ ರಾಯಚೂರಿಗೆ ಬರುವ ಬಸ್ ಗಳನ್ನೂ ಹೊರವಲಯದ ಬೈಪಾಸ್ ರಸ್ತೆಯ ಮೂಲಕ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ನಗರದ ಬಸವೇಶ್ವರ ವೃತ್ತದಿಂದ ಬಸ್ ನಿಲ್ದಾಣಕ್ಕೆ ತೆರಳುವ ಮಾರ್ಗ ಬದಲಿಸಲಾಗಿದೆ. ನವೋದಯ ಕಾಲೇಜು, ಬಸವೇಶ್ವರ ವೃತ್ತ, ಸಾತ್ ಮೈಲ್ ಕ್ರಾಸ್ ಹಾಗೂ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ರ್ ಮಾಡಲಾಗಿದೆ.
ಕೇಂದ್ರ ಬಸ್ ನಿಲ್ದಾಣ, ಉಸ್ಮಾನಿಯಾ ಮಾರುಕಟ್ಟೆ ಪ್ರದೇಶದ ಸುತ್ತಮುತ್ತ ಸಂಚರಿಸಿ ವಾಣಿಜ್ಯ ಮಳಿಗೆಗಳನ್ನು ಬಂದ್ ಮಾಡುವಂತೆ ಪ್ರತಿಭಟನಾಕಾರರು ಮನವಿ ಮಾಡಿದರು.
ಕಳೆದ 30 ವರ್ಷಗಳಿಂದ ರಾಯಚೂರು ಜಿಲ್ಲೆಯಲ್ಲಿ ಆರಂಭವಾಗಿರುವ ಒಳ ಮೀಸಲಾತಿ ಜಾರಿ ಹೋರಾಟಕ್ಕೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಆದರೆ, ಒಳ ಮೀಸಲಾತಿ ಜಾರಿ ಮಾಡಲು ನ್ಯಾಯಾಲಯ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದು, ಇದನ್ನು ಜಾರಿ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತದೆ. ಸಿಎಂ ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ತಿಳಿಸಿದ್ದರು. ಆದರೆ, ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಜಾರಿಗೆ ಮುಂದಾಗುತ್ತಿಲ್ಲ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದರು.
ಸಿರವಾರ: ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸಿರವಾರ ಬಂದ್ ಕರೆ ನೀಡಿದ್ದು ಪಟ್ಟಣ ಸಂಪೂರ್ಣ ಸ್ತಬ್ಧಗೊಂಡಿದೆ.
ಆ.3ರ ಗುರುವಾರ ಬೆಳಗ್ಗೆಯಿಂದಲೇ ಅಂಗಡಿ- ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿದ್ದು, ವಾಹನ ಸಂಚಾರ ಸಂಪೂರ್ಣ ಬಂದಾಗಿದೆ.
ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚುವುದರ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಿಪಿಐ ಶಶಿಕಾಂತ ಎಂ., ಪಿಎಸ್ಐ ಅಮರೇಗೌಡ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ
ಸಿಂಧನೂರಲ್ಲಿ ಅಪಹರಿಸಲ್ಪಟ್ಟ ಮಹಾರಾಷ್ಟ್ರದ ನಾಲ್ವರು ವಿದ್ಯಾರ್ಥಿಗಳ ರಕ್ಷ ಣೆ; ಇಬ್ಬರ ಬಂಧನ
Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ
Sirwar: ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು
Maski: ಮೂತ್ರ ವಿಸರ್ಜನೆಗೆ ಶಾಲಾ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss Kannada 11: ಚೈತ್ರಾ ಕುಂದಾಪುರರನ್ನು ಹೊರಗಿಡಿ; ಭೋಜರಾಜ್ ಆಗ್ರಹ
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್ಯಾಲಿ
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.