ತಲಮಾರಿ ಗ್ರಾಮ ಸೀಲ್‌ಡೌನ್‌-ಜಿಲ್ಲಾಧಿಕಾರಿ ಭೇಟಿ


Team Udayavani, Aug 1, 2020, 2:37 PM IST

ತಲಮಾರಿ ಗ್ರಾಮ ಸೀಲ್‌ಡೌನ್‌-ಜಿಲ್ಲಾಧಿಕಾರಿ ಭೇಟಿ

ರಾಯಚೂರು: ತಾಲೂಕಿನ ತಲಮಾರಿ ಗ್ರಾಮದಲ್ಲಿ 70 ಕೋವಿಡ್ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟ ಕಾರಣ ಶುಕ್ರವಾರದಿಂದ 15 ದಿನ ಗ್ರಾಮವನ್ನು ಸೀಲ್‌ಡೌನ್‌ ಮಾಡಲಾಯಿತು.

ಗ್ರಾಮಕ್ಕೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತು. ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲಾಯಿತು. ತಲಮಾರಿ ಗ್ರಾಮಕ್ಕೆ ಬೇರೆ ಗ್ರಾಮಗಳ ಜನ ಪ್ರವೇಶಿಸದಂತೆ ತಡೆಯಬೇಕು. ಅದರಂತೆ ಗ್ರಾಮಸ್ಥರು ಹೊರ ಹೋಗದಂತೆ ತಿಳಿ ಹೇಳಲಾಯಿತು. ಕೃಷಿ ಚಟುವಟಿಕೆ ಬಿಟ್ಟು ಇನ್ನಿತರ ಚಟುವಟಿಕೆಗಳನ್ನು ಸಂಪೂರ್ಣ ನಿರ್ಬಂಧಿ ಸಬೇಕು ಎಂದು ಡಿಸಿ ಸೂಚಿಸಿದರು.

ಆಂಧ್ರಪ್ರದೇಶದ ಗಡಿ ಗ್ರಾಮವಾಗಿರುವ ಐಜ್‌ ಗ್ರಾಮದ ಪ್ರವೇಶ ನಿರ್ಬಂಧಿಸಬೇಕು. ತಲಮಾರಿ ಗ್ರಾಮದಲ್ಲಿ ಶೇ.100 ಬ್ಯಾರಿಕೇಡ್‌ ಅಳವಡಿಸಬೇಕು. ಕೋವಿಡ್‌-19 ಹೆಚ್ಚು ದೃಢಪಟ್ಟಿರುವ ಮನೆಗಳ ಅಕ್ಕಪಕ್ಕದಲ್ಲಿ ಕಟ್ಟಿಗೆ ಬಳಸಿ ತಡೆ ಒಡ್ಡಬೇಕು. ಒಟ್ಟಾರೆ ಓಡಾಟ ಸಂಪೂರ್ಣ ನಿರ್ಬಂ ಧಿಸಬೇಕು. ಕೃಷಿ ಯಂತ್ರೋಪಕರಣಗಳನ್ನು ಗ್ರಾಮದ ಹೊರಗಡೆ ಅಥವಾ ಕೃಷಿ ಜಮೀನಿನ ಬಳಿಯೇ ಇರಿಸಬೇಕು. ಅತ್ಯಂತ ತುರ್ತು ಅಥವಾ ಅನಿವಾರ್ಯವಿದ್ದಲ್ಲಿ ಮಾತ್ರ ಜನ ಓಡಾಡಬೇಕು. ಅದರಲ್ಲೂ ಪಾಸಿಟಿವ್‌ ಪ್ರಕರಣ ವರದಿಯಾದ ಮನೆಯವರು ಹೊರಗೆ ಬರಲೇಬೇಡಿ ಎಂದು ಸೂಚಿಸಲಾಯಿತು.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಕೆಮ್ಮು, ನೆಗಡಿ, ಜ್ವರ, ಉಸಿರಾಟದ ತೊಂದರೆ, ಮೈ-ಕೈ ನೋವು ಹಾಗೂ ತಲೆ ನೋವು ಕಂಡುಬಂದಲ್ಲಿ ರ್ಯಾಪಿಡ್‌ ಆಂಟಿಜೆನ್‌ ಪರೀಕ್ಷೆ ಕಡ್ಡಾಯವಾಗಿ ಮಾಡಬೇಕು. ಅದಕ್ಕಾಗಿ ಸಂಚಾರಿ ವಾಹನ ಬಳಸಿಕೊಳ್ಳಿ, ಅದಕ್ಕೆ ಅಗತ್ಯ ಇರುವ 500 ಕ್ಕೂ ಅಧಿಕ ಕಿಟ್‌ಗಳನ್ನು ಒದಗಿಸುವಂತೆ ಆರೋಗ್ಯಾಧಿಕಾರಿಗೆ ತಿಳಿಸಿದರು.

ತಲಮಾರಿ ಗ್ರಾಮದಲ್ಲಿ 16 ಕಂಟೈನ್‌ಮೆಂಟ್‌ ವಲಯಗಳನ್ನಾಗಿ ರಚಿಸಲಾಯಿತು. ಸಹಾಯಕ ಆಯುಕ್ತ ಸಂತೋಷ ಕಾಮನಗೌಡರ್‌, ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾ ಧಿಕಾರಿ ಹರಿಬಾಬು, ತಹಶೀಲ್ದಾರ್‌ ಡಾ.ಹಂಪಣ್ಣ ಸಜ್ಜನ್‌, ತಾಲೂಕು ಆರೋಗ್ಯಾಧಿಕಾರಿ ಡಾ.ಶಕೀರ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.