ಹೊಳೆ ತೊಂಡಿಹಾಳ ಹುಲಿಗೆಮ್ಮ ದೇವಿ ಜಾತ್ರೆಗೆ ಸಿದ್ಧತೆ

ಐದು ದಿನಗಳವರೆಗೆ ನಡೆಯುವ ಜಾತ್ರೋತ್ಸವ „ ಅನಿಷ್ಟ ಪದ್ಧತಿ ಆಚರಣೆ ತಡೆಗೆ ಐದು ತಂಡ ರಚಿಸಿದ ಸಹಾಯಕ ಆಯುಕ್ತರು

Team Udayavani, Jan 8, 2020, 12:04 PM IST

8-January-7

ಮುದಗಲ್ಲ: ಐದು ಜಿಲ್ಲೆಗಳ ಗಡಿ ಪ್ರದೇಶದಲ್ಲಿರುವ ಪ್ರಸಿದ್ಧ ಹೊಳೆ ತೊಂಡಿಹಾಳ ಗ್ರಾಮದ ಶ್ರೀ ಹುಲಿಗೇಮ್ಮ ದೇವಿ ಜಾತ್ರೆ ಜ.18, 19ರಂದು ನಡೆಯಲಿದ್ದು, ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.

ಕೃಷ್ಣಾ ನದಿ ದಡದಲ್ಲಿ ನೆಲೆಸಿರುವ ಹುಲಿಗೆಮ್ಮದೇವಿ ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಗಡಿ ಪ್ರದೇಶದ ಮಧ್ಯ ಬಸವರಾಜ ಜಲಸಾಗರ ನಿರ್ಮಿಸಲಾಗಿದೆ. ಈ ನದಿ ದಡದಲ್ಲಿ ನೆಲೆಸಿರುವ ಹುಲಿಗೆಮ್ಮದೇವಿಯನ್ನು ಐದು ಜಿಲ್ಲೆಗಳ ಸಾವಿರಾರು ಭಕ್ತರು ಆರಾಧಿಸುತ್ತಾರೆ.

ಐದು ತಂಡ ರಚನೆ: ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಭರದಿಂದ ಸಿದ್ಧತಾ ಕಾರ್ಯ ನಡೆಸುತ್ತಿದೆ. ಲಿಂಗಸುಗೂರು ಉಪವಿಭಾಗಾಧಿ ಕಾರಿ ಡಾ| ದಿಲೀಶ ಶಶಿ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿದ್ದು, ಜಾತ್ರಾ ಮಹೋತ್ಸವ ಅಚ್ಚುಕಟ್ಟಾಗಿ ನೆರವೇರಿಸಲು, ಜಾತ್ರೆಯಲ್ಲಿ ಅನಿಷ್ಠ ಪದ್ಧತಿಯಾದ ದೇವದಾಸಿ ಬಿಡುವ ಆಚರಣೆ ತಡೆಗೆ 5 ತಂಡಗಳನ್ನು ರಚಿಸಿದ್ದಾರೆ.

ಆಗ್ರಹ: ಜಾತ್ರೆಗೆ ಆಗಮಿಸುವ ಭಕ್ತರಿಗೆ ಮೂಲಸೌಕರ್ಯದ ಜೊತೆಗೆ ಎಲ್ಲೆಂದರಲ್ಲಿ ಬಯಲುಶೌಚ ಮಾಡುವುದನ್ನು ನಿಲ್ಲಿಸಲು ತಾತ್ಕಾಲಿಕ ಶೌಚಾಲಯ ನಿರ್ಮಿಸಬೇಕು. ನೂತನವಾಗಿ ದೇವಾಲಯ ನಿರ್ಮಾಣ ಹಂತದಲ್ಲಿರುವುದರಿಂದ ಭಕ್ತರಿಗಾಗುವ ತೊಂದರೆಯನ್ನು ತಾಲೂಕಾಡಳಿತ ತಪ್ಪಿಸಬೇಕಿದೆ. ತೆಂಗಿನಕಾಯಿ ಒಡೆಯುವ ಸ್ಥಳವನ್ನು ಪ್ರತ್ಯೇಕಿಸಬೇಕು. ದೇವಿ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ರಾತ್ರಿ ಮಹಿಳೆಯರಿಗೆ ದೇವರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಬೀದಿ ದೀಪ, ರಸ್ತೆ ಸುಧಾರಣೆ ಸೇರಿದಂತೆ ಶೌಚಾಲಯ, ಪ್ರಥಮ ಚಿಕಿತ್ಸೆಗೆ ಅನೂಕೂಲ ಕಲ್ಪಿಸಬೇಕು. ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಬೇಕು. ಸ್ವಚ್ಛತೆಗೆ ಕಾಪಾಡಬೇಕು. ಪ್ರಾಣಿ ಬಲಿ ತಡೆಯಬೇಕು. ಮದ್ಯ ಮಾರಾಟ ನಿಷೇಧಿಸಬೇಕೆಂದು ಕರವೇ ಅಧ್ಯಕ್ಷ ಬಾಲಪ್ಪ ಕನೇರಿ ಸೇರಿ ಭಕ್ತರು ಆಗ್ರಹಿಸಿದ್ದಾರೆ.

ಕಾರ್ಯಕ್ರಮಗಳೇನು..
ತೊಂಡಿಹಾಳ ಗ್ರಾಮದ ಶ್ರೀ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಅಂಗವಾಗಿ ವಿಶೇಷ ಕಾರ್ಯಕ್ರಮ ನಡೆಯುತ್ತವೆ. ಜ.14ರಂದು ದೇವಿಗೆ ಕಂಕಣ ಕಟ್ಟುವುದು. 15, 16ರಂದು ಪಲ್ಲಕಿ ಉತ್ಸವ, 17ರಂದು ಸಂಜೆ 6 ಗಂಟೆಗೆ ಗ್ರಾಮ ದೇವತೆ ಗಂಗಾಸ್ಥಳಕ್ಕೆ ಹೋಗುವುದು, ಚಿನ್ನಾಪುರದಿಂದ ಶ್ರೀ ಹುಲಿಗೆಮ್ಮದೇವಿ ತೊಂಡಿಹಾಳ ಗ್ರಾಮಕ್ಕೆ ಆಗಮನ, 18ರಂದು ಶನಿವಾರ ಬೆಳಗ್ಗೆ 8 ಗಂಟೆಗೆ ಅಕ್ಕಿಪಾಯಸ ಹಾಗೂ ಸಂಜೆ 6 ಗಂಟೆಗೆ ಹಲ್ಕಾವಟಗಿ ಗ್ರಾಮದ ಸದ್ಬಕ್ತರಿಂದ ಉಚ್ಛಾಯೋತ್ಸವ ಕಳಸ ಆಗಮಿಸುವುದು.

19ರಂದು ಮುಂಜಾನೆ 8ಘಂಟೆಗೆ ಅಗ್ನಿ ಹಾಯುವುದು, ಸಂಜೆ 6 ಗಂಟೆಗೆ ಮಹಾರಥೋತ್ಸವ ನಡೆಯಲಿದೆ. ಐದು ದಿನಗಳವರೆಗೆ ನಡೆಯುವ ಜಾತ್ರೆಯಲ್ಲಿ ನಿತ್ಯ ಸಾವಿರಾರು ಭಕ್ತರು ಭಾಗವಹಿಸುತ್ತಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೆ ಸುಸೂತ್ರವಾಗಿ ನಡೆಯಲಿದೆ. ಅನಿಷ್ಠ ಪದ್ಧತಿ ಆಚರಣೆ ನಿಷೇಧಕ್ಕೆ ಹಾಗೂ ಭಕ್ತರಿಗೆ ಸಕಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಡಾ| ದಿಲೀಶ ಶಶಿ,
ಸಹಾಯಕ ಆಯುಕ್ತರು, ಲಿಂಗಸುಗೂರು

ದೇವಪ್ಪ ರಾಠೊಡ

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

3-maski

Maski: ಮಾಂಸದೂಟ ಸೇವಿಸಿ ಮೂವರು ಅಸ್ವಸ್ಥ

1-trfff

Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.