Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು
Team Udayavani, Oct 15, 2024, 5:58 PM IST
ರಾಯಚೂರು: ಬೃಹತ್ ಬಂಡೆಗಲ್ಲು ಉರುಳಿ ಬಿದ್ದು ಇಬ್ಬರು ಬಾಲಕರು, ಮತ್ತೊಬ್ಬ ಯುವಕ ಮೃತಪಟ್ಟ ಧಾರುಣ ಘಟನೆ ಜಿಲ್ಲೆಯ ಹಟ್ಟಿ ಸಮೀಪದ ಗೌಡೂರು ತಾಂಡಾದಲ್ಲಿ ಮಂಗಳವಾರ (ಅ.15) ಜರುಗಿದೆ.
ಮೂರನೇ ತರಗತಿ ವಿದ್ಯಾರ್ಥಿಗಳಾದ ಮಂಜುನಾಥ, ವೈಶಾಲಿ ಸ್ಥಳದಲ್ಲಿ ಮೃತಪಟ್ಟಿದ್ದು, ರಘು (23) ಲಿಂಗಸಗೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶಾಲೆ ರಜೆ ಇರುವ ಹಿನ್ನೆಲೆಯಲ್ಲಿ ಪೋಷಕರ ಜೊತೆಗೆ ಮಕ್ಕಳು ಜಮೀನಿಗೆ ಹೋಗಿದ್ದರು. ಜಮೀನು ಬದಿಯಲ್ಲಿ ಹಾಕಿದ ಕಲ್ಲು ಬಂಡೆಗಳ ಸುತ್ತಮುತ್ತ ಆಟವಾಡುತ್ತಿದ್ದರು. ಈ ವೇಳೆ ಕಲ್ಲು ಬಡೆ ಜಾರಿ ಬಿದ್ದಿದೆ.
ಮಳೆಯಿಂದ ನೆನೆದು ಮಣ್ಣು ಕುಸಿತಗೊಂಡು ಬಂಡೆ ಉರುಳಿದೆ ಎಂದು ಹೇಳಲಾಗುತ್ತಿದೆ. ಮಕ್ಕಳ ನರಳಾಟ ಕೇಳಿ ಪಾಲಕರು ಓಡಿಬಂದಿದ್ದಾರೆ. ಆದರೆ, ಬೃಹತ್ ಬಂಡೆ ಸರಿಸಲಾಗದೆ ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಜಮೀನಿನಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Valmiki Nigama: ಹಣ ದುರ್ಬಳಕೆಯಾದರೂ ಈ ವರ್ಷದ ಅನುದಾನ ಕೊಡಲು ಸೂಚಿಸಿರುವೆ: ಸಿದ್ದರಾಮಯ್ಯ
Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ
Rain; ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ
Santhebennur: 2 ಸಾವಿರ ರೂ ಲಂಚಕ್ಕೆ ಬೇಡಿಕೆ; ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ
ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ ಹೋರಾಟ: ಪಂಚಮಸಾಲಿ ಶ್ರೀ
MUST WATCH
ಹೊಸ ಸೇರ್ಪಡೆ
Channapatna: ಬಿಜೆಪಿ ಕಚೇರಿಯಲ್ಲಿದ್ದ ದೇವೇಗೌಡ, ಎಚ್ಡಿಕೆ ಬ್ಯಾನರ್ ತೆರವು
Yadagiri: ಸಿಡಿಲು ಬಡಿದು ರೈತ ಸಾವು
Panaji: ದೀಪಾವಳಿಗೆ ಸಿಗಲಿದೆ ಗೋವಾ ಜನರಿಗೆ ಗಿಫ್ಟ್
Valmiki Nigama: ಹಣ ದುರ್ಬಳಕೆಯಾದರೂ ಈ ವರ್ಷದ ಅನುದಾನ ಕೊಡಲು ಸೂಚಿಸಿರುವೆ: ಸಿದ್ದರಾಮಯ್ಯ
Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.