ಬೇಸಿಗೆ ಮುನ್ನವೇ ನೀರಿನ ಬವಣೆ ಆರಂಭ

ಲಿಂಗಖಾನದೊಡ್ಡಿಯಲ್ಲಿ ನೀರಿಗಾಗಿ ಪರದಾಟ! ­ಕಳೆದ 6 ವರ್ಷದಿಂದ ನೀರಿನದ್ದೇ ಸ‌ಮಸ್ಯೆ

Team Udayavani, Mar 14, 2021, 5:53 PM IST

water problem

ರಾಯಚೂರು: ಬಿಸಿಲ ನಾಡಾದ ಜಿಲ್ಲೆಯಲ್ಲಿ ಬೇಸಿಗೆ ಬಂದರೆ ಮೊದಲು ಶುರವಾಗುವ ಸಮಸ್ಯೆ ನೀರಿನದ್ದು. ಆದರೆ, ಇನ್ನೂ ಬೇಸಿಗೆ ಶುರುವಾಗುವ ಮುನ್ನವೇ ತಾಲೂಕಿನ ಲಿಂಗಖಾನದೊಡ್ಡಿಯಲ್ಲಿ ನೀರಿನ ಬವಣೆ ಶುರುವಾಗಿದ್ದು, ಗ್ರಾಮದ ಮಹಿಳೆಯರು ಪರದಾಡುವಂತಾಗಿದೆ.

ಗ್ರಾಮಸ್ಥರು ಕುಡಿವ ನೀರಿಗಾಗಿ ಕಿ.ಮೀ ದೂರ ಸಾಗಿ ನೀರು ತರುವ ದಯನೀಯ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಆರು ವರ್ಷದಿಂದ ಈ ಗ್ರಾಮಸ್ಥರಿಗೆ ಕುಡಿವ ನೀರಿನದ್ದೇ ಸಮಸ್ಯೆ. ಅದರಲ್ಲೂ ಬೇಸಿಗೆ ಬಂದರೆ ಇಲ್ಲಿನ ಜನರಿಗೆ ಆತಂಕ ಇಮ್ಮಡಿಗೊಳ್ಳುತ್ತದೆ. ಅನೇಕ ವರ್ಷಗಳಿಂದ ಗ್ರಾಮದ ಸಮಸ್ಯೆ ಹೇಳಿಕೊಂಡರೂ ಸಂಬಂಧಿ ಸಿದವರು ಮಾತ್ರ ಸ್ಪಂದನೆ ನೀಡುತ್ತಿಲ್ಲ. ಇಂದಿಗೂ ಗ್ರಾಮದಲ್ಲೇ ಇದೇ ಪರಿಸ್ಥಿತಿ ಇದೆ. ಈ ಮುಂಚೆ ಗ್ರಾಮದಲ್ಲಿ ನೀರಿನ ಸೌಲಭ್ಯವಿತ್ತು. ಆದರೆ, ಈಗ ನೀರೇ ಬರುತ್ತಿಲ್ಲ. ಇದರಿಂದ ಬಳಕೆಗೂ ನೀರು ತರಲು ಪರದಾಡುವಂತಾಗಿದೆ.

ಕುಡಿವ ನೀರಿನದ್ದೇ ಸಮಸ್ಯೆಯಾಗಿದೆ. ನಲ್ಲಿಗಳ ಸೌಲಭ್ಯ ಇದ್ದರೂ ಸರಿಯಾಗಿ ನೀರು ಬರುತ್ತಿಲ್ಲ. ಕೆಲವರು ಬೈಕ್‌ ಗಳ ಮೇಲೆ ನಾಲ್ಕು ಕೊಡಗಳನ್ನು ತೆಗೆದುಕೊಂಡು ಬರುತ್ತಾರೆ. ಆದರೆ, ಬೈಕ್‌ ಇಲ್ಲದವರು, ಮನೆಯಲ್ಲಿ ಪುರುಷರಿಲ್ಲದವರಿಗೆ ಮಾತ್ರ ಸಮಸ್ಯೆ ತಪ್ಪದು. ಅದರಲ್ಲೂ ಕೂಲಿ ಕೆಲಸ ಮಾಡಿಕೊಂಡು ಬರುವ ಮಹಿಳೆಯರಿಗೆ ನೀರಿನದ್ದೇ ತಲೆನೋವು. ಈ ಮುಂಚೆ ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಈವರೆಗೂ ಸಮಸ್ಯೆಗೆ ಇತಿ ಹಾಡಿಲ್ಲ. ಜಲಜೀವನ್‌ ಮಿಷನ್‌ ಯೋಜನೆಯಡಿ ಮನೆ ಮನೆಗೆ ನಲ್ಲಿಗಳ ಸಂಪರ್ಕ ಮಾಡುವ ಯೋಜನೆ ಶುರುವಾಗಿದೆ. ಆದರೆ, ಅದಿನ್ನೂ ಗ್ರಾಮಕ್ಕೆ ಕಾಲಿಟ್ಟಿಲ್ಲ.

ಈ ಹಿಂದೆ ನಲ್ಲಿಗಳ ಸಂಪರ್ಕ ಕಲ್ಪಿಸಿದ್ದು, ನೀರು ಕೂಡ ಬರುತ್ತಿತ್ತು. ಕೆಲ ವರ್ಷಗಳಿಂದ ಅದು ನಿಂತು ಹೋಗಿದೆ. ಬೇಸಿಗೆ ಶುರುವಾದರೆ ಇಲ್ಲಿನ ಮಹಿಳೆಯರಿಗೆ ಹೊಣೆ ಹೆಚ್ಚಾಗಲಿದೆ. ಕಿಮೀಗಟ್ಟಲೇ ಸಾಗಿ ಬೋರ್‌ವೆಲ್‌ಗ‌ಳಿಂದ ನೀರು ತರಬೇಕಿದೆ. ಗ್ರಾಮದಲ್ಲಿ ಎರಡು ಬೋರ್‌ಗಳಿದ್ದು ನೀರು ಬರುತ್ತಿಲ್ಲ. ಇರುವ ಒಂದೇ ಬೋರ್‌ವೆಲ್‌ನಲ್ಲಿ ಸಾಲುಗಟ್ಟಿ ನೀರು ಪಡೆಯಬೇಕು. ಗ್ರಾಮದಲ್ಲಿ ಸಾವಿರಕ್ಕೂ ಹೆಚ್ಚಿನ ಜನರು ವಾಸಿಸುತ್ತಿದ್ದು, ಕೃಷಿಕರು, ಕೂಲಿ ಕಾರ್ಮಿಕರೇ ಹೆಚ್ಚಾಗಿದ್ದಾರೆ. ಕೂಲಿ ಕೆಲಸ ಮಾಡುವುದಲ್ಲದೇ ನೀರಿಗೂ ಪರದಾಡುವುದೇ ನಿತ್ಯ ಕಾಯಕವಾಗಿದೆ.

ಟಾಪ್ ನ್ಯೂಸ್

KJ-Goerge

Pending: ಸರಕಾರಿ ಕಚೇರಿಗಳ 6 ಸಾವಿರ ಕೋಟಿ ವಿದ್ಯುತ್‌ ಬಿಲ್‌ ಬಾಕಿ: ಸಚಿವ ಕೆ.ಜೆ.ಜಾರ್ಜ್‌

Udupi: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಯಶ್‌ಪಾಲ್‌

Udupi: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಯಶ್‌ಪಾಲ್‌

1-prayag

Mahakumbh; ಪ್ರಯಾಗ್‌ರಾಜ್‌ ಸಂಗಮ್‌ ನಿಲ್ದಾಣ ಫೆ.28ರ ವರೆಗೆ ಬಂದ್‌

1-us

ಹಾವು, ಮೊಸಳೆಗಳಿದ್ದ ಹಾದಿಯಲ್ಲಿ ದಿನಕ್ಕೆ 12 ಗಂಟೆ “ಅಕ್ರಮ’ ಪಯಣ

IND VS PAK

Champions Trophy; ಕರಾಚಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಭಾರತದ ತ್ರಿವರ್ಣ ಧ್ವಜವಿಲ್ಲ?

1-adani

Adani ಕಂಪೆನಿಯಿಂದ ಚಿಕ್ಕ ರಾಕೆಟ್‌ ಉತ್ಪಾದನೆ?

Hardik Pandya

IPL ಮೊದಲ ಪಂದ್ಯದಲ್ಲೇ ನಿಷೇಧಕ್ಕೊಳಗಾಗುವ ಹಾರ್ದಿಕ್‌ ಪಾಂಡ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KJ-Goerge

Pending: ಸರಕಾರಿ ಕಚೇರಿಗಳ 6 ಸಾವಿರ ಕೋಟಿ ವಿದ್ಯುತ್‌ ಬಿಲ್‌ ಬಾಕಿ: ಸಚಿವ ಕೆ.ಜೆ.ಜಾರ್ಜ್‌

Udupi: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಯಶ್‌ಪಾಲ್‌

Udupi: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಯಶ್‌ಪಾಲ್‌

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

Bantwal: ಬೋಳಂತೂರು ದರೋಡೆ ಪ್ರಕರಣ; 7 ಮಂದಿ ಸೆರೆಯಾದರೂ ಸಿಕ್ಕಿದ್ದು 5 ಲ.ರೂ. ಮಾತ್ರ

Bantwal: ಬೋಳಂತೂರು ದರೋಡೆ ಪ್ರಕರಣ; 7 ಮಂದಿ ಸೆರೆಯಾದರೂ ಸಿಕ್ಕಿದ್ದು 5 ಲ.ರೂ. ಮಾತ್ರ

prahlad-joshji

ಕೇಂದ್ರದಿಂದ ಅಕ್ಕಿ ಕೊಡಲು ಸಿದ್ಧವಿದ್ದರೂ ರಾಜ್ಯ ಸರಕಾರ ಖರೀದಿಸುತ್ತಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

KJ-Goerge

Pending: ಸರಕಾರಿ ಕಚೇರಿಗಳ 6 ಸಾವಿರ ಕೋಟಿ ವಿದ್ಯುತ್‌ ಬಿಲ್‌ ಬಾಕಿ: ಸಚಿವ ಕೆ.ಜೆ.ಜಾರ್ಜ್‌

Udupi: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಯಶ್‌ಪಾಲ್‌

Udupi: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಯಶ್‌ಪಾಲ್‌

1-prayag

Mahakumbh; ಪ್ರಯಾಗ್‌ರಾಜ್‌ ಸಂಗಮ್‌ ನಿಲ್ದಾಣ ಫೆ.28ರ ವರೆಗೆ ಬಂದ್‌

1-us

ಹಾವು, ಮೊಸಳೆಗಳಿದ್ದ ಹಾದಿಯಲ್ಲಿ ದಿನಕ್ಕೆ 12 ಗಂಟೆ “ಅಕ್ರಮ’ ಪಯಣ

IND VS PAK

Champions Trophy; ಕರಾಚಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಭಾರತದ ತ್ರಿವರ್ಣ ಧ್ವಜವಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.