ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ಹಿಂಪಡೆಯಲಿ
Team Udayavani, Jul 23, 2022, 3:47 PM IST
ರಾಯಚೂರು: ಆಹಾರ ಪದಾರ್ಥ ಹಾಗೂ ಅಗತ್ಯ ವಸ್ತುಗಳ ಮೇಲೆ ಜಿಎಸ್ಟಿ ವಿ ಧಿಸಿರುವ ಕ್ರಮವನ್ನು ಖಂಡಿಸಿ ಶುಕ್ರವಾರ ಎಸ್ಯುಸಿಐ(ಸಿ) ಸಂಘಟನೆ ಕಾರ್ಯಕರ್ತರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಎಸ್ಟಿ ಪ್ರತಿಯ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಬಳಿಕ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ದಿನಬಳಕೆ ವಸ್ತುಗಳ ಮೇಲೆಯೂ ಶೇ.5ರಷ್ಟು ತೆರಿಗೆ ವಿಧಿಸಿದ ಕ್ರಮ ಸರಿಯಲ್ಲ. ಜನರಿಗೆ ಬೆಲೆ ಏರಿಕೆ ಸಮಸ್ಯೆಯಿಂದ ಹೊರಬರಲು ಆಗುತ್ತಿಲ್ಲ. ಜನರ ತಲಾದಾಯ ಮಾತ್ರ ಹೆಚ್ಚಾಗಿಲ್ಲ. ಪ್ರತಿ ವಸ್ತುವಿನ ಮೇಲೆ ಜಿಎಸ್ಟಿ ಹಾಕಿದರೆ ಬಡವರು ಏನಾಗಬೇಕು ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ವ್ಯಾಪಾರದಲ್ಲೂ ಕಾರ್ಪೋರೇಟ್ ಕಂಪೆನಿಗಳ ಪರ ಯೋಚಿಸುತ್ತಿದೆ. ಕೂಡಲೇ ಈ ತೆರಿಗೆ ರದ್ದುಗೊಳಿಸಬೇಕು. ಇಲ್ಲವಾದರೆ ಇನ್ನೂ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಂಘಟನೆ ಮುಖಂಡರಾದ ಮಹೇಶ ಚೀಕಲಪರ್ವಿ, ಎನ್.ಎಸ್. ವೀರೇಶ, ಅಣ್ಣಪ್ಪ, ಮಲ್ಲನಗೌಡ, ಕಾರ್ತಿಕ, ಹಯ್ನಾಳಪ್ಪ, ಪೀರಸಾಬ್, ವಿನೋದ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ
Ratan Tata; ಅಡುಗೆಯವರು, ನಾಯಿಗೂ ವಿಲ್ ಬರೆದಿರುವ ಟಾಟಾ!
Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ
T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್ ವಿಜಯ್ಕುಮಾರ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.