
ಜನ ಸೇವಕನಾಗಿ ಕೆಲಸ ಮಾಡುವೆ: ಶಾಸಕ ನಾಯಕ
Team Udayavani, Apr 26, 2022, 2:37 PM IST

ಸಿರವಾರ: ಚುನಾವಣೆ ಪೂರ್ವದಲ್ಲಿ ತಿಳಿಸಿದಂತೆ ನಾಯಕರಾಗಿರದೇ ಜನಗಳ ಸೇವಕನಾಗಿ ಕೆಲಸ ಮಾಡುತ್ತಿರುವೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಪಟ್ಟಣದಲ್ಲಿ ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಜನತಾ ಜಲಧಾರೆ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜೆಡಿಎಸ್ ಅಧಿಕಾರದಲ್ಲಿದ್ದಾಗ ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಮಾಡಿದರು. 5 ವರ್ಷದಲ್ಲಿ ಒಬ್ಬ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ. ದೇವೇಗೌಡರಿಂದ ದೇವದುರ್ಗ, ಲಿಂಗಸುಗೂರು, ಸುರಪುರ, ಶಾಹಪೂರ ಇನ್ನೂ ಅನೇಕ ತಾಲೂಕುಗಳು ನೀರಾವರಿಯಾಗಿವೆ ಎಂದರು.
ತುಂಗಭದ್ರಾ ಜಲಾಶಯ 30 ಟಿಎಂಸಿ ಅಡಿ ಹೂಳು ತುಂಬಿದರಿಂದ ಸಮನಾಂತರ ಜಲಾಶಯ ನಿರ್ಮಾಣ ಮಾಡುವಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಕಾಲಹರಣ ಮಾಡುತ್ತಿವೆ. ಜೆಡಿಎಸ್ ಪೂರ್ಣಬಹುಮತ ನೀಡಿದರೆ 5 ವರ್ಷದಲ್ಲಿ ನವಲಿ ಜಲಾಶಯ ನಿರ್ಮಾಣ ಮಾಡಿ ಪೂರ್ಣಗೊಳಿಸುವ ಬಯಕೆ ಹೊಂದಿದ್ದಾರೆ. ಪಟ್ಟಣದ ಅಭಿವೃದ್ಧಿಗೆ ಕೋಟ್ಯಂತರ ಅನುದಾನ ತಂದಿದ್ದು, ಡಿವೈಡರ್, ಬಸ್ ನಿಲ್ದಾಣ ಕಾಮಗಾರಿ ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕ್ರೀಡಾಂಗಣ, ಮಿನಿ ವಿಧಾನಸೌಧ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದರು.
ಜಿಪಂ ಮಾಜಿ ಸದಸ್ಯ ಮಹಾಂತೇಶ ಪಾಟೀಲ್ ಅತ್ತನೂರು, ಜೆಡಿಎಸ್ ಮಾನ್ವಿ ತಾಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಬಲ್ಲಟಗಿ, ಹಿರಿಯ ಮುಖಂಡ ಜಿ.ಲೋಕರೇಡ್ಡಿ, ಹಿಂದುಳಿದ ವರ್ಗಗಳ ಅಧ್ಯಕ್ಷ ಜಂಬುನಾಥ ಯಾದವ್, ಪಿ.ರವಿಕುಮಾರ ವಕೀಲ ಮಾತನಾಡಿದರು. ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ಚಂದ್ರಶೇಖರಯ್ಯ ಸ್ವಾಮಿ, ಈಶಪ್ಪ ಹೂಗಾರ, ಕಾಶಿನಾಥ ಸರೋದೆ, ವಿಜಯಲಕ್ಷ್ಮೀ ಆದೆಪ್ಪ, ನಾಗರಾಜಗೌಡ, ದಾನಪ್ಪ, ಆಂಜನೇಯ ಬಿಚ್ಚಾಲಿ, ಎಂ.ಪ್ರಕಾಶ, ಗ್ಯಾನಪ್ಪ, ಯಲ್ಲಪ್ಪದೊರೆ, ಚಂದ್ರಶೇಖರ ಯಲ್ದರ್ತಿ, ಅರಳಪ್ಪ ಯದಲದಿನ್ನಿ, ಬಂದೇನವಾಜ್, ನಾಗರಾಜ, ಏಸುಮಿತ್ರ, ಹನುಮಂತ, ರವಿಗೌಡ ಜಕ್ಕಲದಿನ್ನಿ, ರಾಜೇಶ ನಾಯಕ ನವಲಕಲ್, ಆದೇಪ್ಪ ಸಾಹುಕಾರ, ಶಾಂತಪ್ಪ ಪಿತಗಲ್ ಇತರರು ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.