![Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು](https://www.udayavani.com/wp-content/uploads/2024/12/road-roller-415x233.jpg)
ದೇವದುರ್ಗ ಸಂತೆಯಲ್ಲಿ ಕುಡಿಯುವ ನೀರಿನದ್ದೇ ಚಿಂತೆ!
Team Udayavani, Mar 17, 2019, 11:51 AM IST
![ray.jpg](https://www.udayavani.com/wp-content/uploads/2019/03/17/ray.jpg)
ದೇವದುರ್ಗ: ಪಟ್ಟಣದಲ್ಲಿ ಮಿನಿ ವಿಧಾನಸೌಧದ ಎದುರಿನ ಆವರಣದಲ್ಲಿ ಶನಿವಾರ ನಡೆಯುವ ವಾರದ ಸಂತೆಯಲ್ಲಿ ಕರ ಪಾವತಿಸಿದರೂ ವ್ಯಾಪಾರಸ್ಥರಿಗೆ ಕುಡಿಯುವ ನೀರು, ಮೂತ್ರಾಲಯದಂತಹ ಕನಿಷ್ಠ ಸೌಲಭ್ಯಗಳು ಮರೀಚಿಕೆಯಾಗಿವೆ. ಪಟ್ಟಣದಲ್ಲಿ ಶನಿವಾರ ನಡೆಯುವ ವಾರದ ಸಂತೆ ಕರ ವಸೂಲಿ ಟೆಂಡರ್ ಕಳೆದ ವಾರ ಮುಗಿದ್ದು, 7 ಲಕ್ಷ 3 ಸಾವಿರ ರೂ.ಗೆ ಟೆಂಡರ್ ಆಗಿದೆ.
ಕರ ಹೆಚ್ಚಳ: ವಾರದ ಶನಿವಾರ ಸಂತೆಯಲ್ಲಿ ಒಂದೊಂದು ರೀತಿಯ ವ್ಯಾಪಾರಕ್ಕೆ ಒಂದೊಂದು ರೀತಿ ಕರ ನಿಗದಿ ಮಾಡಲಾಗಿದೆ. ಕರ ಶುಲ್ಕ ಹೆಚ್ಚಳವಾದರೂ ವ್ಯಾಪಾರಸ್ಥರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ತರಕಾರಿ ಮಾರಾಟಗಾರರಿಗೆ 20 ರೂ. ಬಟ್ಟೆ ವ್ಯಾಪಾರಿಗಳಿಗೆ 40 ರೂ., ಜಿಲ್ಲೆಯಿಂದ ತರಕಾರಿ ತರುವ ವಾಹನಕ್ಕೆ 50 ರೂ., ಕಾಳು ಕಡಿ ವ್ಯಾಪಾರಸ್ಥರಿಗೆ 30 ರೂ. ಶುಲ್ಕ ವಿಧಿಸಲಾಗುತ್ತಿದೆ. ಜಿಲ್ಲೆಯಲ್ಲೇ ದೇವದುರ್ಗ ಪಟ್ಟಣದಲ್ಲಿ ನಡೆಯುವ ವಾರದ ಶನಿವಾರ ಸಂತೆ ಪ್ರಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಸುತ್ತಲಿನ ನೂರಾರು
ಹಳ್ಳಿಗಳಿಂದ ಸಾವಿರಾರೂ ರೈತರು, ವ್ಯಾಪಾರಸ್ಥರು ಸಂತೆಗೆ ಆಗಮಿಸುತ್ತಾರೆ. ಬಯಲಿನಲ್ಲಿ ಸಂತೆ ನಡೆಯುವುದರಿಂದ ವ್ಯಾಪಾರಸ್ಥರಿಗೆ ನೆರಳಿನ ಸೌಲಭ್ಯವಿಲ್ಲ. ಬೆಳಗ್ಗೆಯಿಂದ ಸಂಜೆಯವರೆಗೆ ಸುಡು ಬಿಸಿಲಿನಲ್ಲೇ ವ್ಯಾಪಾರ ವಹಿವಾಟು ನಡೆಸಬೇಕಿದೆ. ಬಿಸಿಲಲ್ಲಿ ವ್ಯಾಪಾರ ಮಾಡುವ ವ್ಯಾಪಾರಸ್ಥರಿಗೆ, ಗ್ರಾಹಕರಿಗೆ ಇಲ್ಲಿ ಕನಿಷ್ಠ ಕುಡಿಯುವ ನೀರಿನ ಸೌಲಭ್ಯವನ್ನೂ ಕಲ್ಪಿಸಿಲ್ಲ.
ನೀರಿಗಾಗಿ ಅಲೆದಾಟ: ಸಂತೆ ಸ್ಥಳದಲ್ಲಿ ನೀರಿನ ಸೌಲಭ್ಯವಿಲ್ಲದ್ದರಿಂದ ವ್ಯಾಪಾರಸ್ಥರು ಹೋಟೆಲ್, ಖಾನಾವಳಿಗಳ ಮೊರೆ ಹೋಗುವಂತಾಗಿದೆ. ಪದೇಪದೇ ನೀರಿಗೆ ಹೋದರೆ ಹೋದರೆ ನಮಗೇ ನೀರಿಲ್ಲ, ನಿಮಗೆಲ್ಲಿಂದ ತರುವುದು ಎಂದು ಕೇಳುತ್ತಾರೆ. ಹೀಗಾಗಿ ಕೆಲ ವ್ಯಾಪಾರಸ್ಥರು ಹಣ ಕೊಟ್ಟು ನೀರಿನ ಪಾಕೀಟು, ಬಾಟಲಿಗಳನ್ನು ಖರೀದಿಸಿ ನೀರು ಕುಡಿಯಬೇಕಿದೆ. ಇಲ್ಲವೇ ತಂಪು ಪಾನೀಯ, ಐಸ್ ಕ್ರೀಮ್ ಮೊರೆ ಹೋಗುವಂತಾಗಿದೆ.
ಬಿಸಿಲಿಗೆ ಬಾಡುವ ತರಕಾರಿ: ಸಂತೆಯಲ್ಲಿ ತರಕಾರಿ ವ್ಯಾಪಾರಸ್ಥರಿಗೆ ನೆರಳಿನ ಸೌಲಭ್ಯವಿಲ್ಲ. ಅಲ್ಲಲ್ಲಿ ಒಬ್ಬರು ಛತ್ರಿಗಳನ್ನು ಹಾಕಿಕೊಂಡು ವ್ಯಾಪಾರ ಮಾಡಿದರೆ ಬಹುತೇಕರು ಬಿಸಿಲಲ್ಲೇ ವ್ಯಾಪಾರ ಮಾಡುವುದರಿಂದ ಬಿಸಿಲಿಗೆ ಮೆಂತೆಪಲ್ಲೆ, ಮೂಲಂಗಿ, ಕೋತಂಬರಿ, ಕರಿಬೇವು, ಪಾಲಕ, ಬದನಿಕಾಯಿ, ಟೊಮೆಟೋ, ಆಲೂಗಡ್ಡೆ ಇತರೆ ತರಕಾರಿ ಬಾಡುತ್ತವೆ. ಬಾಡಿದ ತರಕಾರಿಯನ್ನು ಖರೀದಿಸಲು ಗ್ರಾಹಕರೂ ಮುಂದಾಗುತ್ತಿಲ್ಲ. ಹೀಗಾಗಿ ಹಾನಿ ಅನುಭವಿಸುವಂತಾಗಿದೆ ಎನ್ನುತ್ತಾರೆ ವ್ಯಾಪಾರಸ್ಥರಾದ
ಶಿವಗಂಗಮ್ಮ, ಶಾಂತಮ್ಮ.
ಆಗ್ರಹ: ವಾರದ ಸಂತೆಯಲ್ಲಿ ವ್ಯಾಪಾರಸ್ಥರಿಂದ 20ರಿಂದ 50 ರೂ.ವರೆಗೆ ಶುಲ್ಕ ವಸೂಲಿ ಮಾಡಲಾಗುತ್ತಿದ್ದರೂ ಕನಿಷ್ಠ ಸೌಲಭ್ಯ ಕಲ್ಪಿಸುವಲ್ಲಿ ಪುರಸಭೆ ವಿಫಲವಾಗಿದೆ. ಪರಿಣಾಮ ವ್ಯಾಪಾರಸ್ಥರು, ಗ್ರಾಹಕರು ಪರದಾಡುವಂತಾಗಿದೆ. ಮುಂದಿನ ವಾರ ನಡೆಯುವ ಸಂತೆಯಲ್ಲಿ ಸಂತೆ ಸ್ಥಳದಲ್ಲಿ ಪುರಸಭೆ ಕನಿಷ್ಠ ಟ್ಯಾಂಕರ್ ಇರಿಸಿ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ಕರವೇ ಮುಖಂಡ ಉಸ್ಮಾನ ಗೌರಂಪೇಟೆ ಆಗ್ರಹಿಸಿದರು.
ಟಾಪ್ ನ್ಯೂಸ್
![Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು](https://www.udayavani.com/wp-content/uploads/2024/12/road-roller-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು](https://www.udayavani.com/wp-content/uploads/2024/12/road-roller-150x84.jpg)
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
![WTC 25; India’s Test Championship finals road gets tough; Here’s the calculation](https://www.udayavani.com/wp-content/uploads/2024/12/rahul-2-150x87.jpg)
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
![Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ](https://www.udayavani.com/wp-content/uploads/2024/12/sc-19-150x90.jpg)
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-150x84.jpg)
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-150x79.jpg)
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.