ಮಂತ್ರಾಲಯ ರಾಯರ ಆರಾಧನೆ ಶುರು; ತಿರುಪತಿ ದೇವಸ್ಥಾನದಿಂದ ಶೇಷವಸ್ತ್ರ ಆಗಮನ
Team Udayavani, Aug 19, 2024, 2:48 PM IST
ರಾಯಚೂರು: ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 353ನೇ ಆರಾಧನೆ ಮಹೋತ್ಸವ ನಿಮಿತ್ತ ರವಿವಾರ ಸಂಜೆ ಸಪ್ತರಾ ತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು. ಮಠದ ಮುಂಭಾಗದ ಆವರಣದಲ್ಲಿ ಶ್ರೀಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಅದಕ್ಕೂ ಮುನ್ನ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಗೋಪೂಜೆ, ಅಶ್ವಪೂಜೆ ನೆರವೇರಿಸಿದರು. ಈ ಬಾರಿ ಸಪ್ತರಾತ್ರೋತ್ಸವದ ಮೊದಲನೇ ದಿನವೇ ತಿರುಪತಿ ತಿರುಮಲ ದೇವಸ್ಥಾನದಿಂದ ಶ್ರೀನಿವಾಸ ದೇವರ ಪ್ರಸಾದ ರೂಪದ ಶೇಷವಸ್ತ್ರ ತರಲಾಯಿತು.
ಟಿಟಿಡಿಯ ಇಒ ಜೆ.ಶಾಮಲರಾವ್ ನೇತೃತ್ವದಲ್ಲಿ ತರಲಾದ ಶೇಷವಸ್ತ್ರವನ್ನು ಶ್ರೀಮಠದ ಸಿಬ್ಬಂದಿ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ಶ್ರೀ ಸುಬುಧೇಂದ್ರ ತೀರ್ಥರು ಶೇಷವಸ್ತ್ರ ತಲೆ ಮೇಲೆ ಹೊತ್ತು ಸಾಗಿದರು. ಈ ವೇಳೆ ಶ್ರೀಸುಬುಧೇಂದ್ರ ತೀರ್ಥರು ಆಶೀರ್ವಚನ ನೀಡಿ, ತಿರುಪತಿ ದೇವಸ್ಥಾನಕ್ಕೆ ಹೇಗೆ ಜಾತಿ-ಮತ-ಭೇದವಿಲ್ಲದೇ ಭಕ್ತರು
ನಡೆದುಕೊಳ್ಳುತ್ತಾರೋ ಅದೇ ರೀತಿ ಮಂತ್ರಾಲಯ ಮಠಕ್ಕೂ ಭಕ್ತರು ನಡೆದುಕೊಳ್ಳುತ್ತಾರೆ.
ಶ್ರೀನಿವಾಸ ದೇವರ ಅನುಗ್ರಹದಿಂದ ಜನಿಸಿದ ರಾಯರಿಗೂ ತಿರುಪತಿ ತಿಮ್ಮಪ್ಪನಿಗೂ ಅವಿನಾಭಾವ ನಂಟಿದೆ. ಹೀಗಾಗಿ ತಿರುಮಲದಿಂದ ಶ್ರೀನಿವಾಸ ದೇವರ ಶೇಷವಸ್ತ್ರಗಳು ಪ್ರಸಾದ ರೂಪದಲ್ಲಿ ಬರುವ ವಾಡಿಕೆ ನಡೆದುಕೊಂಡು ಬಂದಿದೆ ಎಂದರು.
ಪ್ರತಿ ವರ್ಷವೂ ಪೂರ್ವಾರಾಧನೆ ಅಥವಾ ಮಧ್ಯಾರಾಧನೆ ದಿನ ಶೇಷವಸ್ತ್ರಗಳು ಬರುತ್ತಿತ್ತು. ಈ ವರ್ಷ ಸಪ್ತರಾತ್ರೋತ್ಸವದ ಮೊದಲನೇ ದಿನದಂದೇ ಬಂದಿರುವುದು ಬಹಳ ಖುಷಿ ವಿಚಾರ. ಮಧ್ಯಾರಾಧನೆ ದಿನದಂದು ರಾಯರಿಗೆ ಶೇಷವಸ್ತ್ರ ಸಮರ್ಪಿಸಲಾಗುವುದು ಎಂದು ತಿಳಿಸಿದರು. ಟಿಟಿಡಿಯ ಇಒ ಶ್ಯಾಮಲರಾವ್ ದಂಪತಿಯನ್ನು ಶ್ರೀಗಳು ಸನ್ಮಾನಿಸಿದರು.
ಶ್ರೀಮಠದ ವ್ಯವಸ್ಥಾಪಕರಾದ ಎಸ್.ಕೆ. ಶ್ರೀನಿವಾಸರಾವ್, ವೆಂಕಟೇಶ ಜೋಶಿ ಹಾಗೂ ಟಿಟಿಡಿ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಅನೇಕ ಭಕ್ತರು ನೆರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ
Raichur: ಮನೆಯವರನ್ನು ಕಟ್ಟಿ ಹಾಕಿ 22 ತೊಲೆ ಚಿನ್ನಾಭರಣ, 2ಲಕ್ಷ ನಗದು ದೋಚಿದ ದುಷ್ಕರ್ಮಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.