ಹೊಸ ಯೋಜನೆಗಳ ಪ್ರಸ್ತಾವನೆ ಸಲ್ಲಿಸಿ

ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಆಗದಂತೆ ನಿಗಾ ವಹಿಸಿ •ನೆರೆಗೆ ಸೇತುವೆ ಹಾನಿ ಆಗಿದ್ದರೆ ತಾತ್ಕಾಲಿಕ ಸೇತುವೆ ನಿರ್ಮಿಸಿ

Team Udayavani, Aug 29, 2019, 10:54 AM IST

29-Agust-9

ರಾಯಚೂರು: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತ ಸುಬೋಧ್‌ ಯಾದವ್‌ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.

ರಾಯಚೂರು: ಜಿಲ್ಲೆಯ ಅಭಿವೃದ್ಧಿ ದಿಸೆಯಲ್ಲಿ ಹೊಸದಾಗಿ ರೂಪಿಸಿದ ಯೋಜನೆಗಳು, ಕಾಮಗಾರಿಗಳ ಮಾಹಿತಿಯನ್ನು ತ್ವರಿತವಾಗಿ ತಿಳಿಸಿದಲ್ಲಿ ಅವುಗಳನ್ನು ಹೈದರಾಬಾದ್‌-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಗಳಡಿ ಸೇರಿಸುವುದಾಗಿ ಹೈದರಾಬಾದ್‌-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ್‌ ಯಾದವ್‌ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬರ, ಪ್ರವಾಹ ಪರಿಸ್ಥಿತಿ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು. ಪ್ರವಾಹದಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿಯಾಗಿದೆ. ಮೂಲ ಸೌಲಭ್ಯಗಳೂ ಇಲ್ಲದಾಗಿದೆ. ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಸಮಸ್ಯೆಯಾಗುತ್ತಿದೆ. ಇಂಥ ವೇಳೆ ಅವುಗಳ ಸಮರ್ಪಕ ಅನುಷ್ಠಾನ ದೃಷ್ಟಿಯಿಂದ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಯಚೂರು ವಲಯದ ಜೆಸ್ಕಾಂ ಇಇ ಮಾತನಾಡಿ, ಪ್ರವಾಹದಿಂದ ಉಭಯ ನದಿಗಳಲ್ಲಿ 879 ವಿದ್ಯುತ್‌ ಪರಿವರ್ತಕಗಳು ಹಾಳಾಗಿದ್ದು, ಅದರಲ್ಲಿ 658 ಟ್ರಾನ್ಸ್‌ಫಾರ್ಮರ್‌ ಅಳವಡಿಸಲಾಗಿದೆ. ಇನ್ನೂ 221 ಪರಿವರ್ತಕಗಳನ್ನು ಚಾರ್ಜ್‌ ಮಾಡಿ 2-3 ದಿನಗಳಲ್ಲಿ ಅಳವಡಿಸಲಾಗುವುದು ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಡಾ| ಚೇತನಾ ಪಾಟೀಲ ಮಾತನಾಡಿ, ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆಗಸ್ಟ್‌ನಲ್ಲಿ ಶೇ.95ರಷ್ಟು ಮಳೆ ವಾಡಿಕೆ ಇದ್ದು ಶೇ.45ರಷ್ಟು ಮಳೆಯಾಗಿದೆ ಎಂದರು. ತಾಲೂಕುವಾರು ಬೆಳೆಗಳ ಬಗ್ಗೆ ಸವಿವರದ ಮಾಹಿತಿ ಸಿದ್ಧಪಡಿಸಿ ವರದಿ ನೀಡುವಂತೆ ಸುಬೋಧ್‌ ಯಾದವ್‌ ಸೂಚಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯ ಇಇ ಗಣಪತಿ ಸಾಕ್ರೆ ಮಾತನಾಡಿ, ಜಿಲ್ಲೆಯ 117 ಗ್ರಾಮಗಳಲ್ಲಿ 148 ಖಾಸಗಿ ಬೋರ್‌ವೆಲ್ ಕೊರೆಸಿದ್ದು, ಲಿಂಗಸುಗೂರು ತಾಲೂಕಿನ 5 ಗ್ರಾಮಗಳಿಗೆ ಮಾತ್ರ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು. ಆ ಹಳ್ಳಿಗಳಲ್ಲೂ ಬೋರ್‌ವೆಲ್ ಕೊರೆಯಿಸಿ ಶಾಶ್ವತ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಿ. ಕುಡಿಯುವ ನೀರಿನ ಯೋಜನೆಗಳಿಗೆ ಯಾವುದೇ ಹಣಕಾಸಿನ ತೊಂದರೆ ಇಲ್ಲ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಶರತ್‌ ಬಿ., ಎಡಿಸಿ ಗೋವಿಂದರೆಡ್ಡಿ, ಎಸಿ ಸಂತೋಷಕುಮಾರ, ಲಿಂಗಸುಗೂರು ಎಸಿ ರಾಜಶೇಖರ ಡಂಬಳ, ತಹಶೀಲ್ದಾರ್‌ ಡಾ| ಹಂಪಣ್ಣ, ಸಿರವಾರ ತಹಶೀಲ್ದಾರ್‌ ಶ್ರುತಿ ಕೆ., ಜಿಪಂ ಯೋಜನಾಧಿಕಾರಿ ಶರಣಬಸವ ಸೇರಿ ಅನೇಕರು ಪಾಲ್ಗೊಂಡಿದ್ದರು.

ಪರಿಹಾರ ಕೇಂದ್ರಗಳಲ್ಲಿರುವ ನೆರೆ ಸಂತ್ರಸ್ತರು, ತಮ್ಮ ಸ್ವ ಸ್ಥಾನಕ್ಕೆ ತೆರಳುವ ಮುನ್ನ ಅವರ ಒಪ್ಪಿಗೆ ಪಡೆದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಅಲ್ಲಿ ಅವರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸ್ಥಳೀಯ ಅಧಿಕಾರಿಗಳು ಒತ್ತು ನೀಡಬೇಕು. ಪ್ರವಾಹದ ವೇಳೆ ಜಲಾವೃತಗೊಂಡ ಸೇತುವೆಗಳು ಜಖಂಗೊಂಡಿದ್ದು, ಜನ ಸಂಚಾರಕ್ಕೆ ಅನುಕೂಲವಾಗುವಂತೆ ತಾತ್ಕಾಲಿಕ ಸೇತುವೆ ನಿರ್ಮಿಸಬೇಕು. ಬಳಿಕ ಶಾಶ್ವತ ಸೇತುವೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಬೇಕು.
ಸುಬೋಧ್‌ ಯಾದವ್‌,
ಪ್ರಾದೇಶಿಕ ಆಯುಕ್ತರು

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.