ಪಾತಾಳಕ್ಕಿಳಿದ ಎಸ್ಸೆಸ್ಸೆಲ್ಸಿ ಫಲಿತಾಂಶ

ಕಳೆದ ವರ್ಷಕ್ಕಿಂತ ನಾಲ್ಕು ಸ್ಥಾನ ಕುಸಿತ •ಕೆಳಗಿನಿಂದ ಎರಡನೇ ಸ್ಥಾನಕ್ಕೆ

Team Udayavani, May 1, 2019, 3:55 PM IST

1-MAY-27

ರಾಯಚೂರು: ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮೊಬೈಲ್ ನಲ್ಲಿ ವೀಕ್ಷಿಸಿದ ವಿದ್ಯಾರ್ಥಿನಿಯರು.

ರಾಯಚೂರು: ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯದ ಕೆಲ ಜಿಲ್ಲೆಗಳು ಮೊದಲ ಸ್ಥಾನ ಪಡೆಯಬೇಕು ಎಂಬ ತುಡಿತದೊಂದಿಗೆ ಪೈಪೋಟಿ ನಡೆಸಿದರೆ ರಾಯಚೂರು ಜಿಲ್ಲೆ ಮಾತ್ರ ಕೊನೆ ಸ್ಥಾನ ಪಡೆಯಲು ಪೈಪೋಟಿ ನಡೆಸುತ್ತಿದೆ. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಮತ್ತೆ ನಾಲ್ಕು ಸ್ಥಾನ ಕುಸಿತ ಕಂಡಿರುವ ಜಿಲ್ಲೆ 33ನೇ ಸ್ಥಾನದಲ್ಲಿ ವಿರಾಜಮಾನವಾಗಿದೆ.

ಫಲಿತಾಂಶ ಸುಧಾರಣೆಗೆ ಏನೆಲ್ಲ ಪ್ರಯಾಸ ಪಟ್ಟರೂ ಯಾವುದೇ ಪ್ರಯೋಜನ ಮಾತ್ರ ಕಾಣುತ್ತಿಲ್ಲ. 2016-17ನೇ ಸಾಲಿನಲ್ಲಿ 30ನೇ ಸ್ಥಾನದಲ್ಲಿದ್ದ ಜಿಲ್ಲೆ 2017-18ನೇ ಸಾಲಿನಲ್ಲಿ 29ನೇ ಸ್ಥಾನಕ್ಕೇರಿತ್ತು. ಆದರೆ, ಈ ಬಾರಿ 33ನೇ ಸ್ಥಾನ ಪಡೆಯುವ ಮೂಲಕ ಕೆಳಗಿನಿಂದ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ. ಜಿಲ್ಲೆಯಲ್ಲಿ 27,768 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 16,214 ವಿದ್ಯಾರ್ಥಿಗಳು ಪಾಸಾಗಿದ್ದು, ಶೇ.65.33ರಷ್ಟು ಫಲಿತಾಂಶ ದೊರಕಿದೆ.

ದೇವದುರ್ಗ ತಾಲೂಕಿನಲ್ಲಿ 3,801 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 2,558 ವಿದ್ಯಾರ್ಥಿಗಳು ಪಾಸಾಗಿದ್ದರೆ, ಲಿಂಗಸುಗೂರು ತಾಲೂಕಿನಲ್ಲಿ 5,484ರಲ್ಲಿ 3,502, ಮಾನ್ವಿ ತಾಲೂಕಿನಲ್ಲಿ 5,055ರಲ್ಲಿ 3,002, ರಾಯಚೂರು ತಾಲೂಕಿನಲ್ಲಿ 8,233ರಲ್ಲಿ 4,210 ಮತ್ತು ಸಿಂಧನೂರು ತಾಲೂಕಿನಲ್ಲಿ 5,195ರಲ್ಲಿ 2,942 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 407 ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿದ್ದು, ಇವುಗಳಲ್ಲಿ ಖಾಸಗಿ ಶಾಲೆ ಮಕ್ಕಳೇ ಹೆಚ್ಚಿನ ಪ್ರಮಾಣದಲ್ಲಿ ಉತ್ತೀರ್ಣಗೊಂಡಿದ್ದಾರೆ. ಒಟ್ಟು 220 ಸರ್ಕಾರಿ ಶಾಲೆಗಳಲ್ಲಿ ಶೇ.65.52ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದು, 30 ಅನುದಾನಿತ ಶಾಲೆಗಳಲ್ಲಿ ಶೇ.58.89ರಷ್ಟು ಮಕ್ಕಳು ಪಾಸಾಗಿದ್ದಾರೆ. ಇನ್ನು 157 ಖಾಸಗಿ ಶಾಲೆಗಳಲ್ಲಿ 70.46ರಷ್ಟು ಮಕ್ಕಳು ಪಾಸಾಗಿದ್ದಾರೆ.

ಜಿಲ್ಲೆಯ 13 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದರೆ, ಒಂದು ಖಾಸಗಿ ಶಾಲೆಗೆ ಸೊನ್ನೆ ಫಲಿತಾಂಶ ಲಭಿಸಿದೆ. ಶೇ.100 ಸಾಧನೆ ಮಾಡಿದ 13ರಲ್ಲಿ 6 ಸರ್ಕಾರಿ, 1 ಅನುದಾನಿತ ಮತ್ತು 6 ಖಾಸಗಿ ಶಾಲೆಗಳು ಸೇರಿವೆ.

ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ಮುಂದಿದ್ದಾರೆ. ಕನ್ನಡ, ಆಂಗ್ಲ, ಉರ್ದು ಮತ್ತು ಹಿಂದಿ ಮಾಧ್ಯಮದಲ್ಲಿ ಒಟ್ಟು 23,168 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 15,347 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕನ್ನಡ ಮಾಧ್ಯಮದಲ್ಲಿ 17,561 ವಿದ್ಯಾರ್ಥಿಗಳ ಪೈಕಿ 11,215 ವಿದ್ಯಾರ್ಥಿಗಳು (ಶೇ.63.86) ಪಾಸಾಗಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ 5,047 ಪೈಕಿ 3,851 ವಿದ್ಯಾರ್ಥಿಗಳು (ಶೇ.76.3) ಪಾಸಾಗಿದ್ದಾರೆ. 519 ಉರ್ದು ವಿದ್ಯಾರ್ಥಿಗಳಲ್ಲಿ 256 ವಿದ್ಯಾರ್ಥಿಗಳು (ಶೇ.49.33) ಪಾಸಾಗಿದ್ದರೆ, ಹಿಂದಿ ಭಾಷೆಯ 41 ವಿದ್ಯಾರ್ಥಿಗಳಲ್ಲಿ 25 (ಶೇ.60.98) ವಿದ್ಯಾರ್ಥಿಗಳು ಉತ್ತೀರ್ಣಹೊಂದಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.