ಶ್ರೀ ಚಾಮುಂಡೇಶ್ವರಿ ಕರಗ ಮಹೋತ್ಸವ ಯಶಸ್ವಿ

ರಾತ್ರಿಯಿಡೀ ಸಿಂಗ್ರಾಬೋವಿ ದೊಡ್ಡಿ, ನಗರದ ಪ್ರಮುಖ ಬಡಾವಣೆಗಳಿಗಳಲ್ಲಿ ಕರಗ ಮೆರವಣಿಗೆ

Team Udayavani, Jul 25, 2019, 3:52 PM IST

25-JUly-35

ರಾಮನಗರದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮತ್ತು ಅಗ್ನಿಕೊಂಡ ಮಹೋತ್ಸವ ಯಶಸ್ವಿಯಾಗಿ ನೆರೆವೇರಿತು.

ರಾಮನಗರ: ನಗರದ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮತ್ತು ಅಗ್ನಿಕೊಂಡ ಮಹೋತ್ಸವ ಯಶಸ್ವಿಯಾಗಿ ನೆರೆವೇರಿದೆ.

ಮಂಗಳವಾರ ರಾತ್ರಿ ಸಿಂಗ್ರಾಬೋವಿ ದೊಡ್ಡಿಯಿಂದ ಹೊರಟ ಕರಗ, ನಗರದ ಪ್ರಮುಖ ಬಡಾವಣೆಗಳಿಗೆ ಭೇಟಿ ಕೊಟ್ಟು ಭಕ್ತರಿಂದ ಪೂಜೆ ಸ್ವೀಕರಿಸಿ ಬುಧವಾರ ಬೆಳಗ್ಗೆ 6.15ರ ವೇಳೆಗೆ ಚಾಮುಂಡೇಶ್ವರಿ ದೇವಾಲಯದ ಮುಂಭಾಗ ನಿರ್ಮಿಸಲಾಗಿದ್ದ ಅಗ್ನಿಕೊಂಡವನ್ನು ಹಾಯ್ದು ದೇವಾಲಯ ಪ್ರವೇಶಿಸಿತು. ಕಿಕ್ಕಿರಿದು ಸೇರಿದ್ದ ಭಕ್ತ ಸಮೂಹ ಮಾಡಿದ ಅಮ್ಮನವರ ಜಯಘೋಷ ಮುಗಿಲು ಮುಟ್ಟುವಂತಿತ್ತು. ಈ ಬಾರಿಯೂ ದೇವಿ ಪ್ರಸಾದ್‌ ಸಿಂಗ್‌ ಕರಗ ಧಾರಣೆ ಮಾಡಿದ್ದರು. ಅಗ್ನಿಕೊಂಡಕ್ಕೆ ಬೇಕಾದ ಸೌಧೆ, ಕಟ್ಟಿಗೆ, ಉಪ್ಪು ಇತ್ಯಾದಿಯನ್ನು ತಾಲೂಕಾದ್ಯಂತ ಭಕ್ತರು ಟ್ರ್ಯಾಕ್ಟರ್‌ ಸೇರಿದಂತೆ ತಮಗೆ ಅನುಕೂಲವಾದ ವಾಹನಗಳಲ್ಲಿ ತಂದು ಒಪ್ಪಿಸಿದರು.

ಭಕ್ತರಿಂದ ಪೂಜೆ: ಮಂಗಳವಾರ ಇಡೀ ರಾತ್ರಿ ನಗರಾದ್ಯಂತ ವಿವಿಧ ಬಡಾವಣೆಗಳು, ಪ್ರಮುಖ ದೇವಾಲಗಳಿಗೆ ಭೇಟಿ ಕೊಟ್ಟ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಭಕ್ತರಿಂದ ಪೂಜೆ ಸ್ವೀಕರಿಸಿತು. ಕೆಲವೆಡೆ ಕರಗ ಹಾದು ಹೋಗುವ ರಸ್ತೆಗಳನ್ನು ಬಗೆ ಬಗೆಯ ಹೂಗಳಿಂದ ಶೃಂಗರಿಸಲಾಗಿತ್ತು.

ಕರಗ ಮಹೋತ್ಸವದ ಅಂಗವಾಗಿ ನಗರ ವಿದ್ಯುತ್‌ ದೀಪಗಳು, ತಳಿರು, ತೋರಣಗಳಿಂದ ಶೃಂಗಾರಗೊಂಡಿತ್ತು. ಅರಳೀ ಮರ ವೃತ್ತ ಮತ್ತು ಜಿಲ್ಲಾ ಕ್ರೀಡಾಂಗಣಗಳಲ್ಲಿ ನಾಡಿನ ಖ್ಯಾತ ಸಂಗೀತಗಾರರಿಂದ ರಸಸಂಜೆ ಏರ್ಪಡಿಸಲಾಗಿತ್ತು. ಜೂನಿಯರ್‌ ಕಾಲೇಜು ಮೈದಾನದಲ್ಲಿ ಬಗೆಬಗೆಯ ಮನರಂಜನಾ ಆಟಗಳು ಏರ್ಪಡಿಸಿದ್ದರಿಂದ ಸಾವಿರಾರು ಮಂದಿ ನಾಗರಿಕರು ತಮ್ಮ ಕುಟುಂಬ ಸಮೇತ ಇಡೀ ರಾತ್ರಿ ಮನರಂಜನೆಯ ಸವಿ ಸವಿದರು. ಮಂಗಳವಾರ ಇಡೀ ರಾತ್ರಿ ಜಿಲ್ಲಾ ಕೇಂದ್ರ ನಿದ್ರೆಗೆ ಜಾರಲಿಲ್ಲ. ಬುಧವಾರ ದೇವಾಲಯದ ಆವರಣದಲ್ಲಿ ಸಿಡಿ ಉತ್ಸವ ನಡೆಯಿತು.

ನವಶಕ್ತಿಯರ ಕರಗ: ಮಂಗಳವಾರ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗದ ಜೊತೆಯಲ್ಲೇ ನಗರದ ವಿವಿಧೆಡೆ ನೆಲೆಸಿರುವ ಅಷ್ಟ ಶಕ್ತಿ ದೇವತೆಗಳ ಕರಗ ಮಹೋತ್ಸವವು ಯಶಸ್ವಿಯಾಗಿ ನೆರೆವೇರಿದವು. ಐಜೂರು ಆದಿಶಕ್ತಿ, ಬಿಸಿಲು ಮಾರಮ್ಮ ಕರಗ, ಮಗ್ಗದಕೇರಿ ಮಾರಮ್ಮ, ಭಂಡಾರಮ್ಮ ದೇವಿ, ಮುತ್ತುಮಾರಮ್ಮ ಕರಗ, ಶೆಟ್ಟಿಹಳ್ಳಿ ಆದಿಶಕ್ತಿ ಕರಗ, ಕೊಂಕಾಣಿದೊಡ್ಡಿ ಆದಿಶಕ್ತಿ ಕರಗ, ಚೌಡೇಶ್ವರಿ ಅಮ್ಮನವರ ಕರಗ ಕೂಡ ನೆರೆವೇರಿದವು. ಯಾವುದೇ ಅಹಿತಕರ ಘಟನೆಗೆ ಅವಕಾಶವಾಗದಂತೆ ಜಿಲ್ಲಾ ಪೊಲೀಸರು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.