ವೃದ್ಧೆ ಗಂಗಮ್ಮ ಕುಟುಂಬಕ್ಕೆ 7.5 ಲಕ್ಷ ಪರಿಹಾರ


Team Udayavani, May 18, 2020, 6:34 AM IST

gangamma

ಮಾಗಡಿ: ನರಭಕ್ಷಕ ಚಿರತೆ ದಾಳಿಗೆ ಬಲಿಯಾಗಿದ್ದ ಕೊತ್ತಗಾನಹಳ್ಳಿ ವೃದ್ಧೆ ಗಂಗಮ್ಮರ ಮನೆಗೆ ಅರಣ್ಯ ಸಚಿವ ಆನಂದ್‌ ಸಿಂಗ್‌ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, 7.5 ಲಕ್ಷ ರೂ. ಪರಿಹಾರ ಧನ ಘೋಷಿಸಿದರು. ನೆಲಮಂಗಲ  ಶಾಸಕ ಡಾ. ಕೆ.ಶ್ರೀನಿವಾಸಮೂರ್ತಿ ಹಾಗೂ ಮಾಗಡಿ ಶಾಸಕ ಎ.ಮಂಜುನಾಥ್‌ ಇದ್ದರು. ಸಚಿವ ಆನಂದ್‌ ಸಿಂಗ್‌, ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ರೈತರು, ಗ್ರಾಮಸ್ಥರು ತಮ್ಮ ಕಷ್ಟವನ್ನು ಸಚಿವರಲ್ಲಿ  ತೋಡಿಕೊಂಡರು. ಬಳಿಕ ಸಚಿವರು ಮಾತನಾಡಿ, ನಿಮ್ಮ ನೋವು ನಿವಾರಿಸಲು ಸರ್ಕಾರ ಬದಟಛಿವಾಗಿದೆ. ಕಾಡು ಅಕ್ರಮಿಸಿದ್ದು, ಹೀಗಾಗಿಯೇ ಕಾಡುಪ್ರಾಣಿ  ಗಳು ಕಾಡಂಚಿನ ಗ್ರಾಮಗಳತ್ತ ಬರುತ್ತಿವೆ. ರೈತರು ಬಹಳ ಎಚ್ಚರಿಕೆಯಿಂದ  ತಮ್ಮ ಹೊಲ ಗದ್ದೆ, ತೋಟಗಳಿಗೆ ತೆರಳಬೇಕು. ರಾತ್ರಿವೇಳೆ ಸಂಚಾರ ಬೇಡ. ಅನಿವಾರ್ಯವಾದರೆ ಹೆಚ್ಚಿನ ಜನಸಂಖ್ಯೆಯಲ್ಲಿ ಸಂಚರಿಸಿ ಎಂದರು.

ನರಭಕ್ಷಕ ಚಿರತೆ ಹಿಡಿಯಲು ಕ್ಯೂ-8 ವಿಂಗ್‌ ತಂಡ ರಚಿಸಲಾಗಿದೆ. ಡ್ರೋನ್‌ ಕ್ಯಾಮರಾದಿಂದ ಚಿರತೆ ಕಾರಿಡಾರ್‌ ಗುರುತಿ ಸಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಂಡಿ ದ್ದಾರೆ. ಹಿಡಿದ ಚಿರತೆಗಳಿಗೆ ಮೈಕ್ರೋಚಿಪ್‌ ಅಳವಡಿಕೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಗ್ರಾಮಸ್ಥರಿಂದ ಸಲಹೆ ಪಡೆದಿದ್ದೇನೆ.  ಡಿಸಿಸಿಎಫ್ ಅವರನ್ನು ಕರೆಸಿ ಕೊಂಡು ನೇರವಾಗಿ ವಾಸ್ತವಾಂಶ ತಿಳಿಸಿದ್ದೇವೆ.

ಇನ್ನು ಮುಂದೆ ಕಾಡಂಚಿನ ಗ್ರಾಮಗಳಲ್ಲಿ ಗ್ರಾಮ ಪ್ರತಿನಿಧಿ ನೇಮಿಸಲಾಗುವುದು. ಕಾಡುಪ್ರಾಣಿಗಳ ರಕ್ಷಣೆಗೆ ಶಾಶ್ವತ ಯೋಜನೆ  ರೂಪಿಸಿ, ಕಾರ್ಯರೂಪಕ್ಕೆ  ತರಲಾಗುವುದು. ಕಾಡುಪ್ರಾಣಿಗಳ ರಕ್ಷಣೆಗೆ ಕಾಡುಗಳಲ್ಲಿ ನೀರಿನ ಹೊಂಡ ನಿರ್ಮಿಸಲು ಅಗತ್ಯ ಕ್ರಮ ಕೈಗೊಂಡಿದ್ದಾರೆ. ನೀರಿನ ಕೊರತೆ ಇರುವೆಡೆ  ಸೋಲರ್‌ ವ್ಯವಸ್ಥೆ ಮೂಲಕ ಹೊಂಡ ತುಂಬಿಸಲು ಕ್ರಮಕೈಗೊಳ್ಳಲಾಗುವುದು. ಜೊತೆಗೆ  ಕಾಡಂಚಿನ ಬದಿಯಲ್ಲಿ ಎಚ್ಚರಿಕೆ ನಾಮಫ‌ಲಕ ಹಾಕಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಪಿಕಾರ್ಡ್‌ ಬ್ಯಾಂಕ್‌ ನಿರ್ದೇಶಕ ಎನ್‌. ಗಂಗರಾಜು, ಜಿಪಂ ಸದಸ್ಯ ನಾಜಿಯಾ ಖಾನ್‌ ಜವಹರ್‌, ಮಾಜಿ ಅಧ್ಯಕ್ಷ ಸಿ.ಆರ್‌. ಗೌಡ,  ಭೃಂಗೇಶ್‌, ಸಾಗರ್‌, ವೆಂಕಟೇಶ್‌, ರಾಜು, ಮೃತಗಂಗಮ್ಮ ಮೊಮ್ಮಗ ರವಿ, ಡಿಆರ್‌ಒ ಎಸ್‌.ಎನ್‌. ಹೆಗಡೆ, ವನ್ಯಜೀವಿ ಮುಖ್ಯ ವಿಭಾಗದ ಅಜಯ್‌ ಮಿಶ್ರ, ಸಾಮಾಜಿಕ ಅರಣ್ಯ ಉಪಸಂರಕ್ಷಣಾಧಿಕಾರಿ ಗೋಪಿನಾಥ್‌, ಡಿಎಫ್ಒ ರಾಮಕೃಷ್ಣಪ್ಪ, ವಲಯ ಅರಣ್ಯಾಧಿಕಾರಿ ಕೆ.ಪುಷ್ಪಲತಾ, ಸಿಪಿಐ ಮಂಜುನಾಥ್‌, ಪಿಎಸ್‌ಐಗಳಾದ ವೆಂಕಟೇಶ್‌ ಸುರೇಶ್‌ ಹಾಗೂ ಅರಣ್ಯ ಸಿಬ್ಬಂದಿಯಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.