![basavaraj rayareddy](https://www.udayavani.com/wp-content/uploads/2024/07/rayareddy-415x229.jpg)
Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು
Team Udayavani, Jun 29, 2024, 11:53 AM IST
![Ramnagar: ಇಯರ್ ಫೋನ್ ಹಾಕಿದ್ದ ಯುವಕನಿಗೆ ರೈಲು ಡಿಕ್ಕಿ; ಸಾವು](https://www.udayavani.com/wp-content/uploads/2024/06/4-19-620x372.jpg)
ಸಾಂದರ್ಭಿಕ ಚಿತ್ರ
ರಾಮನಗರ: ಕಿವಿಗೆ ಇಯರ್ ಫೋನ್ ಹಾಕಿಕೊಂಡು ರೈಲು ಹಳಿಗೆ ಹೊಂದಿಕೊಂಡಂತೆ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ರೈಲು ನಿಲ್ದಾಣದ ಬಳಿ ಶುಕ್ರವಾರ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಅಂಚೆಚಿಟ್ಟನಹಳ್ಳಿಯ ಎ.ಎಸ್.ಶ್ರೀನಿವಾಸ್ (26) ಮೃತ ಯುವಕ.
ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್, ಬೆಳಗ್ಗೆ ಬಿಡದಿ ನಿಲ್ದಾಣಕ್ಕೆ ರೈಲೊಂದರಲ್ಲಿ ಬಂದಿಳಿದಿದ್ದನು. ನಂತರ, ಕಿವಿಗೆ ಇಯರ್ ಫೋನ್ ಹಾಕಿಕೊಂಡು ನಿಲ್ದಾಣದಿಂದ ಅನತಿ ದೂರದಲ್ಲಿ ಹಳಿಗೆ ಹೊಂದಿಕೊಂಡಂತೆ ನಡೆದುಕೊಂಡು ಹೋಗುತ್ತಿದ್ದ. ಆಗ ಅದೇ ಮಾರ್ಗದಲ್ಲಿ ಬಂದಿರುವ ರೈಲು ಡಿಕ್ಕಿ ಹೊಡೆದುಕೊಂಡು ಹೋಗಿದೆ. ಇಯರ್ ಫೋನ್ ಹಾಕಿದ್ದರಿಂದಾಗಿ ಶ್ರೀನಿವಾಸ್ ಅವರಿಗೆ ರೈಲು ಬರುವುದು ಗೊತ್ತಾಗಿಲ್ಲ. ಡಿಕ್ಕಿಯ ರಭಸಕ್ಕೆ ಅವರು ಹಳಿ ಪಕ್ಕಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಸಾರ್ವಜನಿಕರು ಶವ ಗಮನಿಸಿ ನಿಲ್ದಾಣದ ಅಧಿಕಾರಿಗೆ ಮಾಹಿತಿ ನೀಡಿದರು. ಬಳಿಕ ಶವವನ್ನು ಆಸ್ಪತ್ರೆಗೆ ಸ್ಥಳಾಂತರಿಸಿ ಕುಟುಂಬದವರಿಗೆ ವಿಷಯ ತಿಳಿಸಲಾಗಿದೆ.
ಟಾಪ್ ನ್ಯೂಸ್
![basavaraj rayareddy](https://www.udayavani.com/wp-content/uploads/2024/07/rayareddy-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![3](https://www.udayavani.com/wp-content/uploads/2024/07/3-150x90.jpg)
Fraud: ದೋಷ ಪರಿಹರಿಸುವುದಾಗಿ ನಂಬಿಸಿ ಬುಡುಬುಡಿಕೆ ವೇಷ ಧರಿಸಿ ವಂಚನೆ
![1-sdsads](https://www.udayavani.com/wp-content/uploads/2024/06/1-sdsads-150x90.jpg)
Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು
![Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ](https://www.udayavani.com/wp-content/uploads/2024/06/scooty-150x87.jpg)
Ramanagara: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ಘಟನೆ ದೃಶ್ಯ ಕ್ಯಾಮೆರಾದಲ್ಲಿ ಸೆರೆ
![ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್ಡಿಕೆತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ: ಎಚ್ಡಿಕೆ](https://www.udayavani.com/wp-content/uploads/2024/06/hdk-15-150x85.jpg)
HDK; ತಪ್ಪು ಮಾಡಿ ಎಂದು ಮಕ್ಕಳಿಗೆ ನಾವು ಹೇಳುತ್ತೇವಾ…
![HDK 2](https://www.udayavani.com/wp-content/uploads/2024/06/HDK-2-2-150x100.jpg)
By-Election; ನಿಖಿಲ್ ನನ್ನು ಕಣಕ್ಕಿಳಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನುಡಿ
MUST WATCH
ಹೊಸ ಸೇರ್ಪಡೆ
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
![ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್](https://www.udayavani.com/wp-content/uploads/2024/07/virat-150x83.jpg)
Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್
![rohit sharma](https://www.udayavani.com/wp-content/uploads/2024/07/rohit-150x83.jpg)
Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-150x90.jpg)
Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…
![ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!](https://www.udayavani.com/wp-content/uploads/2024/07/10-150x90.jpg)
ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.