Farmers: ರೈತರಿಂದ ಖರೀದಿಸುವ ಹಾಲಿಗೆ 2 ರೂ. ಕಡಿತ


Team Udayavani, Nov 2, 2023, 10:29 AM IST

Farmers: ರೈತರಿಂದ ಖರೀದಿಸುವ ಹಾಲಿಗೆ 2 ರೂ. ಕಡಿತ

ರಾಮನಗರ: ಈಗಾಗಲೇ ಬರದಿಂದ ಕಂಗಾಲಾಗಿರುವ ಹಾಲು ಉತ್ಪಾದಕರಿಗೆ ಬೆಂಗಳೂರು ಹಾಲು ಒಕ್ಕೂಟ ರಾಜ್ಯೋತ್ಸವದಂದೇ ಶಾಕ್‌ ನೀಡಿದೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 2 ರೂ. ಕಡಿಮೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು ಹಾಲು ಒಕ್ಕೂಟ ರೈತರಿಂದ ಖರೀದಿ ಮಾಡುವ ಪ್ರತಿ ಲೀಟರ್‌ ಹಾಲಿಗೆ ಅ.31ರವರೆಗೆ ಶೇ.4 ಫ್ಯಾಟ್‌, 8.5 ಸಾಂಧ್ರತೆ ಇದ್ದಲ್ಲಿ 34.15 ರೂ. ಬೆಲೆ ನಿಗದಿ ಮಾಡಿತ್ತು. ಇದೀಗ ನ.1 ರಿಂದ ಈ ಗುಣಮಟ್ಟದ ಹಾಲಿಗೆ ಒಕ್ಕೂಟ 32.15 ರೂ. ಬೆಲೆ ನಿಗದಿಮಾಡಿದೆ. ಬೆಂಗಳೂರು ಹಾಲು ಒಕ್ಕೂಟದ ಈ ನಿರ್ಧಾರದಿಂದ ಬೆಂಗ ಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ 1.10 ಲಕ್ಷ ಹಾಲು ಉತ್ಪಾದಕರಿಗೆ ಸಂಕಷ್ಟ ಎದುರಾಗಿದೆ.

ಸರ್ಕಾರ ಕೊಟ್ಟಿದ್ದನ್ನು ಕಿತ್ತುಕೊಂಡ ಬಮೂಲ್‌: ಜುಲೈನಲ್ಲಿ ಹಾಲಿನ ದರ ಪರಿಷ್ಕರಣೆ ಮಾಡಿದ ರಾಜ್ಯ ಸರ್ಕಾರ ಪ್ರತಿ ಲೀಟರ್‌ ಹಾಲಿಗೆ 3 ರೂ. ಬೆಲೆ ಹೆಚ್ಚಳ ಮಾಡಿ, ಈ ಹಣವನ್ನು ರೈತರಿಗೆ ನೀಡುವಂತೆ ಸೂಚಿಸಿತ್ತು. ಸರ್ಕಾರ ಬೆಲೆ ಹೆಚ್ಚಳ ಮಾಡದಿದ್ದರಿಂದ ಒಂದೆಡೆ ರೈತರು ಬೆಲೆ ಹೆಚ್ಚಾಯಿತು ಎಂದು ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದರೆ, ಮತ್ತೂಂದೆಡೆ ಗ್ರಾಹಕರು ರೈತರಿಗೆ ನಾವು ನೀಡುತ್ತಿರುವ ಹೆಚ್ಚುವರಿ ಹಣ ತಲುಪುತ್ತಿದೆ ಎಂಬ ಸಮಾಧಾನದಲ್ಲಿದ್ದರು. ಆದರೆ, ಎರಡೇ ತಿಂಗಳಲ್ಲಿ ದರ ಇಳಿಕೆ ಮೂಲಕ ಸರ್ಕಾರ ಕೊಟ್ಟಿದ್ದ ಹೆಚ್ಚಿನ ಬೆಲೆಯನ್ನು ಒಕ್ಕೂಟ ರೈತರಿಂದ ಕಸಿದುಕೊಂಡಂತಾಗಿದೆ.

ಪದೇ ಪದೆ ಬೆಲೆ ಇಳಿಕೆ: ಜೂನ್‌ನಲ್ಲಿ ಬೆಂಗಳೂರು ಹಾಲು ಒಕ್ಕೂಟ ರೈತರಿಂದ ಖರೀದಿಸುವ ಹಾಲಿಗೆ ಪ್ರತಿಲೀಟರ್‌ಗೆ 1.50 ರೂ. ಕಡಿತ ಮಾಡಿತ್ತು. ಬಮೂಲ್‌ನ ಈ ನಿರ್ಧಾರದ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾದ ಹಿನ್ನೆಲೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ಹಾಲಿನ ದರ ಕಡಿತ ಮಾಡದಂತೆ ಸೂಚಿಸಿದ್ದರು. ಬಳಿಕ ಹಾಲಿಗೆ ಸರ್ಕಾರ ದರ ಹೆಚ್ಚಳ ಮಾಡಿದಾಗ ಬಮೂಲ್‌ ನಾವು ನೀಡುತ್ತಿದ್ದ ಪ್ರೋತ್ಸಾಹ ಧನ ಹಿಂದಕ್ಕೆ ಪಡೆಯುತ್ತಿದ್ದೇವೆ ಎಂದು ಹೇಳಿ ಹೆಚ್ಚಳ ಸರಿದೂಗಿಸಿತ್ತು. ಇದೀಗ ಮತ್ತೆ ಎರಡು ರೂ. ಇಳಿಕೆ ಮಾಡಿದೆ.

ಸಮಸ್ಯೆ: ಈಗಾಗಲೇ ಬಮೂಲ್‌ ವ್ಯಾಪ್ತಿಯ 11 ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಣೆಯಾಗಿವೆ. ಈ ಭಾಗದಲ್ಲಿ ಹಿಂಗಾರು, ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಮೇವಿನ ಕೊರತೆ ಎದುರಾಗಿದೆ. ದುಬಾರಿ ಬೆಲೆ ತೆತ್ತು ಮೇವು ಖರೀದಿಸಿ ರಾಸು ಸಾಕುವ ಪರಿಸ್ಥಿತಿ ರೈತರಿಗೆ ಎದುರಾಗಿದೆ. ಇಂತಹ ಸಮಯದಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಒಕ್ಕೂಟದ ಹಾಲಿನ ಬೆಲೆ ಕಡಿತ ಮಾಡಿರುವುದು ರೈತರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ.

ನಷ್ಟ ಸರಿದೂಗಿಸಲು ಬಮೂಲ್‌ನಿಂದ ಬರೆ?: ಬಮೂಲ್‌ನ ಕೆಲ ಅಧಿಕಾರಿಗಳ ಮಾಹಿತಿ ಪ್ರಕಾರ ಒಕ್ಕೂಟಕ್ಕೆ ಪ್ರತಿದಿನ ಸುಮಾರು 15 ಲಕ್ಷ ಲೀಟರ್‌ ಹಾಲು ಉತ್ಪಾದನೆಯಾಗುತ್ತಿದೆ. ಇದರಲ್ಲಿ 12 ಲಕ್ಷ ಲೀಟರ್‌ ಹಾಲು ಮಾತ್ರ ನೇರವಾಗಿ ಮಾರಾಟವಾಗುತ್ತಿದೆ. ಉಳಿದ ಹಾಲನ್ನು ಹಾಲಿನ ಪುಡಿ ಹಾಗೂ ಇನ್ನಿತರ ಉತ್ಪನ್ನ ತಯಾರಿಕೆಗೆ ಬಳಸಲಾಗುತ್ತಿದೆ. ಇದರಿಂದಾಗಿ ಒಕ್ಕೂಟಕ್ಕೆ ತೀವ್ರ ನಷ್ಟವಾಗಿದ್ದು, ಇದುವರೆಗೆ 65 ಕೋಟಿ ರೂ. ನಷ್ಟ ಅನುಭವಿಸಿದೆ. ಹಾಲು ಖರೀದಿ, ಮಾರಾಟ ಪ್ರಕ್ರಿಯೆಯಲ್ಲಿ ಬೆಂಗಳೂರು ಒಕ್ಕೂಟ ಪ್ರತಿ ಲೀಟರ್‌ಗೆ 1.85 ರೂ. ಸರಾಸರಿ ನಷ್ಟ ಅನುಭವಿಸುತ್ತಿದ್ದು, ಇದನ್ನು ಸರಿದೂಗಿಸುವ ಉದ್ದೇಶದಿಂದ ರೈತರಿಗೆ ನಷ್ಟದ ಹೊರೆ ಹೊರಿಸಲು ಮುಂದಾಗಿದೆ ಎಂದು ಹೇಳಲಾಗಿದೆ.

ಪಶು ಆಹಾರದ ಬೆಲೆಯೂ ಹೆಚ್ಚಳ: ಒಂದೆಡೆ ಹಾಲಿನ ಬೆಲೆ ಇಳಿಕೆ ಮಾಡಿರುವ ಬಮೂಲ್‌, ಇತ್ತ ರೈತರಿಗೆ ಒಕ್ಕೂಟದ ವತಿ ಯಿಂದ ನೀಡುವ ಪಶು ಆಹಾರದ ಬೆಲೆಯನ್ನೂ ಹೆಚ್ಚಳ ಮಾಡಿದೆ. ಈ ಹಿಂದೆ ಪ್ರತಿ 50 ಕೆ.ಜಿ. ಪಶು ಆಹಾರಕ್ಕೆ 1,165 ರೂ. ಬೆಲೆ ನೀಡಲಾಗುತ್ತಿತ್ತು. ಇದೀಗ 1,250 ರೂ. ಬೆಲೆ ನಿಗದಿಮಾಡಿದ್ದು, ಇದು ರೈತರಿಗೆ ಮತ್ತೂಂದು ಬರೆ ಎಳೆದಂತಾಗಿದೆ.

ಪ್ರತಿಕ್ರಿಯೆ ನೀಡಲ್ಲ ಎಂದ ಎಂಡಿ: ಹಾಲಿನ ದರ ಕಡಿತ ಮಾಡಿರುವ ಬಗ್ಗೆ ಬೆಂಗಳೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್‌.ಟಿ.ಸುರೇಶ್‌ ಅವರ ಪ್ರತಿಕ್ರಿಯೆಗಾಗಿ “ಉದಯವಾಣಿ’ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ದರ ಕಡಿತದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನಿರಾಕರಿಸಿದರು.

ಬರದಿಂದ ಮೇವಿನ ಸಮಸ್ಯೆ, ಪಶು ಆಹಾರದ ಬೆಲೆ ಹೆಚ್ಚಳ, ಪಶು ವೈದ್ಯಕೀಯ ಸೇವೆ ದುಬಾರಿಯಿಂದಾಗಿ ರೈತರಿಗೆ ಹೈನುಗಾರಿಕೆ ಹೊರೆಯಾಗಿದೆ. ಈಗಾಗಲೇ ಸಾಕಷ್ಟು ಮಂದಿ ಹೈನುಗಾರಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ. ಬಮೂಲ್‌ ಬೆಲೆ ಇಳಿಕೆ ಮಾಡಿರುವುದನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು. ಯೋಗೀಶ್‌ ರಾಂಪುರ, ರೈತ

 – ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

1-heall

Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ

Priyank-Kharghe

Election Bond: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು

pratp

MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್‌ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

Kaikamba: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

Kaikamba: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.