ಎಚ್ಚರ ಎಕ್ಸ್‌ಪ್ರೆಸ್‌ ವೇನಲ್ಲಿ ಯಾಮಾರಿದ್ರೆ ದಂಡ!


Team Udayavani, Jul 9, 2023, 2:44 PM IST

ಎಚ್ಚರ ಎಕ್ಸ್‌ಪ್ರೆಸ್‌ ವೇನಲ್ಲಿ ಯಾಮಾರಿದ್ರೆ ದಂಡ!

ರಾಮನಗರ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಡ್ಡಾದಿಟ್ಟಿ ಸಂಚರಿಸುವ, ವೇಗಮಿತಿ ಮೀರುವ ಚಾಲಕರಿಗೆ ಕಡಿವಾಣ ಹಾಕಲು ಪೊಲೀಸ್‌ ಇಲಾಖೆ ಮುಂದಾಗಿದ್ದು, ಕಳೆದ ನಾಲ್ಕು ದಿನಗಳಿಂದ ಪೊಲೀಸ್‌ ಸಿಬ್ಬಂದಿಗಳ ತಂಡ ಹೆದ್ದಾರಿಯಲ್ಲಿ ಕಣ್ಗಾವಲಿರಿಸಿದೆ. ಪರಿಣಾಮ ಇದುವರೆಗೆ ಅತಿವೇಗ ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆ ಸಂಬಂಧ 489 ಪ್ರಕರಣಗಳನ್ನು ಜಿಲ್ಲಾ ಪೊಲೀಸರು ದಾಖಲಿಸಿದ್ದಾರೆ.

ಕಳೆದ ನಾಲ್ಕು ದಿನಗಳಲ್ಲಿ ಎಕ್ಸ್‌ಪ್ರೆಸ್‌ ವೇನಲ್ಲಿ ನಿಯಮ ಉಲ್ಲಂಘನೆ ಮಾಡಿ ಸಂಚಾರ ಮಾಡುವ ವಾಹನಗಳಿಂದ ಸಂಗ್ರಹಿಸಿರುವ ದಂಡದ ಮೊತ್ತ3.59 ಲಕ್ಷ ರೂ. ಆಗಿದ್ದು, ವಾರಾಂತ್ಯದ ದಿನಗಳಾದ ಶನಿವಾರ ಮತ್ತು ಭಾನುವಾರ ಈ ಮೊತ್ತ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಅತಿವೇಗದ ಜೊತೆಗೆ ಹೆಲ್ಲೆಟ್‌ ರಹಿತದ್ವಿಚಕ್ರವಾಹನ ಚಾಲನೆ, ಸೀಟ್‌ಬೆಲ್ಟ್, ಲೈನ್‌ ಕ್ರಾಸ್‌ ಸೇರಿದಂತೆ ವಿವಿಧ ಸಂಚಾರಿ ನಿಯಮ ಉಲ್ಲಂಘನೆಯನ್ನು ಪರಿಗಣಿಸಿ ದಂಡ ವಿಧಿಸಲಾಗುತ್ತಿದೆ.

ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತಗಳು ಹೆಚ್ಚಾಗಲು ಕಾರಣ ಅತಿವೇಗ ಮತ್ತು ವ್ಯಾಪಕವಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡುವುದು ಎಂಬ ಸಂಗತಿ ಮನದಟ್ಟಾದ ಹಿನ್ನೆಲೆಯಲ್ಲಿ ವೇಗಮಿತಿಯ ಜೊತೆಗೆ ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳ ವಿರುದ್ಧ ಕ್ರಮಕ್ಕೆ ರಾಡಾರ್‌ ಗನ್‌ ಸಹಾಯದಿಂದ ದಂಡ ವಿಧಿಸಲು ಪೊಲೀಸ್‌ ಇಲಾಖೆ ಮುಂದಾಗಿತ್ತು. ಇದೀಗ ಜಿಲ್ಲೆಯ ನಾಲ್ಕು ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಭರ್ಜರಿ ದಂಢ ವಿಧಿಸುವ ಮೂಲಕ ಜನರಲ್ಲಿ ಎಚ್ಚರಿಕೆ ಮೂಡಿಸಲು ಮುಂದಾಗಿದೆ.

ಓವರ್‌ ಸ್ವೀಡ್‌ಗೆ ಹೆಚ್ಚು ದಂಡ: ಪೊಲೀಸ್‌ ಇಲಾಖೆ ಎಕ್ಸ್‌ಪ್ರೆಸ್‌ ವೇನಲ್ಲಿ ಅತಿವೇಗದ ಚಾಲನೆ ಮತ್ತು ಲೈನ್‌ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಅತಿಹೆಚ್ಚಿನ ದಂಡ ವಿಧಿಸಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ವೇಗದ ಮಿತಿಯನ್ನು 100 ಕಿ.ಮೀ ಎಂದು ನಿಗದಿ ಪಡಿಸಿದ್ದು, ಈ ವೇಗವನ್ನು ದಾಟಿದಲ್ಲಿ ದಂಡ ಕಟ್ಟಬೇಕಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಜಿಲ್ಲೆಯಲ್ಲಿ 174 ಪ್ರಕರಣಗಳನ್ನು ದಾಖಲಿಸಿದ್ದು, 1.74 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ಇನ್ನು ಲೈನ್‌ ಕ್ರಾಸ್‌ ಮಾಡಿರುವುದಕ್ಕೆ ಸಂಬಂಧಿಸಿದಂತೆ 137 ಪ್ರಕರಣಗಳನ್ನು ದಾಖಲಿಸಿದ್ದು 68500 ರೂ. ದಂಡವನ್ನು ವಿಧಿಸಲಾಗಿದೆ.

4 ಠಾಣಾ ವ್ಯಾಪ್ತಿಯಲ್ಲಿ ಕಣ್ಗಾವಲು: ಜಿಲ್ಲೆಯಲ್ಲಿ ನಾಲ್ಕು ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಯ್ದು ಹೋಗಲಿದ್ದು, ಈ ನಾಲ್ಕು ಠಾಣೆಗಳ ವ್ಯಾಪ್ತಿಯ ಪೊಲೀಸ್‌ ಸಿಬ್ಬಂದಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಮೇಲೆ ಕಣ್ಗಾವಲು ಇರಿಸಿದ್ದಾರೆ. ನಿಡಘಟ್ಟದಿಂದ ಬೆಂಗಳೂರು ರಾಮನಗರ ದವರೆಗೆ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು, ರಾಮನಗರದಿಂದ ಬಿಡದಿವರೆಗೆ ರಾಮನಗರ ಸಂಚಾರ ಠಾಣೆ ಪೊಲೀಸರು, ಬಿಡದಿಯಿಂದ ಕುಂಬಳಗೂಡಿನ ವರೆಗೆ ಬಿಡದಿ ಠಾಣೆ ಪೊಲೀಸರು. ಕುಂಬಳಗೂಡಿನಿಂದ ಹೆದ್ದಾರಿ ಅಂತ್ಯಗೊಳ್ಳುವ ವರೆಗೆ ಕುಂಬಳಗೂಡು ಠಾಣೆ ಪೊಲೀಸರು ಹೆದ್ದಾರಿಯಲ್ಲಿ ರಾಡಾರ್‌ ಕ್ಯಾಮೆರಾ ದೊಂದಿಗೆ ನಿಂತು ಸಂಚಾರ ನಿಯಮ ಉಲ್ಲಂಘನೆ ಮಾಡಿದ ಚಾಲಕರ ವಿರುದ್ಧ ಕ್ರಮ ಜರುಗಿಸುತ್ತಿದ್ದಾರೆ.

ಹೆದ್ದಾರಿ ಪ್ರಯಾಣಿಕರಿಗೆ ಬಲು ದುಬಾರಿ: ಈಗಾಗಲೇ ಟೋಲ್‌ ಹೆಚ್ಚಳದಿಂದಾಗಿ ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚರಿಸುವುದು ದುಬಾರಿ ಎಂದು ಪ್ರಯಾಣಿಕರು ಕಣ್ಣುಬಾಯಿ ಬಿಡುತ್ತಿರುವ ನಡುವೆ, ಸ್ವಲ್ಪ ಉದಾಸೀನ ಮಾಡಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ದಂಡ ಹಾಕುತ್ತಿರುವುದು ಪ್ರಯಾಣಿಕರಿಗೆ ಹೆದ್ದಾರಿ ಸವಾರಿ ಮತ್ತಷ್ಟು ದುಬಾರಿಯಾಗಿ ಪರಿಣಮಿಸಿದೆ. ಈಗಾಗಲೇ ಬೆಂಗಳೂರು ಮೈಸೂರು ನಡುವೆ ಕಾರಿನಲ್ಲಿ ಹೋಗಿ ಬರುವುದಕ್ಕೆ ಒಂದು ಬದಿಗೆ 320 ರೂ. ಇದ್ದು, 24 ತಾಸುಗಳಲ್ಲಿ ಹಿಂದಿರುಗಿದರೆ 485 ರೂ. ಪಾವತಿಸ ಬೇಕು. ಇನ್ನು 24 ಗಂಟೆ ಬಳಿ ಹಿಂದಿರುಗಿದರೆ ಹೋಗಿಬರಲು 660 ರೂ. ಶುಲ್ಕವಾಗುತ್ತದೆ. ಪಾಸ್ಟ್‌ ಟ್ಯಾಗ್‌ ಇಲ್ಲದಿದ್ದರೆ ಟೋಲ್‌ ಶುಲ್ಕ 1300 ರೂ. ಕಟ್ಟ ಬೇಕಿದೆ. ಈ ಮಧ್ಯೆ ಪ್ರಯಾಣಿಕರು ಹೆದ್ದಾರಿಯಲ್ಲಿ ಅತಿ ವೇಗದ ಚಾಲನೆ ಮಾಡಿದರೆ 1 ಸಾವಿರ ರೂ. ಸೀಟ್‌ಬೆಲ್ಟ್ ಹಾಕದಿದ್ದರೆ 500, ಲೈನ್‌ ಕ್ರಾಸ್‌ ಮಾಡಿದರೆ 500 ಹೀಗೆ ದಂಡ ಪಾವತಿಸ ಬೇಕಿದ್ದು, ಬೆಂಗಳೂರು ಮೈಸೂರು ನಡುವಿನ ಪ್ರಯಾಣ ಜೇಬಿಗೆ ಹೊರೆಯಾಗಿ ಪರಿಣಮಿಸಿದೆ. ಆದರೆ, ಹೆಚ್ಚುತ್ತಿರುವ ಅಪಘಾತಗಳ ತಡೆಗೆ ದಂಡಾಸ್ತ್ರ ಅನಿವಾರ್ಯ ಎಂಬುದು ಪೊಲೀಸ್‌ ಇಲಾಖೆಯ ಅಭಿಪ್ರಾಯವಾಗಿದೆ.

– ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.