Bangalore Mysore Expresswayನಲ್ಲಿ ಒಂದಂಕಿಗಿಳಿದ ಸಾವಿನ ಸಂಖ್ಯೆ


Team Udayavani, Sep 5, 2023, 4:47 PM IST

tdy-11

ರಾಮನಗರ: ಸಾವಿನ ಹೆದ್ದಾರಿ ಎಂಬ ಕಳಂಕಕ್ಕೆ ಒಳಗಾಗಿದ್ದ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕೊನೆಗೂ ಅಪಘಾತಗಳ ಪ್ರಮಾಣ ತಗ್ಗಿದೆ. ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಅಪಘಾತಗಳ ಸಂಖ್ಯೆ ಒಂದಂಕಿಗೆ ಇಳಿದಿದೆ. ಇದರೊಂದಿಗೆ ಎಕ್ಸ್‌ ಪ್ರಸ್‌ ವೇನಲ್ಲಿ ಸಂಚರಿಸುವ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಕಳೆದ ಜನವರಿಯಿಂದ ಜೂನ್‌ ವರೆಗೆ 105 ಮಂದಿ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದರು. ನಿರಂತರ ಅಪ ಘಾತಗಳಿಂದಾಗಿ ಈ ರಸ್ತೆಯನ್ನು ಸಾವಿನ ಹೆದ್ದಾರಿ ಎಂದು ಬಣ್ಣಿಸಲಾಗಿತ್ತು. ಅಪಘಾತ ಹೆಚ್ಚಳದ ಹಿನ್ನೆಲೆ ಯಲ್ಲಿ ಪೊಲೀಸ್‌ ಇಲಾಖೆ ಮತ್ತು ಹೆದ್ದಾರಿ ಪ್ರಾಧಿಕಾರ ಎಚ್ಚೆತ್ತು ಕೊಂಡಿದ್ದು, ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಅಪಘಾತ ಪ್ರಮಾಣ ಗಣನೀಯವಾಗಿ ಇಳಿದಿದೆ.

14 ಮಂದಿ ಸಾವು: ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಬೆಂಗಳೂರು ಮೈಸೂರು ಹೈವೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 14 ಮಂದಿ ಸಾವಿಗೀಡಾಗಿದ್ದಾರೆ. ಜುಲೈನಲ್ಲಿ 8 ಮಂದಿ, ಆಗಸ್‌ rನಲ್ಲಿ 6 ಮಂದಿ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದು, ಇದೇ ಮೊದಲ ಬಾರಿಗೆ ಹೆದ್ದಾರಿ ಅಪಘಾತಗಳಲ್ಲಿ ಸಾವಿಗೀ ಡಾದವರು ಸಂಖ್ಯೆ ಒಂದಂಕಿಗೆ ಇಳಿದಿದೆ. ಅಪಘಾತಗಳ ಪ್ರಮಾಣ ಕಡಿಮೆಯಾಗಿರುವುದು ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.

ಸುಧಾರಣಾ ಕ್ರಮಗಳು ಕಾರಣ: ಹೆದ್ದಾರಿಯಲ್ಲಿ ಅಪಘಾತ ಪ್ರಮಾಣ ಕಡಿಮೆಯಾಗಲು ಪೊಲೀಸ್‌ ಇಲಾಖೆ ಕೈಗೊಂಡ ಸುಧಾರಣಾ ಕ್ರಮಗಳು ಸಹಕಾರಿಯಾಗಿವೆ. ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚಾರ ಮಿತಿಯನ್ನು 100 ಕಿಮೀಗೆ ನಿಯಂತ್ರಿಸಿದ್ದು, ಹೆದ್ದಾರಿ ಯಲ್ಲಿ ಬೈಕ್‌ ಮತ್ತು ಮಂದಗತಿಯ ವಾಹನಗಳ ಪ್ರವೇಶ ನಿಷೇಧಿಸಿದ್ದು, ವೇಗ ನಿಯಂತ್ರಣಕ್ಕೆ ಎಐ ಕ್ಯಾಮೆರಾಗಳನ್ನು ಅಳವಡಿಸಿದ್ದು, ಹೀಗೆ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿರುವುದು ಅಪಘಾತಕ್ಕೆ ಕಡಿಮೆಯಾಗಲು ಕಾರಣವಾಗಿದೆ.

ರಾಜ್ಯದಲ್ಲೂ ರಸ್ತೆ ಅಪಘಾತದಿಂದ ಸಾವಿನ ಸಂಖ್ಯೆ ಕಡಿಮೆ:  ಕಳೆದ 4ತಿಂಗಳ ಅಪಘಾತ ಪ್ರಮಾಣವನ್ನು ಪರಿಗಣಿಸಿದರೆ ಜುಲೈ ಮತ್ತು ಮೇ ತಿಂಗಳಲ್ಲಿ ರಾಜ್ಯಾ ದ್ಯಂತ ಅಪಘಾತದಿಂದ ಮರಣ ಹೊಂದುವವರ ಸಂಖ್ಯೆ ಕಡಿಮೆಯಾಗಿದೆ. ರಾಜ್ಯದಲ್ಲಿ ಮೇ ತಿಂಗಳಲ್ಲಿ 1094, ಜೂನ್‌ನಲ್ಲಿ9 65, ಜುಲೈನಲ್ಲಿ 807, ಆಗಸ್ಟ್‌ನಲ್ಲಿ 795 ಮಂದಿ ರಸ್ತೆ ಅಪಘಾತದಲ್ಲಿ ಸಾವಿಗೀಡಾ ಗಿದ್ದಾರೆ. ಪೊಲೀಸ್‌ ಸಿಬ್ಬಂದಿಗಳ ಕಠಿಣ ಪರಿಶ್ರಮ ಮತ್ತು ಇಲಾಖಾ ಸಿಬ್ಬಂದಿ ಕೈಗೊಂಡಿರುವ ಸುರಕ್ಷತಾ ಕ್ರಮ ಗಳಿಂದ ಅಮೂಲ್ಯ ಜೀವಗಳ ರಕ್ಷಣೆಯಾಗುತ್ತಿದೆ ಎಂದು ಈ ಬಗ್ಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ತಮ್ಮ ಎಕ್ಸ್‌(ಟ್ವೀಟರ್‌) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಎಕ್ಸ್‌ಪ್ರೆಸ್‌ ವೇನಲ್ಲಿ ಪೊಲೀಸ್‌ ಇಲಾಖೆ ಕೈಗೊಂಡ ಸುಧಾರಣಾ ಕ್ರಮಗಳಿಂದಾಗಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ಇಲಾಖೆಯ ಜೊತೆಗೆ ಪ್ರಯಾಣಿಕರು ಎಚ್ಚೆತ್ತುಕೊಳ್ಳಬೇಕು. ಪ್ರಯಾಣಿಕರು ಇಲಾಖೆಯ ಜೊತೆ ಸಹಕರಿಸಿದರೆ ಶೇ.99ರಷ್ಟು ಅಪಘಾತ ವನ್ನು ನಿಯಂತ್ರಿಸಬಹುದು. ಅಮೂಲ್ಯ ಜೀವಗಳನ್ನ ಉಳಿಸಬಹು ದಾಗಿದೆ. ಹೈವೆ ಅಪಘಾತ ನಿಯಂತ್ರಣಕ್ಕೆ ಶ್ರಮಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುತ್ತೇನೆ.  –ಸುರೇಶ್‌, ಎಎಸ್ಪಿ, ರಾಮನಗರ ಜಿಲ್ಲೆ  

-ಸು.ನಾ.ನಂದಕುಮಾರ್‌

 

ಟಾಪ್ ನ್ಯೂಸ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.