ಬಿಡದಿ ಟೌನ್‌ಶಿಪ್‌: ಸಿಎಂ ರೈತರ ಪರ


Team Udayavani, May 14, 2020, 5:58 AM IST

raitaru

ಮಾಗಡಿ: ಬಿಡದಿ ಸಮೀಪದ ಕಂಚಗಾರನ ಹಳ್ಳಿ ಕೆಐಎಡಿಬಿ ಭೂಸ್ವಾಧೀನ ವಿಚಾರವಾಗಿ ರೈತರ ಆತಂಕವನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದೂರ ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಮಾಜಿ ಶಾಸಕ ಎಚ್‌.ಸಿ. ಬಾಲಕೃಷ್ಣ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಪುರಸಭೆಯಲ್ಲಿ ಸಂಸದ ಡಿ.ಕೆ. ಸುರೇಶ್‌ ಕೊಠಡಿಯಲ್ಲಿ ಏರ್ಪಡಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, 2006 ರಿಂದ 2020ರವರೆಗೆ ರಾಜಕೀಯ ಕೆಸರೆರಚಾಟ ದಿಂದಾಗಿ ರೈತರು  ಆತಂಕದಲ್ಲಿದ್ದರು. ಈಗ ಬಹುಶಃ ಸಿಎಂ ಬಿಎಸ್‌ವೈ ಕಾಯಕಲ್ಪ ಕೊಡುತ್ತಾರೆ ಎಂಬ ಆತ್ಮವಿಶ್ವಾಸವಿದೆ. ಸಿಎಂಗೆ ಮತ್ತು ಉಸ್ತವಾರಿ ಸಚಿವ ಡಿಸಿಎಂಗೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸಂಸದ ಡಿ.ಕೆ.ಸುರೇಶ್‌ ಸ್ಪಷ್ಟಿಕರಣ ಕೊಡಲಿ: ರೈತರು ನನ್ನ ತಾಯಿಯಿದ್ದಂತೆ. ಕಾಸಿಗೆ ಕೈಯೊಡ್ಡಿ ರೈತರಿಗೆ ಮೋಸ ಮಾಡಿದರೆ ಹೆತ್ತ ತಾಯಿ ಮೋಸ ಮಾಡಿದಂತೆ. ಚರ್ಚೆ ವಿಚಾರವೇ ಬೇರೆ, ಶಾಸಕರು ಕೊಟ್ಟ ಹೇಳಿಕೆಯೇ ಬೇರೆಯಾಗಿದೆ.  ಒಂದೊ ಕ್ಕೊಂದು ತಾಳೆಯೇ ಇಲ್ಲ. ನನ್ನ ಬಗ್ಗೆ ಏಕ ವಚನದಲ್ಲಿ ಮಾತನಾಡಿದ್ದಾರೆ.

ಡಿ.ಕೆ. ಶಿವಕುಮರ್‌, ಮಾಜಿ ಸಿಎಂ, ಎಚ್‌ಡಿಕೆ, ಸಂಸದ ಡಿ.ಕೆ.ಸುರೇಶ್‌ ಅವರಿಂದ ಸರ್ಕಾರಕ್ಕೆ ಪತ್ರ ಕೊಡಿಸಿದ್ದೇನೆ ಎಂದು ಶಾಸಕರು ಹೇಳಿಕೊಂಡಿದ್ದಾರೆ. ಹಾಗಾದರೆ ನೋಟಿಫಿಕೇಷನ್‌ ಏಕೆ ಆಗಿಲ್ಲ. ಇದಕ್ಕೆಲ್ಲ ಎಂಎಲ್‌ಎ ಎ.ಮಂಜುನಾಥ್‌, ಎಂಪಿ ಡಿ.ಕೆ.ಸುರೇಶ್‌ ಅವರೇ ಸ್ಪಷ್ಟೀಕರಣ ಕೊಡಬೇಕು. ಅವರ ಪತ್ರಕ್ಕೆ ಕಿಮ್ಮತ್ತಿಲ್ಲವೇ ಎಂದು ಪ್ರಶ್ನಿಸಿದರು.

ಬಹಿರಂಗ ಚರ್ಚೆಗೆ ಸಿದ್ದ: ರೈತರಿಗೆ ಅನ್ಯಾಯ ಮಾಡಿ, ಉದ್ಯಮಿಗಳಿಗೆ ಅನುಕೂಲ ಮಾಡಿ ಕೊಡುತ್ತಾರೆ ಎಂದರೆ ಹೇಗೆ? ಬಹಿರಂಗ ಚರ್ಚೆಗೆ ಕರೆದಿದ್ದಾರೆ. ಜೀವನದಲ್ಲಿ ಪಲಾ ಯನ ಮಾಡುವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದರೆ  ಶರಣಾಗುತ್ತೇನೆ. ತಪ್ಪು ಮಾಡಿ ದವರನ್ನು ನೇರವಾಗಿ ದಂಡಿಸುತ್ತೇನೆ. ಬಾಲಕೃಷ್ಣನ ಮಾತು ಬೋಗಸ್‌ ಎಂದಾದರೆ ಕೆಐಎಡಿಬಿ ವಿಚಾರವಾಗಿ ಸಿಎಂ ಏಕೆ ನನ್ನನ್ನು ಕರೆಯಿಸುತ್ತಿದ್ದರು.

ರೈತರಿಗೆ ನ್ಯಾಯ ದೊರಕಿಸುವುದು ನನ್ನ ಕೆಲಸ.  ಪ್ರಾಣ ಕೊಟ್ಟಾದರೂ ರೈತರನ್ನು ಉಳಿಸುತ್ತೇನೆ. ಅಗತ್ಯ ಬಿದ್ದರೆ ಶಾಸಕ ಎ.ಮಂಜು ಅವರಿಗೆ ರೈತರ ಪರ ಹೋರಾಟಕ್ಕೆ ಕೈಜೋಡಿಸುತ್ತೇನೆ. ತಪ್ಪಾಗಿದ್ದರೆ ಸರಿಪಡಿಸೋಣ. ಆದರೆ ಶಾಸಕರು ಏಕವಚನದಲ್ಲಿ ಮಾತನಾಡಿ, ನನ್ನನ್ನು  ಕೆಣಕಿದ್ದಾರೆ. ಹಂತ ಹಂತವಾಗಿ ಉತ್ತರಿಸುತ್ತೇನೆ. ತಪ್ಪು ತೋರಿಸಿದರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಸವಾಲು ಹಾಕಿದರು.

ಬಾಣೆಲೆಯಿಂದ ಬೆಂಕಿಗೆ ಬಿದ್ದಂತಾಗಿದೆ: ಸಂಸದ ಡಿ.ಕೆ.ಸುರೇಶ್‌ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ. ಹಿಂದೆಯಲ್ಲ ನನ್ನ ಮೇಲೆ ಗೌರವಿದೆ ಎಂದು ತಿಳಿದಿದ್ದೆ. ಹೊಂದಾಣಿಕೆ ರಾಜಕೀಯ ನನಗೆ ಬರಲ್ಲ. ನೇರವಾದಿ, ಜೆಡಿಎಸ್‌  ಶಾಸಕರೊಂದಿಗೆ ಸಂಸದರು ಕುಳಿತು ಕಾರ್ಯಕ್ರಮ ಮಾಡುತ್ತಾರೆ ಎಂದಾದರೆ ಕಾಂಗ್ರೆಸ್‌ ನಂಬಿರುವ ಕಾರ್ಯಕರ್ತರ ಪಾಡೇನು? ನನ್ನ ಕಥೆ ಈಗ ಬಾಣೆಲೆಯಿಂದ ಬೆಂಕಿಗೆ ಬಿದ್ದಂತಾಗಿದೆ ಎಂದು ನೋವು ವ್ಯಕ್ತಪಡಿಸಿದರು.

ಬಮೂಲ್‌  ಅಧ್ಯಕ್ಷ ನರಸಿಂಹಮೂರ್ತಿ, ಕೆಪಿಸಿಸಿ ಟಾಸ್ಕ್ ಫೋರ್ಸ್‌ ಕಮಿಟಿ ಅಧ್ಯಕ್ಷ ವಿಜಯಕುಮಾರ್‌, ಪುರಸಭೆ ಸದಸ್ಯ ಗುರುಸ್ವಾಮಿ, ಪುರುಷೋತ್ತಮ್‌, ನಾಗರಾಜು, ಎಂ.ಆರ್‌.ಮಂಜುನಾಥ್‌, ತೇಜಸ್‌ ಕುಮಾರ್‌, ಬಿ.ಎನ್‌. ಚಂದ್ರ ಶೇಖರ್‌, ತೇಜಾ,  ಕಿರಣ್‌ಕುಮಾರ್‌, ಸುರೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.