ಲಂಚ ಪ್ರಕರಣಕ್ಕೆ ಎಳ್ಳು ನೀರು ಬಿಟ್ಟ ಅಧಿಕಾರಿ
Team Udayavani, Mar 15, 2022, 1:12 PM IST
ಕನಕಪುರ: ಇ-ಖಾತೆಗೆ ಲಂಚ ಪಡೆದಿದ್ದ ಪ್ರಕರಣವನ್ನು ವಸ್ತು ನಿಷ್ಠ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು, ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ನಗರದ ಬಾಣಂತ ಮಾರಮ್ಮ ಬಡಾವಣೆಯ ನಿವಾಸಿ ಸತೀಶ್ ತಮ್ಮ ನಿವೇಶನಕ್ಕೆ ಈ ಖಾತೆಗೆ ಅರ್ಜಿ ಸಲ್ಲಿಸಿದರು. ಈ ಖಾತೆ ಮಾಡಿಕೊಳ್ಳಲು ನಗರಸಭೆಯ ಕಂದಾಯ ಇಲಾಖೆಯ ನಂಜುಂಡ 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅರ್ಜಿ ಸಲ್ಲಿಸಿದ ಸತೀಶ್ ಮುಂಗಡವಾಗಿ 10 ಸಾವಿರ ರೂ. ಲಂಚ ಕೊಡುವಾಗ ದೃಶ್ಯವನ್ನು ಗುಪ್ತವಾಗಿ ವಿಡಿಯೋ ಚಿತ್ರೀಕರಣ ಮಾಡಿದ್ದರು.
ವರದಿ ನೀಡುವಂತೆ ಮೌಖಿಕ ಆದೇಶ: ನಗರಸಭೆಯ ಕಂದಾಯ ಇಲಾಖೆಯ ನಂಜುಂಡ ಲಂಚ ಪಡೆಯುತ್ತಿರುವ ವಿಡಿಯೋ ಕಳೆದ 20 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರು, ನಗರಸಭೆಯಲ್ಲಿ ಲಂಚ ಪಡೆದಿದ್ದಾರೆ ಎನ್ನಲಾದ ಪ್ರಕರಣದಲ್ಲಿ ವರದಿ ನೀಡುವಂತೆ ಜಿಲ್ಲಾ ಯೋಜನಾ ನಿರ್ದೇಶಕ ಅಶ್ವಿನ್ ಅವರಿಗೆ ಮೌಖಿಕ ಆದೇಶ ನೀಡಿದರು. ಯೋಜನಾ ನಿರ್ದೇಶಕರು ನಗರ ಸಭೆಯ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚನೆ ನೀಡಿದರು. ಆದರೆ, ವಸ್ತುನಿಷ್ಠವಾಗಿ ವರದಿ ನೀಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಮೇಲಧಿಕಾರಿಗಳಿಗೆ ದಿಕ್ಕುತಪ್ಪಿಸುತ್ತಿದ್ದಾರೆ ಎಂಬುದು ಸಾರ್ವಜನಿಕರು ಆಕ್ರೋಶ.
ಪ್ರಕರಣ ಮುಚ್ಚಿಹಾಕಲು ಯತ್ನ: ಲಂಚ ಪಡೆದಿ ರುವ ಪ್ರಕರಣದ ಅಧಿಕಾರಿ ನಂಜುಂಡ ಅವರಿಗೆ 15 ಸಾವಿರಕ್ಕೆ ಬೇಡಿಕೆಯಿಟ್ಟು ಮುಂಗಡವಾಗಿ 10 ಸಾವಿರ ಪಡೆದು ಉಳಿದ 5ಸಾವಿರ ಯಾವಾಗ ಕೊಡ್ತೀರಾ? ಇದು ರಿಜಿಸ್ಟರ್ ಆಗಿರುವ ಖಾತೆ; ಮೇಡಂಗೆ ಗೊತ್ತಾದ್ರೆ ತೊಂದರೆ ಆಗುತ್ತೆ ಕೆಲಸ ಮಾಡಿ ಕೊಟ್ಟರೆ ಮಾತ್ರ ನಾವು ಹಣ ಪಡೆಯುತ್ತೇವೆ. ಇಲ್ಲದಿದ್ದರೆ ಹಣ ತೆಗೆದುಕೊಳ್ಳುವುದಿಲ್ಲ ಕೆಲಸವಾಗು ತ್ತಿದ್ದಂತೆ ಉಳಿದ 5 ಸಾವಿರ ರೂ. ತಲುಪಿಸಬೇಕು ಎಂದು ನಗರಸಭೆಯ ನೆಲಮಹಡಿಯಲ್ಲಿ ಹೇಳುವ ದೃಶ್ಯ ವಿಡಿಯೋದಲ್ಲಿ ಸ್ಪಷ್ಟವಾಗಿ ಚಿತ್ರೀಕರಣವಾಗಿದೆ.
ಆದರೆ, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣವನ್ನು ಮುಚ್ಚಿ ಹಾಕಲು ವಿಡಿಯೋ ಬಿಡುಗಡೆ ಮಾಡಿರುವ ಅರ್ಜಿದಾರನ ಮೇಲೆ ನಗರಸಭೆಯ ಅಧಿಕಾರಿಗಳು ಒತ್ತಡ ಹಾಕಿದ್ದಾರೆ. ನಾನು ಯಾವುದೇ ಲಂಚ ಕೊಟ್ಟಿಲ್ಲ; ನಾನು ತೆರಿಗೆ ಹಣ ಪಾವತಿ ಮಾಡಿದ್ದೇನೆ ಎಂದು ಹೇಳಿಕೆ ನೀಡುವಂತೆ ಸಂದರ್ಭವನ್ನು ಸೃಷ್ಟಿಮಾಡಿ ಬಳಿಕ ಇಬ್ಬರಿಗೂ ನೆಪ ಮಾತ್ರಕ್ಕೆ ನೋಟಿಸ್ ಕೊಟ್ಟು ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಸುತ್ತಿದ್ದಾರೆ.
ನಂಜುಂಡ ಎಂಬುವವರು ಲಂಚ ಪಡೆದಿರುವುದು ಸ್ಪಷ್ಟವಾಗಿ ದೃಶ್ಯದಲ್ಲಿದೆ. ಇಷ್ಟೆಲ್ಲಾ ಸಾಕ್ಷ್ಯಾಧಾರಗಳು ಇದ್ದರೂ ಸಹ ತಪ್ಪಿತಸ್ಥರ ವಿರುದ್ಧ ಈವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದೇ ಇರುವುದು ಅಧಿಕಾರಿಗಳೂ ಇದರಲ್ಲಿ ಶಾಮಿಲಾಗಿದ್ದಾರಾ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಲು ಕಾರಣವಾಗಿದೆ.
ಡೀಸಿ ಈ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಿ ಸೂಕ್ತ ತನಿಖೆ ನಡೆಸಿ ಲಂಚ ಪಡೆದ ಅಧಿಕಾರಿ, ಲಂಚ ನೀಡಿ ಸುಳ್ಳು ಹೇಳಿಕೆ ನೀಡಿರುವ ಅರ್ಜಿದಾರ ಮತ್ತು ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧಮ್ಮ ದೀವಿಗೆ ಚಾರಿಟೆಬಲ್ ಟ್ರಸ್ಟ್ ವತಿಯಿಂದ ರೈತ ಸಂಘ ಯುವಶಕ್ತಿ ವೇದಿಕೆ ಸ್ವತಂತ್ರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡಪರ ಸಂಘಟನೆಗಳ ಸಹಯೋಗದೊಂದಿಗೆ ನಗರಸಭೆ ಭ್ರಷ್ಟಾಚಾರದ ವಿರುದ್ಧ ಮಾ.16ರಂದು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು
ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡುತ್ತಿದ್ದರಾ ಮುನಿರತ್ನ?
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.