Road Accident: ರಾಜಧಾನಿ, ಸುತ್ತ ಮುತ್ತ ಅಪಘಾತದ ಹಾಟ್‌ಸ್ಪಾಟ್‌!


Team Udayavani, Sep 9, 2024, 3:47 PM IST

6

ರಾಮನಗರ: ರಾಜಧಾನಿ ಬೆಂಗಳೂರು ಹಾಗೂ ಇದಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳು ರಸ್ತೆ ಅಪಘಾತದ ಹಾಟ್‌ಸ್ಪಾಟ್‌ ಆಗಿದೆಯಾ..? ಹೌದು ಎನ್ನುತ್ತಿದೆ ಪೊಲೀಸ್‌ ಇಲಾಖೆಯ ಅಂಕಿ ಅಂಶ!.

3 ವರ್ಷಗಳ ಅಪಘಾತ ಪ್ರಮಾಣ ಪರಿಶೀಲಿಸಿದರೆ ಬೆಂಗಳೂರು ನಗರ ಹಾಗೂ ರಾಜಧಾನಿಗೆ ಹೊಂದಿಕೊಂಡಿರುವ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚು ರಸ್ತೆ ಅಪಘಾತ ಸಂಭವಿಸುತ್ತಿವೆ. ಇಡೀ ರಾಜ್ಯದಲ್ಲಿ ರಸ್ತೆ ಅಪಘಾತದಲ್ಲಿ ಸಾವಿಗೀಡಾಗುವ ಜನರ ಪೈಕಿ ಈ ನಾಲ್ಕು ಜಿಲ್ಲೆಗಳಲ್ಲಿ ಶೇ.25 ಮಂದಿ ಸಾವಿಗೀಡಾಗುತ್ತಿದ್ದಾರೆ ಎಂಬುದು ಪೊಲೀಸ್‌ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳಿಂದ ದೃಢಪಟ್ಟಿದೆ.

3 ವರ್ಷಗಳಲ್ಲಿ 5 ಸಾವಿರ ಮಂದಿ ಸಾವು: ಬೆಂಗಳೂರು ನಗರ ಹಾಗೂ ರಾಜಧಾನಿಗೆ ಹೊಂದಿ ಕೊಂಡಿರುವ 3 ಜಿಲ್ಲೆಗಳಲ್ಲಿ ಕಳೆದ 3 ವರ್ಷದ ಅವಧಿಯಲ್ಲಿ ಆಗಸ್ಟ್‌ ಅಂತ್ಯದ ವೇಳೆಗೆ ರಸ್ತೆ ಅವ ಘಡದಲ್ಲಿ 5335 ಮಂದಿ ಸಾವಿಗೀಡಾಗಿದ್ದಾರೆ. ಇಡೀ ರಾಜ್ಯದಲ್ಲಿ ಈ ಅವಧಿಗೆ 23,738 ಮಂದಿ ಸಾವಿ ಗೀ ಡಾಗಿದ್ದಾರೆ. ಈ ಭಾಗದಲ್ಲಿ ಹೆಚ್ಚಿನ ವಾಹನ ದಟ್ಟಣೆ ಇರುವುದೇ ಅಪಘಾತ ಪ್ರಮಾಣ ಹೆಚ್ಚುವುದಕ್ಕೆ ಕಾರಣ ಎಂಬುದು ಪೊಲೀಸ್‌ ಮೂಲಗಳ ವಿವರಣೆ ಆಗಿದೆ.

ಸಂಚಾರ ಸುರಕ್ಷತೆಗೆ ಗಮನ ಹರಿಸಬೇಕಿದೆ: ಮಿತಿಮೀರಿದ ವೇಗ, ಸಂಚಾರ ನಿಯಮಗಳ ಉಲ್ಲಂಘನೆ, ಅಸುರಕ್ಷಿತ ರಸ್ತೆಗಳು ಅಪಘಾತಕ್ಕೆ ಮುಖ್ಯ ಕಾರಣ. ಬೆಂಗಳೂರು ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಬೆಂಗಳೂರು ನಗರಕ್ಕೆ ಹೊಂದುಕೊಂಡಂತೆ ಇರುವ ಗ್ರಾಮಾಂತರ, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಅಪಘಾತ ಹೆಚ್ಚಳಕ್ಕೆ ವಾಹನ ದಟ್ಟಣೆ ಹೆಚ್ಚಿರುವುದೇ ಕಾರಣ.

ಸಂಚಾರ ಸುರಕ್ಷತಾ ನಿಯಮಗಳ ಜಾರಿಗೆ ಪೊಲೀಸ್‌ ಇಲಾಖೆ ಮುಂದಾಗುವ ಜತೆಗೆ ನಾಗರಿಕರು ತಮ್ಮ ಸುರಕ್ಷತೆಗಾಗಿ ಸಂಚಾರ ನಿಯಮ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ. ಇನ್ನು ರಸ್ತೆ ಸುರಕ್ಷತೆ ಬಗ್ಗೆಯೂ ಸಂಬಂಧಿಸಿದ ಇಲಾಖೆ ಗಮನಹರಿಸಬೇಕಿದೆ.

ರಾಜ್ಯದಲ್ಲಿ ಕಡಿಮೆಯಾದ ಅಪಘಾತ ಮರಣ ಸಂಖ್ಯೆ:

ರಾಜ್ಯದಲ್ಲಿ ರಸ್ತೆ ಅಪಘಾತದಲ್ಲಿ ಸಾವಿಗೀಡಾಗುವವರ ಸಂಖ್ಯೆ ಕಳೆದ 3 ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಕಡಿಮೆಯಾಗಿದೆ. 2022ರಲ್ಲಿ ಆಗಸ್ಟ್‌ ತಿಂಗಳವರೆಗೆ7996 ಮಂದಿ ರಾಜ್ಯದಲ್ಲಿ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದರು. 2023ರಲ್ಲಿ ಈ ಸಂಖ್ಯೆ 8,146 ಇತ್ತು. ಈ ವರ್ಷದ ಆಗಸ್ಟ್‌ ಅಂತ್ಯಕ್ಕೆ 7596 ಮಂದಿ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ 550 ಸಾವಿನ ಪ್ರಮಾಣ ಕಡಿಮೆಯಾಗಿದೆ.

ಕಮಿಷನರೆಟ್‌ಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚು :  ರಾಜ್ಯದಲ್ಲಿ ಬೆಂಗಳೂರು ನಗರ ಸೇರಿ 6 ಪೊಲೀಸ್‌ ಕಮಿಷನರೆಟ್‌ಗಳಿವೆ. ಕಳೆದ 3 ವರ್ಷಗಳಲ್ಲಿ ಹುಬ್ಬಳ್ಳಿ ಮತ್ತು ಕಲಬುರಗಿ ಕಮಿಷನರೇಟ್‌ ಹೊರತು ಪಡಿಸಿದರೆ ಬೆಂಗಳೂರು ನಗರ, ಮೈಸೂರುನಗರ, ಹುಬ್ಬಳ್ಳಿ ಧಾರವಾಡ, ಬೆಳಗಾವಿ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಅಪಘಾತ ಪ್ರಮಾಣ ಈ ಹಿಂದಿನ ಸಾಲಿಗಿಂತ ಈ ಬಾರಿ ಹೆಚ್ಚಾಗಿದೆ.ರಾಜ್ಯದ 32 ಪೊಲೀಸ್‌ ವಿಭಾಗಗಳ ಪೈಕಿ(ರೈಲ್ವೆ, ಕೆಜಿಎಫ್‌) ಸೇರಿ 15ರಲ್ಲಿ ಅಪಘಾತ ಪ್ರಮಾಣ ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಹೆಚ್ಚಾಗಿದೆ. ಉಳಿದಂತೆ 17 ವಿಭಾಗಗಳಲ್ಲಿ ರಸ್ತೆ ಅಪಘಾತದಲ್ಲಿ ಸಾವಿಗೀಡಾಗುವವರ ಪ್ರಮಾಣ ಕಡಿಮೆಯಾಗಿದೆ.

ರಸ್ತೆ ಅಪಘಾತಗಳು ಮತ್ತು ಸಾವು ನಿಯಂತ್ರಣದಲ್ಲಿರಿಸುವುದು ಕಠಿಣವಾದ ಕೆಲಸ. ರಸ್ತೆ ಸುರಕ್ಷತೆ ಖಚಿತಪಡಿಸುವುದು ಸವಾಲಿನ ಕೆಲಸ. ಪೊಲೀಸ್‌ ಅಧಿಕಾರಿಗಳು ಅಪಘಾತದಿಂದಾಗುವ ಸಾವುಗಳನ್ನು ಕಡಿಮೆಮಾಡಲು ಸಾಕಷ್ಟು ಪರಿಶ್ರಮ ವಹಿಸಿದ್ದಾರೆ. ಅವರಿಗೆ ಅಭಿನಂದನೆ. – ಅಲೋಕ್‌ಕುಮಾರ್‌, ಎಡಿಜಿಪಿ ರಸ್ತೆ ಸುರಕ್ಷತೆ ಮತ್ತು ಸಂಚಾರ

-ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

cmNandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.