![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-415x219.jpg)
Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?
Team Udayavani, Jul 5, 2024, 3:11 PM IST
![Channapatna Bypoll; I am the candidate of alliance party…: What did CP Yogeshwar say?](https://www.udayavani.com/wp-content/uploads/2024/07/channapatna-620x342.jpg)
ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿ ಘೋಷಣೆ ವಿಚಾರವಾಗಿ ಕಳೆದ ವಾರ ನಾನು ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೆ. ಆದಷ್ಟು ಬೇಗ ಅಭ್ಯರ್ಥಿ ಹೆಸರು ಸೂಚಿಸುವಂತೆ ಕೇಳಿದ್ದೇನೆ. ಈಗಾಗಲೇ ಕಾಂಗ್ರೆಸ್ ಚುನಾವಣೆಗೆ ಹೋಗ್ತಿದ್ದಾರೆ. ಹಾಗಾಗಿ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದೇನೆ. ಎಚ್ಡಿಕೆ ಅವರು ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆ! ಅದಕ್ಕೆ ಅಧಿಕೃತ ಅನುಮೋದನೆ ಅವರೇ ಕೊಡಬೇಕು ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್ ಹೇಳೀದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು. ಹಾಗಾಗಿ ನೀವೇ ಬಂದು ಹೆಸರು ಘೋಷಣೆ ಮಾಡಿ ಅವರನ್ನೇ ಕೇಳಿದ್ದೇನೆ. ಮೈತ್ರಿ ಪಕ್ಷದಿಂದ ನಾನೇ ಅಭ್ಯರ್ಥಿ ಎಂದು ಹೇಳಿದರು.
ಸರ್ಕಾರದ ಹಣದಲ್ಲಿ ಉಪಚುನಾವಣೆ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಕನಕಪುರದಿಂದ ಗೆದ್ದು ರಾಮನಗರ ಉಸ್ತುವಾರಿ ತೆಗೆದುಕೊಂಡಿಲ್ಲ. ಹೋಗಿ ಬೆಂಗಳೂರು ಉಸ್ತುವಾರಿ ತೆಗೆದುಕೊಂಡಿರುವುದು ಯಾಕೆ? ಈಗ ಚುನಾವಣೆ ಸಮಯದಲ್ಲಿ ಮಾತ್ರ ಚನ್ನಪಟ್ಟಣ ನೆನಪಾಗಿರುವುದು. ಚನ್ನಪಟ್ಟಣ ಜನ ಬುದ್ಧಿವಂತರಿದ್ದಾರೆ. ಇಂತಹ ನಾಟಕಗಳಿಗೆ ನಮ್ಮ ಜನ ಉತ್ತರ ಕೊಡುತ್ತಾರೆ ಎಂದರು.
ಕಳೆದ ವಾರದಲ್ಲಿ ಡಿಸಿಎಂ ಡಿಕೆಶಿ ಮೂರು ದಿನ ಜನಸ್ಪಂದನಾ ಕಾರ್ಯಕ್ರಮ ಮಾಡಿದ್ದಾರೆ. ಉಪಚುನಾವಣೆ ದೃಷ್ಠಿಯಲ್ಲಿ ಮಾಡಿರುವು ಸರ್ಕಾರಿ ಸಂತೆಯದು. ಯಾವುದೇ ಗುರಿ ಇಲ್ಲದೆ, ಯೋಜನೆ ಇಲ್ಲದೆ ಮಾಡಿರುವ ಕಾರ್ಯಕ್ರಮ. ಅಧಿಕಾರಿಗಳನ್ನು ಚನ್ನಪಟ್ಟಣಕ್ಕೆ ಕರೆತಂದು ಹೆದರಿಸಿ ಜನರಿಗೆ ಆಸೆ ತೋರಿಸುವ ಕೆಲಸ ಮಾಡಿದ್ದಾರೆ. ಕಳೆದ ಒಂದು ಕಾಲು ವರ್ಷದ ಅವಧಿಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ. ಸರ್ಕಾರದ ನಿಯಮಗಳನ್ನ ಗಾಳಿಗೆ ತೂರಿ ಒನ್ ಮ್ಯಾನ್ ಶೋ ಮಾಡಿದ್ದಾರೆ. ಎಂಪಿಗೆ ಆಹ್ವಾನ ನೀಡಿಲ್ಲ, ನನಗೆ ಆಹ್ವಾನ ನೀಡಿಲ್ಲ. ಸರ್ಕಾರದ ಪ್ರೋಟೋಕಾಲ್ ಸರಿಯಾಗಿ ಅನುಸರಿಸದೆ ಕಾರ್ಯಕ್ರಮ ಮಾಡಿದ್ದಾರೆ. ಕೇವಲ ಚುನಾವಣಾ ತಂತ್ರಕ್ಕೆ ಜನ ಸೇರಿಸಿ ಜಾತ್ರೆ ಮಾಡಿದ್ದಾರೆ ಎಂದು ಟೀಕಿಸಿದರು.
ಸರ್ಕಾರ ಬಂದಾಗಿನಿಂದಲೂ ಚನ್ನಪಟ್ಟಣಕ್ಕೆ ಬಂದಿರಲಿಲ್ಲ. ಈಗ ಚನ್ನಪಟ್ಟಣ ಖಾಲಿ ಇದೆ, ಬಂದಿದ್ದೇನೆ ಅಂತ ಸುಳ್ಳು ಹೇಳುತ್ತಿದ್ದಾರೆ. ಜನರಿಗೆ ಮನೆ ಕೊಡುತ್ತೇವೆ, ಸೈಟ್ ಕೊಡ್ತೀನಿ ಎಂದು ಸುಳ್ಳು ಆಶ್ವಾಸನೆ ಕೊಡುತ್ತಿದ್ದಾರೆ. ಟೌನ್ ವ್ಯಾಪ್ತಿ ಬಿಟ್ಟರೆ ಬಹುತೇಕ ತಾಲೂಕಿನ ಜನತೆಗೆ ಮನೆ ಸಮಸ್ಯೆ ಇಲ್ಲ. ಚುನಾವಣೆಗೆ ಟೈಂ ನಲ್ಲಿ ಮನೆ ಕೊಡುತ್ತೇವೆಂದು ಎನ್ನುವುದು ಸುಳ್ಳು ಎಂದರು.
ಅವರ ಸರ್ಕಾರ ಕುಸಿಯುವ ಹಂತ ತಲುಪಿದೆ. ಅವರ ಸರ್ಕಾರದಲ್ಲೇ ಸಾಕಷ್ಟು ಗೊಂದಲವಿದೆ. ನೂರೆಂಟು ಹಗರಣಗಳು ಬೆಳಕಿಗೆ ಬರುತ್ತಿದೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ನೋಡಿದ್ದೇವೆ. ಉಪಚುನಾವಣೆ ಹೊತ್ತಿಗೆ ಅವರ ಸರ್ಕಾರ ಇರುತ್ತೋ, ಇರಲ್ವೋ ಗೊತ್ತಿಲ್ಲ ಎಂದು ಡಿಕೆ ಶಿವಕುಮಾರ್ ಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಟಾಂಗ್ ನೀಡಿದರು.
ಟಾಪ್ ನ್ಯೂಸ್
![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-415x219.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು](https://www.udayavani.com/wp-content/uploads/2024/07/6-8-150x90.jpg)
Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು
![Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ](https://www.udayavani.com/wp-content/uploads/2024/07/SWAMIJI-150x98.jpg)
Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ
![Bar](https://www.udayavani.com/wp-content/uploads/2024/07/Bar-150x84.jpg)
Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!
![Darshan-case](https://www.udayavani.com/wp-content/uploads/2024/07/Darshan-case-150x90.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ
![R.Ashok](https://www.udayavani.com/wp-content/uploads/2024/07/R.Ashok_-1-150x90.jpg)
Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್
MUST WATCH
ಹೊಸ ಸೇರ್ಪಡೆ
![Ronny](https://www.udayavani.com/wp-content/uploads/2024/07/Ronny-150x83.jpg)
Ronny; ಕಿರಣ್ ರಾಜ್ ನಟನೆಯ ಸಿನಿಮಾದ ಹಾಡು ಬಂತು
![Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ](https://www.udayavani.com/wp-content/uploads/2024/07/Exchange-150x79.jpg)
Karachi: ಪಾಕಿಸ್ತಾನ್ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ
![Why did he ignore the BCCI instruction to play Ranji? Ishaan replied](https://www.udayavani.com/wp-content/uploads/2024/07/ishan-150x83.jpg)
IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್
![Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/haryana-150x84.jpg)
Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು
![Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ](https://www.udayavani.com/wp-content/uploads/2024/07/11-5-150x90.jpg)
Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.