ರಸ್ತೆಯಲ್ಲಿಯೇ ಕೋಳಿ ತ್ಯಾಜ್ಯ ವಿಲೇವಾರಿ


Team Udayavani, Jan 24, 2019, 7:21 AM IST

koli.jpg

ಚನ್ನಪಟ್ಟಣ: ಸಮರ್ಪಕವಾಗಿ ವಿಲೇವಾರಿ ಮಾಡಬೇಕಾದ ಕೋಳಿ ತ್ಯಾಜ್ಯವನ್ನು ಕೆಲ ಅಂಗಡಿಗಳ ಮಾಲೀಕರು ರಸ್ತೆ ಬದಿ ಮತ್ತು ನಿರ್ಜನ ಪ್ರದೇಶಗಳಲ್ಲಿ ಬಿಸಾಡಿ ಹೋಗುತ್ತಿದ್ದು, ದುರ್ವಾಸನೆ ಬೀರುವ ಈ ತ್ಯಾಜ್ಯದಿಂದ ರಸ್ತೆಯಲ್ಲಿ ಸಂಚಾರಿಸುವ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ.

ನಿರ್ಜನ ಪ್ರದೇಶದಲ್ಲಿ ಗುಂಡಿತೆಗೆದು, ಕೋಳಿ ತ್ಯಾಜ್ಯವನ್ನು ಅದರಲ್ಲಿ ಮುಚ್ಚಿ ವಿಲೇವಾರಿ ಮಾಡಬೇಕಾಗಿರುವುದು ನಿಯಮವಾಗಿದ್ದು, ಕೆಲವರು ಈ ಗೋಜಿಗೆ ಹೋಗದೆ ಪ್ಲಾಸ್ಟಿಕ್‌ ಚೀಲಗಳಲ್ಲಿ ತ್ಯಾಜ್ಯವನ್ನು ತುಂಬಿ ರಸ್ತೆ ಬದಿಯಲ್ಲಿ ಬಿಸಾಡಿ ಹೋಗುತ್ತಿರುವುದರಿಂದ ಆ ಪ್ರದೇಶದ ವಾತಾವರಣ ಕಲುಷಿತವಾಗುವ ಜತೆಗೆ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದೆ.

ಪ್ರಯಾಣಿಕರ ಸಂಚಾರಕ್ಕೆ ಅಡ್ಡಿ: ಬೆಂಗಳೂರು- ಮೈಸೂರು ಹೆದ್ದಾರಿ, ಪಟ್ಟಣದ ಹೊರ ವಲಯದ ರಾಮಮ್ಮನ ಕೆರೆ ಏರಿ, ಸಾತನೂರು ರಸ್ತೆ, ಗ್ರಾಮಾಂತರ ಪ್ರದೇಶದ ದೇವರಹೊಸಹಳ್ಳಿ, ಕೂಡೂರು, ಹೊಂಗನೂರು, ಕೋಡಂಬಹಳ್ಳಿ ಸೇರಿದಂತೆ ಹಲವೆಡೆ ರಸ್ತೆ ಬದಿಯಲ್ಲಿ ಕೋಳಿ ತ್ಯಾಜ್ಯವನ್ನು ವಿಲೇವಾರಿ ಮಾಡುತ್ತಿರುವುದರಿಂದ ಸಂಚಾರ ಮಾಡುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ತ್ಯಾಜ್ಯ ದುರ್ವಾಸನೆ ಬೀರುವುದರ ಜತೆಗೆ ಇದನ್ನು ತಿನ್ನಲು ಆಗಮಿಸುವ ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಇನ್ನಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಬದಿಯಲ್ಲಿಯೇ ಕೋಳಿ ಮಾಂಸ ಆಸ್ವಾದಿಸುತ್ತಾ, ರಸ್ತೆಯಲ್ಲಿ ಹೋಗುವ ಸಾರ್ವಜನಿಕರ ಮೇಲೆ ನಾಯಿಗಳು ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.

ಏನಿದು ಕೋಳಿ ತ್ಯಾಜ್ಯ?: ಕೋಳಿಯನ್ನು ಸ್ವತ್ಛ ಮಾಡಿದ ನಂತರ ಅದರ ದೇಹದಲ್ಲಿನ ನಿರುಪಯುಕ್ತ ಭಾಗಗಳನ್ನೇ ಕೋಳಿ ತ್ಯಾಜ್ಯ ಎನ್ನಲಾಗುತ್ತದೆ. ಕೋಳಿಯನ್ನು ಸ್ವತ್ಛ ಮಾಡುವಾಗ ಅದರ ದೇಹದೊಳಗಿನ ಕರುಳು, ಮೇಲಾºಗದ ರೆಕ್ಕೆ ಪುಕ್ಕಗಳು, ಕಾಲಿನ ಸ್ವಲ್ಪ ಭಾಗವನ್ನು ತೆಗದು ಹಾಕಲಾಗುತ್ತದೆ.

ನಂತರ ಅದನ್ನು ಒಂದೆಡೆ ಶೇಖರಿಸಿ ವಿಲೇವಾರಿ ಮಾಡಲಾಗುತ್ತದೆ. ಈ ತ್ಯಾಜ್ಯವನ್ನು ನಿರ್ಜನ ಪ್ರದೇಶಗಳಲ್ಲಿ ಗುಂಡಿ ತೆಗೆದು, ಕೋಳಿ ತ್ಯಾಜ್ಯ ಮುಚ್ಚುವ ಮೂಲಕ ವಿಲೇವಾರಿ ಮಾಡಬೇಕಾಗಿದೆ. ಕೆಲ ಕೋಳಿ ಅಂಗಡಿ ಮಾಲೀಕರು ಇದನ್ನು ಅನುಸರಿಸಿದರೆ ಇನ್ನೂ ಕೆಲವರು ರಸ್ತೆ ಬದಿಯಲ್ಲಿ ಬಿಸಾಡಿ ಕೈ ತೊಳೆದುಕೊಳ್ಳುತ್ತಿದ್ದಾರೆ.

ಬೀದಿ ನಾಯಿಗಳ ಹಾವಳಿ: ಎಲ್ಲೆಂದರಲ್ಲಿ ಬಿಸಾಡುತ್ತಿರುವ ಈ ಕೋಳಿ ತ್ಯಾಜ್ಯದಿಂದಾಗಿ ಬೀದಿ ನಾಯಿಗಳಿಗೆ ಪ್ರತಿದಿನ ಮೃಷ್ಠಾನ್ನ ಭೋಜನವಾಗಿದೆ. ಇದನ್ನು ತಿಂದು ದಷ್ಟಪುಷ್ಟವಾಗಿ ಕೊಬ್ಬಿರುವ ಬೀದಿ ನಾಯಿಗಳು ಕೆರೆಯಂಗಳದಲ್ಲಿ ಒಂಟಿಯಾಗಿ ಮೇಯುವ ಕುರಿ, ದನ, ಕರುಗಳ ಮೇಲೆ ದಾಳಿ ನಡೆಸಲು ಮುಂದಾಗುತ್ತಿವೆ.

ಇದರ ಜತೆಗೆ ರಸ್ತೆ ಬದಿಯಲ್ಲಿ ಸಂಚಾರಿಸುವ ಸಾರ್ವಜನಿಕರ ಮೇಲೂ ಸಹ ದಾಳಿ ನಡೆಸುತ್ತಿವೆ. ತಾಲೂಕಿನ ದೇವರಹೊಸಹಳ್ಳಿ ಭಾಗದಲ್ಲಿ ತ್ಯಾಜ್ಯವನ್ನು ತಿನ್ನಲು ಕಾಡಿನಿಂದ ಚಿರತೆಗಳೂ ಸಹ ಗ್ರಾಮಗಳತ್ತ ಬರುತ್ತಿದ್ದು, ಆ ಭಾಗದಲ್ಲಿ ತ್ಯಾಜ್ಯದ ಜತೆಗೆ ಕರುಗಳು, ಕುರಿಗಳನ್ನೂ ಸಹ ತಿಂದಿರುವ ಉದಾಹರಣೆಗಳು ಸಾಕಷ್ಟಿವೆ.

ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ: ಎಲ್ಲೆಂದರಲ್ಲಿ ತ್ಯಾಜ್ಯ ಬಿಸಾಡಿ ಕೈತೊಳೆದು ಕೊಳ್ಳುತ್ತಿರುವ ಕೋಳಿ ಅಂಗಡಿಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾದ ತಾಲೂಕು ಆಡಳಿತ ಹಾಗೂ ಆರೋಗ್ಯಾಧಿಕಾರಿಗಳ ಜಾಣ ಕುರುಡಿನಿಂದ ಈ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಸಂಬಂಧಿಸಿದ ಗ್ರಾಮ ಪಂಚಾಯ್ತಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕೃತ್ಯ ಎಸಗುತ್ತಿರುವ ಕೋಳಿ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಜತೆಗೆ ಅವರ ಅಂಗಡಿ ಪರವಾನಗಿಯನ್ನೇ ರದ್ದುಪಡಿಸಬೇಕು. ನಿರ್ಜನ ಪ್ರದೇಶಗಳಲ್ಲಿ ಸಮರ್ಪಕವಾಗಿ ವಿಲೇವಾರಿ ಮಾಡಲು ಕಟ್ಟುನಿಟ್ಟಿನ ಸೂಚನೆ ಹೊರಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಮಾಡಿದ್ದಾರೆ. 

ಪಟ್ಟಣ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಕೋಳಿ ಅಂಗಡಿಗಳ ಮಾಲೀಕರಿಗೆ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಸೂಚಿಸಲಾಗುವುದು. ನಿಯಮ ಅನುಸರಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಲು ಆರೋಗ್ಯ ವಿಭಾಗದ ಅಧಿಕಾರಿಗಳನ್ನು ಪರಿಶೀಲನೆಗೆ ಕಳುಹಿಸಲಾಗುವುದು. ನಿಯಮ ಉಲ್ಲಂಘನೆ ಮಾಡುವವರಿಗೆ ಪರವಾನಗಿ ರದ್ದುಪಡಿಸಲಾಗುವುದು.
-ಪುಟ್ಟಸ್ವಾಮಿ, ಪೌರಾಯುಕ್ತ

ರಸ್ತೆ ಬದಿಯಲ್ಲಿ ಕೋಳಿ ತ್ಯಾಜ್ಯ ಬಿಸಾಡುವುದರಿಂದ ನಾಯಿಗಳ ಅದನ್ನು ತಿನ್ನಲು ಬಂದು ಪಕ್ಕದಲ್ಲಿ ಪಾದಚಾರಿಗಳ ಮೇಲೆ ಎರಗುತ್ತಿವೆ. ಇದರಿಂದ ರಸ್ತೆ ಸಂಚಾರ ಮಾಡಲು ಭಯವಾಗುತ್ತಿದೆ. ಸಂಬಂಧಪಟ್ಟ ಆಡಳಿತ ಈ ಬಗ್ಗೆ ಗಮನಹರಿಸಿ ಸಮಸ್ಯೆ ಸರಿಪಡಿಸಬೇಕು.
-ಮಹೇಂದ್ರಕುಮಾರ್‌, ಚನ್ನಪಟ್ಟಣ

* ಎಂ.ಶಿವಮಾದು

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

cmNandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.