ಪ್ರತಿಮೆ ಅನಾವರಣಕ್ಕೆ ಡಿ.26ರ ಗಡುವು

ಅಂಬೇಡ್ಕರ್‌, ಕೆಂಪೇಗೌಡರ ಪ್ರತಿಮೆ ವಿವಿಧ ಸಂಘಟನೆಗಳ ಪದಾಧಿಕಾರಿಗಳಿಂದಲೇ ಅನಾವರಣ: ಎಚ್ಚರಿಕೆ

Team Udayavani, Oct 27, 2021, 6:09 PM IST

ಪ್ರತಿಮೆ ಅನಾವರಣಕ್ಕೆ ಡಿ.26ರ ಗಡುವು

ರಾಮನಗರ: ನಗರದ ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕೀರ್ಣದ (ಡೀಸಿ ಕಚೇರಿ) ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ನಾಡ ಪ್ರಭು ಕೆಂಪೇಗೌಡ ಅವರ ಪ್ರತಿಮೆಗಳನ್ನು ಇದೇ ಡಿ.6ರೊಳಗೆ ಅನಾವರಣಗೊಳಿಸದಿದ್ದರೆ ತಾವೇ ಸ್ವತಃ ಎರಡೂ ಪ್ರತಿಮೆಗಳನ್ನು ಅನಾವರಣಗೊಳಿಸುವುದಾಗಿ ದಲಿತ ಸಂಘಟನೆಗಳ ಮಹಾ ಒಕ್ಕೂಟ ಮತ್ತು ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ವೇಳೆ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಪ್ರತಿಭಟನೆ ವೇಳೆ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿದರು.

 ಕೋವಿಡ್‌ ನೆಪ ಬೇಡ: ಮುಖಂಡ ಕೋಟೆ ಕುಮಾರ್‌ ಮಾತನಾಡಿ, ಡಾ. ಬಿ.ಆರ್‌.ಅಂಬೇಡ್ಕರ್‌ ಮತ್ತು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ 2 ವರ್ಷಗಳಿಗೂ ಹೆಚ್ಚು ಸಮಯವಾಗಿದೆ. ಆದರೆ ಕೋವಿಡ್‌ ನೆಪವೊಡ್ಡಿ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಮೆಗಳ ಅನಾವರಣಕ್ಕೆ ಮುಂದಾಗಿಲ್ಲ. ಚುನಾವಣೆಗಳು ಮತ್ತು ಸರ್ಕಾರದ ಎಲ್ಲಾ ಕಾರ್ಯಕ್ರಮಗಳು ಸರಾಗವಾಗಿ ನಡೆಯುತ್ತಿದೆ. ಆದರೆ ಪ್ರತಿಮೆಗಳ ಅನಾವರಣದ ವಿಚಾರ ಬಂದಾಗ ಕೋವಿಡ್‌ ನಿಯಮ ಅಡ್ಡಿಯಾಗುತ್ತವೆಯೇ? ಎಂದು ಪ್ರಶ್ನಿಸಿದರು. ಕೋವಿಡ್‌ ಸೋಂಕಿನ ಆತಂಕವೇ ಇಲ್ಲದೆ ಚುನಾವಣೆಗಳು ನಡೆಯುತ್ತಿವೆ.  ಪ್ರತಿಮೆಗಳ ಅನಾವರಣಕ್ಕೆ ಸೋಂಕು ಅಡ್ಡಿಯಾಗುವುದೇ? ಎಂದರು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ತಕ್ಷಣ ಈ ಪ್ರತಿಮೆಗಳ ಅನಾವರಣಕ್ಕೆ ದಿನಾಂಕ ನಿಗದಿಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:- ಬೇರೆ ಶಾಲೆಗೆ ಸೇರಲು ಟೀಸಿ ನೀಡದ ಶಾಲೆ

ನಿರಂತರ ಹೋರಾಟ: ವಿಶ್ವ ಶ್ರೇಷ್ಠ ಸಂವಿಧಾನ ಕೊಟ್ಟ ಬಾಬಾ ಸಾಹೇಬರ ಪ್ರತಿಮೆ ಮತ್ತು ನಾಡು ಕಟ್ಟಿದ ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ನಿರಂತರ ಹೋರಾಟ ನಡೆಸಿದ ನಂತರ ಡಿ.ಕೆ.ಶಿವಕುಮಾರ್‌ರ ಶ್ರಮದಿಂದ ಜಿಲ್ಲಾ ಸರ್ಕಾರಿ ಕಚೇರಿಗಳ ಆವರಣದಲ್ಲಿ ಸ್ಥಾಪನೆಯಾಗಿದೆ. ಆದರೆ ಹಾಲಿ ಸರ್ಕಾರ ಕೋವಿಡ್‌ ನೆಪವೊಡ್ಡಿ ಪ್ರತಿಮೆಗಳ ಅನಾವರಣವನ್ನೇ ಮಾಡಿಲ್ಲ.

ಇಲ್ಲ ಸಲ್ಲದ ನೆಪ ಒಡ್ಡದೆ ಪ್ರತಿಮೆಗಳನ್ನು ಅನಾವರಣಗೊಳಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪ್ರಮುಖರಾದ ಶಿವಶಂಕರ್‌, ಗುಡ್ಡೆ ವೆಂಕಟೇಶ್‌, ಪುಟ್ಟಸ್ವಾಮಿ, ಚಲವರಾಜು, ಗೋವಿಂದರಾಜು, ಶೇಖರ್‌, ಪ್ರಕಾಶ, ರಮೇಶ್‌, ಭೈರವ, ಗುರುಮಲ್ಲಯ್ಯ, ನಿಖೀಲ್‌ ಸಜ್ಜೆಲಿಂಗಯ್ಯ ಮತ್ತಿತರರಿದ್ದರು.

ಎರಡು ವರ್ಷ ಕಳೆದರೂ ಪ್ರತಿಮೆ ಅನಾವರಣ ಇಲ್ಲ – ದಲಿತ ಸಂಘಟನೆಗಳ ಮಹಾ ಒಕ್ಕೂಟದ ಅಧ್ಯಕ್ಷ ಎಂ.ಜಗದೀಶ್‌ ಮಾತನಾಡಿ, ಬಾಬಾ ಸಾಹೇಬರ ಮತ್ತು ಕೆಂಪೇಗೌಡರ ಪ್ರತಿಮೆ ಅನಾವರಣವನ್ನು ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಡಿ.6 ಅಂಬೇಡ್ಕರ್‌ ಅವರ ಪರಿನಿರ್ವಾಣ ದಿನದೊಳಗೆ ನೆರೆವೇರಿಸಬೇಕು.

ಇದು ಸಾಧ್ಯವಾಗದಿದ್ದರೆ ಡಿ.6ರಂದು ತಮ್ಮ ಸಂಘಟನೆಯೂ ಸೇರಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಎರಡೂ ಪ್ರತಿಮೆ ಅನಾವರಣಗೊಳಿಸುವುದಾಗಿ ಎಚ್ಚರಿಸಿದರು. ಇಬ್ಬರೂ ಮಹನೀಯರ ಆದರ್ಶ ಸಮಾಜಕ್ಕೆ ಮಾರ್ಗದರ್ಶಕ. 2 ವರ್ಷ ಕಳೆದರೂ ಪ್ರತಿಮೆ ಅನಾವರಣಗೊಳಿಸದೆ ಮಹನೀಯರನ್ನು ಅವಮಾನಿಸಿದಂತಾಗಿದೆ ಎಂದು ದೂರಿದರು. ಪ್ರತಿ ಭಟನಾಕಾರರು ನೀಡಿದ ಮನವಿಯನ್ನು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಸ್ವೀಕರಿಸಿದರು. ಪ್ರತಿಮೆಗಳ ಅನಾವರಣದ ಕುರಿತು ತಾವು ಜಿಲ್ಲಾಧಿಕಾರಿಗಳ ಬಳಿ ಚರ್ಚೆ ಮಾಡುವುದಾಗಿ ಭರವಸೆ ನೀಡಿದರು. ಇದೇ ವೇಳೆ ಪ್ರತಿಭಟನಾಕಾರರು ಡಿ.6ರೊಳಗೆ ಜಿಲ್ಲಾಡಳಿತ ತಮ್ಮ ಮನವಿಗೆ ಸ್ಪಂದಿಸದಿದ್ದರೆ, ತಾವೇ ಅನಾವರಣಗೊಳಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.