ದೇವೆಗೌಡರ ಕಾಲಿಗೆರಗಿದ ಡಿ.ಕೆ.ಸುರೇಶ್


Team Udayavani, Mar 25, 2019, 3:44 PM IST

deve-kal

ಕನಕಪುರ: ಹಳೆ ಮೈಸೂರು ಭಾಗದಲ್ಲಿ ರಾಜಕೀಯ ದೃವೀಕರಣಕ್ಕೆ ಹೆಬ್ಟಾಗಿಲಾದ ರಾಮನಗರ ಜಿಲ್ಲೆಯಲ್ಲಿ ಬದ್ಧ ವೈರಿಗಳಂತೆ ಕಾದಾಡುತ್ತಿದ್ದ ಎಚ್‌ಡಿಡಿ ಮತ್ತು ಡಿಕೆಶಿ ಕುಟುಂಬ ಕಾದಾಟ ಬಿಟ್ಟು ಕೈ ಜೋಡಿಸಿದೆ. ಸಂಸದ ಡಿ.ಕೆ.ಸುರೇಶ್‌ ಇತ್ತೀಚೆಗೆ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಗರಿಗೆದರಿದ ಚುನಾವಣೆಯಲ್ಲಿ ಅನೇಕ ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ರಾಜಕಾರಣಿಗಳ ನಡೆಗಳು ಕನಕಪುರದಲ್ಲಿ ಚರ್ಚೆಗೆ ಮುನ್ನುಡಿ ಬರೆದಿದೆ. ಮತ್ತೂಂದೆಡೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಯನ್ನು ಸಹಿಸಿಕೊಳ್ಳದ ತಳಮಟ್ಟದ ಕಾರ್ಯಕರ್ತರಲ್ಲಿ ಅಸಮಧಾನ ಹುಟ್ಟು ಹಾಕಿರುವುದು ಎರಡು ಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ ಪರಿಣಮಿಸಿದೆ.

ದೇವೇಗೌಡರ ಕಾಲಿಗೆ ಬಿದ್ದ ಮರ್ಮ ಏನು?: ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಮತ್ತು ಅದಕ್ಕೂ ಹಿಂದೆ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಪರಸ್ಪರ ಮಾತಿನ ಯುದ್ಧ ಮಾಡುತ್ತಿದ್ದರು. ಕಾಂಗ್ರೆಸ್‌ ಪ್ರಮುಖರು ಮಾಜಿ ಪ್ರಧಾನಿ ದೇವೇಗೌಡರನ್ನು ಒಬ್ಬ ಗ್ರಾಮ ಪಂಚಾಯ್ತಿ ಸದಸ್ಯನಿಗೆ ಹೋಲಿಕೆ ಮಾಡಿ ಜರಿಯುತ್ತಿದ್ದವರು, ಇಂದು ಈ ಎಲ್ಲಾ ವೈರತ್ವವನ್ನು ಬದಿಗಿಟ್ಟುರುವುದು,

ಎಚ್‌ಡಿಡಿ ಕಾಲಿಗೆ ಬಿದ್ದು ನಮಸ್ಕರಿಸಿರುವುದು ಕನಕಪುರ ರಾಜಕಾರಣದ ಮಟ್ಟಿಗೆ ಚರ್ಚೆಯ ವಿಷಯವಾಗಿದೆ. ಸಂಸದರಾಗಿ ಪುನರಾಯ್ಕೆಗೆ ಡಿ.ಕೆ.ಸುರೇಶ್‌ ದೇವೇಗೌಡರ ಕಾಲು ಹಿಡಿದಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಕಳೆದ ವಿಧನಸಭಾ ಚುನಾವಣೆಯಲ್ಲಿ 47ರಿಂದ 50 ಸಾವಿರ ಮತಗಳು ಜೆಡಿಎಸ್‌ಗೆ ಹೋಗಿವೆ. ಪಕ್ಷ ಕಾಯುವ ಒಬ್ಬ ಮುಖಂಡನೂ ಇಲ್ಲದ ಕ್ಷೇತ್ರದಲ್ಲಿ ಅಷ್ಟು ಮತಗಳು ಹೇಗೆ ಹೋದವು ಎಂದು ಡಿ.ಕೆ.ಸು ತಮ್ಮ ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ.

ಅವು ಸ್ವಾಭಿಮಾನದ ಮತಗಳೂ ನೀವು ಜೆಡಿಎಸ್‌ ಕಾರ್ಯಕರ್ತರ ಜೊತೆಯಲ್ಲಿ ಗಲಾಟೆ ಮಾಡಿ, ಕಟ್ಟಿಕೊಂಡ ವೈರತ್ವದ ಮತಗಳು ಎಂದು ತಮ್ಮ ಪಕ್ಷದ ಕಾರ್ಯಕರ್ತರನ್ನೇ ತರಾಟೆಗೆ ತೆಗೆದುಕೊಂಡಿದ್ದರು. ಈ ಚುನಾವಣೆಯಲ್ಲಿ ಆ ಸ್ವಾಭಿಮಾನದ ಮತಗಳು ತಮ್ಮತ್ತ ಸೆಳೆಯಲು ಡಿ.ಕೆ.ಸುರೇಶ್‌ ದೇವೇಗೌಡರ ಮುಂದೆ ಸಾಷ್ಟಾಂಗ ಹಾಕಿದ್ದಾರೆ ಎಂಬ ಮಾತುಗಳು ತಾಲೂಕಿನಲ್ಲಿ ಕೇಳಿ ಬಂದಿದೆ.

ಕಾನೂನು ಕುಣಿಕೆಗೂ ಎಚ್‌ಡಿಕೆ ಮುಂದಾಗಿದ್ದರು: ಎಚ್‌.ಡಿ.ಕುಮಾರಸ್ವಾಮಿ ಹಿಂದೊಮ್ಮೆ ಡಿಕೆಶಿಯವರನ್ನು ಕಾನೂನು ಕುಣಿಕೆಗೆ ಸಿಲುಕಿಸಿ ಕನಕಪುರದ ಆಪ್ತರಿಂದ ಹೈಕೋರ್ಟ್‌ ಮತ್ತು ಸುಪ್ರಿಂ ಕೋರ್ಟ್‌ನಲ್ಲಿ ಪ್ರಕರಣ ಹಾಕಿಸಿದ್ದರು. ರಾಜ್ಯದ ಪ್ರತಿಷ್ಠಿತ ಮಠಾಧೀಶರೊಬ್ಬರ ಮಧ್ಯಸ್ಥಿತಿಕೆಯಿಂದ ರಾಜಿ ಸಂಧಾನದ ಮೂಲಕ ಈ ಪ್ರಕರಣಕ್ಕೆ ಅಂತ್ಯ ಕಂಡಿತ್ತು. ಇಷ್ಟು ವಿರೋಧ ಇದ್ದ ಇಬ್ಬರು ಇಂದು ಒಟ್ಟಾಗಿರುವುದು ಕಾರ್ಯಕರ್ತರನ್ನು ದಂಗಾಗಿಸಿದೆ.

ಕಾರ್ಯಕರ್ತರಿಗೆ ಮುಜುಗರ: ರಾಜ್ಯ ರಾಜಕಾರಣದಲ್ಲಿ ನುರಿತ ರಾಜಕಾರಣಿ ಮತ್ತು ರಾಜಕೀಯ ಪಟ್ಟುಗಳ ಚಾಣಾಕ್ಷರು ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್‌ ತನ್ನ ಚಾಣಾಕ್ಷ ನಡೆಗಳಿಂದಲೇ ತಮ್ಮ ರಾಜಕೀಯ ನೆಲೆಗಟ್ಟನ್ನು ಬದ್ರಮಾಡಿಕೊಂಡರೆ ಇತ್ತ ಸಹೋದರ ಡಿ.ಕೆ. ಸುರೇಶ್‌ ಅವರ ನಡೆಯಿಂದಲೇ ಕಾರ್ಯಕರ್ತರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳುವಂತೆ ಮಾಡುತ್ತಿದ್ದರು.

ಇಂದು ಎಚ್‌ಡಿಡಿ ಕಾಲಿಗೆ ಬಿದ್ದದ್ದು ಮತ್ತು ತಲೆ ತಗ್ಗಿಸಿ ನಿಂತದ್ದನ್ನು ಕಂಡ ಜೆಡಿಎಸ್‌ ಕಾರ್ಯಕರ್ತರು ಕಾಂಗ್ರೆಸ್‌ ಕಾರ್ಯಕರ್ತರನ್ನು ಲೇವಡಿ ಮಾಡುತ್ತಿರುವುದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಮುಜುಗರ ತರಿಸಿದ್ದು, ಅನ್ನುವ ಹಾಗಿಲ್ಲ ಅನುಭವಿಸುವ ಹಾಗಿಲ್ಲ ಎನ್ನುವಂತಾಗಿದೆ. ಕಾರ್ಯಕರ್ತರ ಸ್ಥಿತಿ.

ಡಿ.ಕೆ.ಶಿ ಹುಟ್ಟನ್ನೇ ಪ್ರಶ್ನಿಸಿದ್ದರು?: ಕಳೆದ ಕೆಲ ವರ್ಷಗಳಿಂದ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಇಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅಂದು ಸಹ ಮುಖ್ಯಮಂತ್ರಿಯಾಗಿದ್ದರೂ ಅಂದು ಡಿಕೆಶಿ ವಿರುದ್ಧ ಯಾವ ಮಟ್ಟದ ವೈರತ್ವ ಇತ್ತು ಎಂದರೆ ಬಹಿರಂಗವಾಗಿ ಡಿಕೆಶಿ ಹುಟ್ಟನ್ನೇ ಪ್ರಶ್ನಿಸಿ, ರಾಜ್ಯವ್ಯಾಪಿ ಚರ್ಚೆ ಹುಟ್ಟುಹಾಕಿ ಸಾತನೂರಿನಲ್ಲಿ ನಾಟಕೀಯ ಬೆಳವಣಿಗೆಗಳು ನಡೆದು ಹೊಗಿದ್ದವು. ಇಂದು ಅವೆಲ್ಲವನ್ನು ಮರೆತು ಕೈಕೈ ಜೋಡಿಸಿರುವುದು ಕಾರ್ಯಕರ್ತರಿಗೆ ಅರಗಿಸಿಕೊಳ್ಳಲಾಗದ ಸತ್ಯವಾಗಿದೆ.

* ಉಮೇಶ್‌ ಬಾಣಗಹಳ್ಳಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.