
Politics; ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರುವುದು ಡೌಟ್…: ಯೋಗೇಶ್ವರ್ ಬಾಂಬ್
Team Udayavani, Oct 2, 2023, 12:25 PM IST

ರಾಮನಗರ: ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿ, ರಾಜಕೀಯ ಪಥ ಬದಲಾವಣೆಯಾಗಲಿದೆ. ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆಯೇ ಇದಕ್ಕೆ ಕಾರಣ. 2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆಯಿದೆ. ಕಾಂಗ್ರೆಸ್ ನ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರು ವೈಯಕ್ತಿಕವಾಗಿ ನನ್ನ ಜೊತೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ. ಅವರಿಗೆ ಶಾಸಕರ ಕಾರ್ಯ ನಿರ್ವಹಿಸಲಾಗುತ್ತಿಲ್ಲ ಎಂದರು.
ಸರ್ಕಾರ ಐದು ಗ್ಯಾರಂಟಿ ಕೊಟ್ಟಿದೆ ಹಾಗಾಗಿ ಅನುದಾನ ಕೊಡಲ್ಲವೆಂದು ಹೇಳಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಸರ್ಕಾರದಲ್ಲಿ ದುಡ್ಡಿಲ್ಲ. ಕಾಂಗ್ರೆಸ್ ಶಾಸಕರು ನಿರುದ್ಯೋಗಿಗಳಾಗಿದ್ದಾರೆ. ಅವರಿಗೆ ರಾಜಕೀಯ ಭವಿಷ್ಯದ ಆತಂಕವಿದೆ. ಹಾಗಾಗಿ ಇದರ ಪರಿಣಾಮವನ್ನು ಸಂಕ್ರಾಂತಿ ವೇಳೆಗೆ ಎಲ್ಲರೂ ನೋಡುತ್ತೀರಿ ಎಂದರು.
ನಾವು ಯಾವುದೇ ರೀತಿಯ ಆಪರೇಷನ್ ಮಾಡುತ್ತಿಲ್ಲ. ನಮ್ಮ ಸಂಪರ್ಕದಲ್ಲಿ ಯಾರೂ ಇಲ್ಲ. ಡಿಕೆ ಶಿವಕುಮಾರ್ ರೀತಿ ಆಪರೇಷನ್ ಹಸ್ತದ ಕೆಲಸವನ್ನೂ ನಾವು ಮಾಡಲ್ಲ. ಸದ್ಯ ನನಗಿರುವ ಮಾಹಿತಿ ಪ್ರಕಾರ ಹೇಳಿದ್ದೇನೆ. ಖಾಸಗಿಯಾಗಿ ಸಿಕ್ಕಾಗ ಕೆಲವರು ನೋವನ್ನ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕರೆ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಸಿ.ಪಿ.ಯೋಗೇಶ್ವರ್ ರಾಜಕೀಯ ಭವಿಷ್ಯ ನುಡಿದರು.
ಮೈತ್ರಿ ಅನಿವಾರ್ಯ: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಪಿ.ಯೋಗೇಶ್ವರ್, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಲು ಮೈತ್ರಿ ಅನಿವಾರ್ಯ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಮನಕಾರಿ ಆಡಳಿತ ಮಾಡುತ್ತಿದೆ. ಡಿಕೆ ಶಿವಕುಮಾರ್ ಆಪರೇಷನ್ ಹಸ್ತ ಎಂದು ಪ್ರಾರಂಭ ಮಾಡಿದ್ದಾರೆ. ಹಾಗಾಗಿ ಅವರನ್ನ ಎದುರಿಸಲು ಹೊಂದಾಣಿಕೆ ಆಗಿದೆ. ಇದರಿಂದ ಬಿಜೆಪಿ-ಜೆಡಿಎಸ್ ಎರಡೂ ಪಕ್ಷಕ್ಕೂ ಅನುಕೂಲವಾಗಲಿದೆ ಎಂದರು.
ಮೈತ್ರಿ ಬಗ್ಗೆ ನಿನ್ನೆ ಜೆಡಿಎಸ್ ಸರ್ವಾನುಮತದ ಒಪ್ಪಿಗೆ ಪಡೆದಿದೆ. ಮುಂದಿನವಾರ ಚನ್ನಪಟ್ಟಣ ಬಿಜೆಪಿ ಸ್ಥಳೀಯ ನಾಯಕರ ಸಭೆ ನಡೆಸುತ್ತೇವೆ. ಮೈತ್ರಿ ಬಗ್ಗೆ ಬೂತ್ ಮಟ್ಟದ ನಾಯಕರು, ಕಾರ್ಯಕರ್ತರಿಗೆ ಮನವರಿಕೆ ಮಾಡುತ್ತೇವೆ. ಬಳಿಕ ಜೆಡಿಎಸ್ ನಾಯಕರ ಜೊತೆ ಮತ್ತೊಂದು ಸಭೆ ಮಾಡುತ್ತೇವೆ ಎಂದು ಹೇಳಿದರು.
ಟಿಕೆಟ್ ಹಂಚಿಕೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಬೆಂಗಳೂರು ಗ್ರಾಮಾಂತರ ವಿಚಾರದಲ್ಲಿ ಪಕ್ಷದ ವರಿಷ್ಠರು ಏನೇ ತೀರ್ಮಾನ ಮಾಡಿದ್ದರೂ ಬದ್ಧ. ಬಿಜೆಪಿಗೆ ಅವಕಾಶ ಸಿಕ್ಕಿದರೆ, ನನ್ನನ್ನು ಚುನಾವಣೆಗೆ ನಿಲ್ಲಲು ಸೂಚಿಸಿದರೆ ನಾನು ಸ್ಪರ್ಧೆ ಮಾಡುತ್ತೇನೆ. ಒಂದು ವೇಳೆ ಜೆಡಿಎಸ್ ಗೆ ಅವಕಾಶ ನೀಡಿದರೆ ಅವರಿಗೆ ಸಪೋರ್ಟ್ ಮಾಡುತ್ತೇವೆ. ಮುಂದಿನ ರಾಜಕೀಯ ದೃಷ್ಟಿಯಿಂದ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಸಿ.ಪಿ.ಯೋಗೇಶ್ವರ್ ಹೇಳಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ

WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.