ಪ್ರಭಾವ ಬಳಸಿ ರೈತರ ಹಣ ಲೂಟಿ
Team Udayavani, Jan 1, 2022, 5:12 PM IST
ಕನಕಪುರ: ಹಾಲು ಉತ್ಪಾದಕರ ಕಟ್ಟಡ ಕಾಮಗಾರಿಯಲ್ಲಿ ನಕಲಿ ಎಸ್ಟಿಮೆಟ್ ಸೃಷ್ಟಿಸಿ ಸಂಘದಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಹಾಗೂ ಹಾಲುಒಕ್ಕೂಟಗಳ ಶಿಬಿರದ ಉಪವ್ಯವಸ್ಥಾಪಕರು ಶಾಮಿಲಾಗಿರೈತರ ಹಣ ಲೂಟಿ ಮಾಡಿದ್ದಾರೆ ಎಂದು ಸಂಘದಸದಸ್ಯ ಕಾಳರಾಜು ಗಂಭೀರವಾದ ಆರೋಪ ಮಾಡಿದರು.
ತಾಲೂಕಿನ ಸಾತನೂರು ಹೋಬಳಿಯ ಕಬ್ಟಾಳು ಗ್ರಾಮದಲ್ಲಿ ಹಾಲು ಉತ್ಪಾದಕರಸಹಕಾರ ಸಂಘದಲ್ಲಿ ನಡೆದಿರುವ ಅವ್ಯವಹಾರದಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಡೇರಿ ಸಂಘದ ಅಧ್ಯಕ್ಷಸ್ವಾಮಿ ಮತ್ತು ಕಾಂಗ್ರೆಸ್ ಮುಖಂಡ ಹಾಗೂ ಜಿಪಂ ಮಾಜಿ ಸದಸ್ಯ ಶಂಕರ್ ತಮ್ಮ ರಾಜಕೀಯ ಪ್ರಭಾವ ಬಳಸಿ ಸಂಘದ ಮುಖ್ಯಕಾರ್ಯನಿರ್ವಹಕ ಅಧಿಕಾರಿಗೆ ತಪ್ಪು ಮಾಹಿತಿ ನೀಡಿ ಅವರ ಮೇಲೆ ಒತ್ತಡ ತಂದು 14 ಲಕ್ಷ ಹಣಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಒಂದು ವರ್ಷದ ಹಿಂದೆ ನೂತನವಾಗಿ ನಿರ್ಮಾಣ ಮಾಡಿರುವ ಹಾಲು ಉತ್ಪಾದಕರ ಸಹಕಾರ ಸಂಘದನೂತನ ಕಟ್ಟಡಕ್ಕೆ 11.92ಲಕ್ಷ ರೂ ಗೆ ಎಸ್ಟಿಮೆಟ್ರೂಪಿಸಲಾಗಿತ್ತು. ಆದರೆ ಕಾಮಗಾರಿ ನೆಪದಲ್ಲಿಹಣ ಲೂಟಿ ಮಾಡಲು ಸಂಘದ ಅಧ್ಯಕ್ಷ ಸ್ವಾಮಿ,ಆಡಳಿತ ಮಂಡಳಿಯ ಕೆಲ ನಿರ್ದೇಶಕರು,ಜಿಪಂ ಮಾಜಿ ಸದಸ್ಯ ಶಂಕರ್ ಅವರೊಂದಿಗೆಶಾಮಿಲಾಗಿದ್ದಾರೆ. ಶಂಕರ್ ತಮ್ಮರಾಜಕೀಯ ಪ್ರಭಾವ ಬಳಸಿ ಸಂಘದಮುಖ್ಯ ಕಾರ್ಯನಿರ್ವಾಹಕರಿಗೆ ತಪ್ಪುಮಾಹಿತಿ ನೀಡಿ 26 ಲಕ್ಷ ರೂಗೆ ನಕಲಿಎಸ್ಟಿಮೆಟ್ ಸೃಷ್ಟಿಸಿ ಸಂಘದಿಂದ 14 ಲಕ್ಷ.ವಿಧಾನ ಪರಿಷತ್ ಸದಸ್ಯರ ಅನುದಾನದಿಂದ3.ಹಾಲು ಒಕ್ಕೂಟದಿಂದ 3, ಕೆಎಂಎಫ್ ನಿಂದ 3, ಹಾಗೂ ಧರ್ಮ ಸ್ಥಳ ಸಂಸ್ಥೆಯಿಂದ1ಲಕ್ಷ ಸೇರಿ ಒಟ್ಟು 24 ಲಕ್ಷ ರೂ.ಹಣ ಬಿಡುಗಡೆಮಾಡಿಕೊಂಡು ಸಂಘದ ಸದಸ್ಯರಿಗೆ ವಂಚಿಸಿದ್ದಾರೆ.
ಸಹಕಾರ ಸಂಘದ ಮೇಲಧಿಕಾರಿಗಳು ಸೂಕ್ತ ತನಿಖೆನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಂಡು ರೈತರಹಣವನ್ನು ವಸೂಲಿ ಮಾಡಬೇಕು ಎಂದು ಸಂಘದ ಸದಸ್ಯ ಕಾಳರಾಜು ಆಗ್ರಹ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು
ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡುತ್ತಿದ್ದರಾ ಮುನಿರತ್ನ?
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.