BY Election: ಚನ್ನಪಟ್ಟಣಕ್ಕೆ ಪಟ್ಟು: ನಾಳೆ ಜೆಡಿಎಸ್ ಶಕ್ತಿಪ್ರದರ್ಶನ ?
Team Udayavani, Oct 21, 2024, 6:40 AM IST
ರಾಮನಗರ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯ ಟಿಕೆಟ್ಗಾಗಿ ಜೆಡಿಎಸ್- ಮಾಜಿ ಸಚಿವ ಯೋಗೇಶ್ವರ್ ನಡುವೆ ಹಗ್ಗಜಗ್ಗಾಟ ಮುಂದುವರಿದಿದ್ದು, ಕ್ಷೇತ್ರವನ್ನು ಜೆಡಿಎಸ್ಗೇ ಉಳಿಸಿಕೊಂಡು ನಿಖಿಲ್ ಕುಮಾರಸ್ವಾಮಿ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಆಗ್ರಹಿಸಿ ಮಂಗಳವಾರ ಶಕ್ತಿಪ್ರದರ್ಶನ ನಡೆಸಲು ಜೆಡಿಎಸ್ ಮುಖಂಡರು ನಿರ್ಣಯ ಕೈಗೊಂಡಿದ್ದಾರೆ.
ರವಿವಾರ ಸಂಜೆ ಚನ್ನಪಟ್ಟಣದ ಹೊರ ವಲಯದಲ್ಲಿ ಅನೌಪಚಾರಿಕ ಸಭೆ ನಡೆಸಿದ ಚನ್ನಪಟ್ಟಣ ಜೆಡಿಎಸ್ ಮುಖಂಡರು, ಕುಮಾರಸ್ವಾಮಿ ಅವರು ಗೆದ್ದಿರುವ ಕ್ಷೇತ್ರವನ್ನು ನಾವೇ ಉಳಿಸಿಕೊಳ್ಳೋಣ. ನಮಗೆ ಸೋಲು ಗೆಲುವಿಗಿಂತ ಪಕ್ಷ ಸಂಘಟನೆ ಮುಖ್ಯ ಎಂದರು.
ನಿಖಿಲ್ ಅವರನ್ನೇ ಕಣಕ್ಕಿಳಿಸಬೇಕು ಎಂಬುದು ನಮ್ಮ ಮೊದಲ ಆದ್ಯತೆ. ಅವರನ್ನು ಕಣಕ್ಕಿಳಿಸಲಿಲ್ಲ ಎಂದಾದಲ್ಲಿ ಪಕ್ಷದ ಯಾವುದೇ ಕಾರ್ಯಕರ್ತರಿಗೆ ಟಿಕೆಟ್ ನೀಡಿದರೂ ನಾವು ಚುನಾವಣೆಯಲ್ಲಿ ಒಗ್ಗೂಡಿ ಕೆಲಸ ಮಾಡುತ್ತೇವೆ. ಸಿ.ಪಿ.ಯೋಗೇಶ್ವರ್ ಅವರ ವಿಧಾನಪರಿಷತ್ ಸದಸ್ಯತ್ವದ ಅವಧಿ ಇನ್ನು 2 ವರ್ಷವಿರುವುದರಿಂದ ಜೆಡಿಎಸ್ಗೆ ಬಿಟ್ಟುಕೊಡುವ ಮೂಲಕ ಮೈತ್ರಿ ಧರ್ಮ ಪಾಲನೆಗೆ ಮುಂದಾಗಬೇಕು ಎಂದರು.
ಸಭೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು, ಒಕ್ಕಲಿಗರ ಸಂಘದ ನಿರ್ದೇಶಕ ಹಾಪ್ಕಾಮ್ಸ್ ನಾಗರಾಜು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BY Election: ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಸಿಪಿವೈ ಬಿಎಸ್ಪಿಯಿಂದ ಸ್ಪರ್ಧೆ?
Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ
Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ
BY Election:ಡಿಕೆಸು ಸ್ಪರ್ಧಿಸುವುದಿಲ್ಲ ಎಂದಾದರೆ ನನಗೇ ಟಿಕೆಟ್ ನೀಡಿ: ಎಂ.ಸಿ. ಅಶ್ವತ್ಥ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
MUST WATCH
ಹೊಸ ಸೇರ್ಪಡೆ
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ
Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ
Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.