ಜನಪದ ಕಲಾವಿದರ ಬದುಕು ಅತಂತ್ರ
Team Udayavani, Aug 24, 2020, 12:58 PM IST
ಚನ್ನಪಟ್ಟಣ: ಜಾನಪದ ಸಾಹಿತ್ಯ ಉಳಿವಿಗೆ ಆಧಾರ ಸ್ಥಂಭದಂತಿರುವ ಜನಪದ ಕಲಾವಿದರ ಬದುಕು ದುಸ್ಥಿತಿಯಲ್ಲಿದ್ದು, ಜೀವನೋಪಾಯಕ್ಕಾಗಿ ಪರದಾಡುತ್ತಿರುವುದು ನೋವಿನ ಸಂಗತಿ ಎಂದು ಸಾಹಿತಿ ವಿಜಯ್ ರಾಂಪುರ ಕಳವಳ ವ್ಯಕ್ತಪಡಿಸಿದರು.
ತಾಲೂಕಿನ ಮೋಳೆದೊಡ್ಡಿ ಗ್ರಾಮದಲ್ಲಿ ವಿಶ್ವ ಜಾನಪದ ದಿನಾಚರಣೆ ಅಂಗವಾಗಿ, ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಹರಿಕಥಾ ಕಲಾವಿದ ಮೋಳೆದೊಡ್ಡಿ ನಿಂಗರಾಜು ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.
ಮಂಟೇಸ್ವಾಮಿ ಪರಂಪರೆಯ ಸಿದ್ಧಪ್ಪಾಜಿ, ರಾಚಪ್ಪಾಜಿ, ಮೈಲಾರಲಿಂಗ, ಶರಣೆ ಶಂಕಮ್ಮ ಮುಂತಾದ ಹತ್ತಕ್ಕೂ ಹೆಚ್ಚು ಮಹಾಕಾವ್ಯಗಳನ್ನು ಕಳೆದ 25 ವರ್ಷಗಳಿಂದ ನಿರಂತರವಾಗಿ ಹಾಡಿಕೊಂಡು ಬರುತ್ತಿರುವ ನಿಂಗರಾಜು ಅವರಂತಹ ಕಲಾವಿದರು ಜಿಲ್ಲೆಯಲ್ಲಿ ನೂರಾರು ಸಂಖ್ಯೆಯಲ್ಲಿ ಇದ್ದಾರೆ.
ಇಂತಹ ಹಿರಿಯ ಜಾನಪದ ಕಲಾವಿದರ ಜೀವನ ಸಮೃದ್ಧವಾಗದ ಹೊರತು, ಜಾನಪದದ ಉಳಿವು ಅಸಾಧ್ಯ. ಸರ್ಕಾರದಿಂದ ಕನಿಷ್ಠ ಗೌರವ ಧನ ಪಡೆಯಲು ಎಣಗಾಡಬೇಕಾದ ಶೋಚನೀಯ ಪರಿಸ್ಥಿತಿ ಇದೆ. ಅಮೂಲ್ಯ ಜನಪದ ಕಲೆಯಿಂದ ಯುವ ಸಮುದಾಯ ದೂರ ಉಳಿಯಲು ಇದು ಬಹುಮುಖ್ಯ ಕಾರಣವಾಗಿದೆ. ಜಾನಪದದ ಅಳಿವು ಉಳಿವಿನ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕಾಗಿದೆ ಎಂದರು.
ಯುವಕವಿ ಅಬ್ಬೂರು ಶ್ರೀನಿವಾಸ್ ಮಾತನಾಡಿ, ಜನಪದ ಸೀಮಿತ ವಲಯಕ್ಕೆ ಮಾರ್ಪಾಡಾಗುತ್ತಿದೆ.ಗ್ರಾಮೀಣ ಭಾಗದಲ್ಲಿ ಹುಟ್ಟಿದ ಜಾನಪದ, ಗ್ರಾಮೀಣರಿಗೆ ಅಪರಿಚಿತವಾಗುತ್ತಿರುವುದು ನೋವಿನ ಸಂಗತಿ ಎಂದರು. ಈ ಸಂದರ್ಭದಲ್ಲಿ ಹಿರಿಯ ಜಾನಪದ ಕಲಾವಿದ ಚೌ.ಪು. ಸ್ವಾಮಿ, ಮೋಳೆದೊಡ್ಡಿ ಗ್ರಾಮದ ಮುಖಂಡ ತವಸಯ್ಯ, ಗೌರಮ್ಮ, ಯೋಗೇಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು
Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು
CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.