ಸರ್ಕಾರಿ ಶಾಲೆ 845 ಮಕ್ಕಳಿಂದ ಗಂಧದಗುಡಿ ವೀಕ್ಷಣೆ


Team Udayavani, Nov 15, 2022, 1:24 PM IST

tdy-9

ಕನಕಪುರ: ಮಕ್ಕಳ ದಿನಾಚರಣೆ ಪ್ರಯುಕ್ತ ತಾಲೂ ಕಿನ 13 ಸರ್ಕಾರಿ ಶಾಲೆಯ ನೂರಾರು ಮಕ್ಕಳು ಪುನೀತ್‌ ನಟನೆಯ ಗಂಧದಗುಡಿ ಚಿತ್ರ ವೀಕ್ಷಿಸಿ ಸಂಭ್ರಮಿಸಿದರು. ಶಿಕ್ಷಣ ಫೌಂಡೇಶನ್‌ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಸೋಮವಾರ ಮಕ್ಕಳ ದಿನಾಚರಣೆ ಪ್ರಯುಕ್ತ ಪುನೀತ್‌ ನಟನೆಯ ಗಂಧದ ಗುಡಿ ಚಿತ್ರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.

ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗಯ್ಯ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಗೆ ಗಂಧದ ಗುಡಿ ಚಿತ್ರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ತಾಲೂಕಿನ ಶಿವನಹಳ್ಳಿ, ಅಂಬೇಡ್ಕರ್‌ ನಗರ, ಜಿಎನ್‌ಪಿಎಚ್‌ಎಸ್‌, ಕನಕಪುರ ಜಿಜಿಎಂಎಸ್‌ ಅರಳಾಳು, ಜ್ಯೋತಿ ಕಾಲೋನಿ, ಕಲ್ಲಹಳ್ಳಿ, ಆನಮಾನ ಹಳ್ಳಿ, ಮೇಳೆಕೋಟೆ ಸರ್ಕಾರಿ ಶಾಲೆ ಸೇರಿದಂತೆ 800ಕ್ಕೂ ಹೆಚ್ಚು ಮಕ್ಕಳು ಮೈಸೂರು ರಸ್ತೆಯಲ್ಲಿರುವ ವಾಣಿ ಚಿತ್ರಮಂದಿರದ ಬಳಿ ಜಮಾಯಿಸಿದ್ದರು.

ಉತ್ಸಹದಿಂದ ವೀಕ್ಷಣೆ: ಮಕ್ಕಳು ಉತ್ಸಹದಿಂದ ಗಂಧದಗುಡಿ ಚಿತ್ರ ವೀಕ್ಷಣೆ ಮಾಡಿದರು. ಪರಿಸರ, ವನ್ಯ ಸಂಪತ್ತು ಎಷ್ಟು ಅನಿವಾರ್ಯ. ನಶಿಸುತ್ತಿರುವ ಅರಣ್ಯ ಸಂಪತ್ತು, ಸಂರಕ್ಷಣೆಯಲ್ಲಿ ನಮ್ಮ ಪಾತ್ರ ಏನು ಎಂಬ ಬಗ್ಗೆ ಮಕ್ಕಳಿಗೆ ಚಿತ್ರ ಮನದಟ್ಟು ಮಾಡಿ ಕೊಟ್ಟಿದೆ. ಮಕ್ಕಳು ಹೊಸ ಅನುಭವವನ್ನು ಪರಸ್ಪರ ವಿನಿಯ ಮಾಡಿಕೋಂಡಿದ್ದು ಕಂಡು ಬಂತು. ಹಾರೋಹಳ್ಳಿಯ ಕೆಪಿಎಸ್‌, ಜಿಎಚ್‌ಪಿಎಸ್‌ ಮೇಡಮಾರನಹಳ್ಳಿ ಶಾಲೆ ಮಕ್ಕಳು ಹಾರೋಹಳ್ಳಿಯ ಶ್ರೀವಿನಾಯಕ ಚಿತ್ರಮಂದಿರದಲ್ಲಿ ಗಂಧದಗುಡಿ ಚಿತ್ರ ವೀಕ್ಷಣೆ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗಯ್ಯ ಮಾತ ನಾಡಿ, ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಬೇಕು. ಈ ದೃಷ್ಟಿಯಿಂದ ಶಿಕ್ಷಣ ಫೌಂಡೇಶನ್‌ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮಕ್ಕಳಿಗೆ ಉಚಿತವಾಗಿ ಗಂಧದಗುಡಿ ಚಿತ್ರ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಮುಂದಿನ ಜನರಿಗೆ ಅರಣ್ಯ ಸಂಪತ್ತು ಸಂರಕ್ಷಣೆ ಮಾಡಲು ಈ ಕಾರ್ಯಕ್ರಮ ಅನುಕೂಲವಾಗಲಿದೆ ಎಂದು ಹೇಳಿದರು.

ಸರ್ಕಾರಿ ಶಾಲೆ ಮಕ್ಕಳಿಗೆ ಅನುಕೂಲ: ಶಿಕ್ಷಣ ಇಲಾಖೆ ಬಿಆರ್‌ಪಿ ಉಮೇಶ್‌ ಬಾಬು ಮಾತನಾಡಿ, ಇದೊಂದು ಉತ್ತಮ ಕಾರ್ಯಕ್ರಮ. ಗಂಧದಗುಡಿ ಕೇವಲ ಸಿನಿಮಾ ಅಷ್ಟೇ ಅಲ್ಲದೆ, ವಿಜ್ಞಾನ ಮತ್ತು ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ವಿಚಾರ ಗಳು ಚಿತ್ರದಲ್ಲಿದೆ. ಸರ್ಕಾರಿ ಶಾಲೆ ಮಕ್ಕಳಿಗೆ ಅನುಕೂಲವಾಗಿದೆ ಎಂದು ತಿಳಿಸಿದರು. ಸಿಆರ್‌ಪಿ ಮಂಜುನಾಥ್‌, ಶಿಕ್ಷಕರಾದ ಪ್ರಕಾಶ್‌, ರಾಘವೇಂದ್ರ ಸ್ವಾಮಿ, ಸಾಕಮ್ಮ, ಶ್ರೀನಿವಾಸ್‌, ಆಶಾ, ಲಕ್ಕಪ್ಪ ಸೇರಿದಂತೆ 32 ಶಿಕ್ಷಕರು, ಶಿಕ್ಷಣ ಮಾರ್ಗ ದರ್ಶ ಕರಾದ ಶಿವಕುಮಾರ್‌, ಸುಮಿತ್ರ, ಸುಷ್ಮಾ, ಸತೀಶ್‌ ಮತ್ತು 845 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.