![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
ಗ್ರಾಪಂ ಚುನಾವಣೆ:ಯುವ ಸಮೂಹ ಬೆಂಬಲಿಸಿ
Team Udayavani, Dec 14, 2020, 4:39 PM IST
![ಗ್ರಾಪಂ ಚುನಾವಣೆ:ಯುವ ಸಮೂಹ ಬೆಂಬಲಿಸಿ](https://www.udayavani.com/wp-content/uploads/2020/12/RN-TDY-1-10-620x372.jpg)
ಕನಕಪುರ: ರಾಜಕಾರಣದಲ್ಲಿ ಯುವ ಸಮೂಹಕ್ಕೆ ಮತದಾರರು ಹೆಚ್ಚು ಬೆಂಬಲ ನೀಡಿದರೆ ಭ್ರಷ್ಟಾಚಾರ ತಡೆಯಲು ಸಾಧ್ಯ ಎಂದು ಭೂಹಳ್ಳಿ ಸಮಾಜ ಸೇವಕ ಬಿ.ಎಂ. ಮಂಜುನಾಥ ಅಭಿಪ್ರಾಯಪಟ್ಟರು.
ತಾಲೂಕಿನ ಸಾತನೂರು ಹೋಬಳಿ ಕಾಡಹಳ್ಳಿ ಗ್ರಾಪಂ ವ್ಯಾಪ್ತಿಯ ಸಾಮಾನ್ಯ ಕ್ಷೇತ್ರಕ್ಕೆಮೀಸಲಾಗಿದ್ದಭೂಹಳ್ಳಿಗ್ರಾಮದಿಂದ ಗ್ರಾಪಂ ಚುನಾವಣೆಗೆ ಸ್ಪರ್ಧಿಸಲು ಗ್ರಾಮದ ಮುಖಂಡರೊಂದಿಗೆ ಕಾಡಹಳ್ಳಿ ಗ್ರಾಪಂನಲ್ಲಿ ಶುಕ್ರವಾರ ಚುನಾವಣಾಧಿಕಾರಿ ಶಿವರುದ್ರಪ್ಪಅವರಿಗೆ ನಾಮ ಪತ್ರ ಸಲ್ಲಿಸಿ ಮಾತನಾಡಿದರು.
ಗ್ರಾಮಾಭಿವೃದ್ಧಿಗೆಂದು ಸರ್ಕಾರದಿಂದ ಗ್ರಾಪಂಗಳಿಗೆ ಸಾಕಷ್ಟು ಅನುದಾನ ಹರಿದು ಬರುತ್ತಿದೆ. ಕೃಷಿ ಹೈನೋದ್ಯಮಗಳಲ್ಲಿಗ್ರಾಮೀಣ ಜನರು ತೊಡಗಿಕೊಂಡು ಸ್ವಾವಲಂಬನೆಸಾಧಿಸುವುದರಜತೆಗೆನಿರುದ್ಯೋಗ ಸಮಸ್ಯೆ ಹೋಗಲಾಡಿಸಿ ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸಲು ಸರ್ಕಾರನರೇಗಾ ಯೋಜನೆ ಜಾರಿಗೊಳಿಸಿದೆ. ಆದರೆ, ಸರ್ಕಾರದ ಯೋಜನೆಗಳು ಜನರಿಗೆ ತಲುಪದೆ ವಂಚಿತರಾಗುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉತ್ಸುಕನಾಗಿದ್ದು ಪ್ರಥಮ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆಂದರು.
ಸ್ಪರ್ಧೆಗೆ ಸ್ವಯಂಘೋಷಿತ ಛಾಪಾಕಾಗದ ಬೇಡ :
ಚನ್ನಪಟ್ಟಣ: 2020ರ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವ ಸಂದರ್ಭದಲ್ಲಿ ನಾಮ ಪತ್ರದ ಜತೆ ಛಾಪಾಕಾಗದದಲ್ಲಿ ನೋಟರಿ ಮಾಡಿದ ಸ್ವಯಂ ಘೋಷಿತ ಘೋಷಣಾ ಪತ್ರ ನೀಡಬೇಕೆಂಬುದು ಸುಳ್ಳು ಎಂದು ತಹಶೀಲ್ದಾರ್ ನಾಗೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಉಮೇದುದಾರರು ಗೊಂದಲಕ್ಕೆ ಬಿದ್ದು, ಅನವಶ್ಯಕವಾಗಿ ಸಾವಿರಾರು ರೂ. ವ್ಯಯಮಾಡಿ, ಛಾಪಾ ಕಾಗದ ಖರೀದಿ ಮಾಡಿ ನೋಟರಿ ಮಾಡಿಸುತ್ತಿರುವುದರ ಬಗ್ಗೆ ಸಾಕಷ್ಟು ದೂರು ಬಂದಿವೆ ಎಂದು ತಿಳಿಸಿದ್ದಾರೆ.
ಗ್ರಾಪಂ ಚುನಾವಣೆಗೆ ಸ್ಪರ್ಧೆ ಮಾಡುವವರಿಗೆ, ಆಯಾ ಗ್ರಾಪಂನಲ್ಲಿಯೇ ನೀಡುವ ಬುಕ್ಲೆಟ್ನಲ್ಲಿ ಸ್ವಯಂ ಘೋಷಣಾ ಪತ್ರವಿದ್ದು ಅದರಲ್ಲಿಅಭ್ಯರ್ಥಿಗಳು ಭರ್ತಿ ಮಾಡಬೇಕಾಗಿದೆ. ಅಲ್ಲದೇಬಿಳಿ ಹಾಳೆ ಮೇಲೆ ಸ್ವಯಂ ಬರೆದು ಘೋಷಣೆ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.
ಅನವಶ್ಯಕವಾಗಿ ಯಾರೋ ಹೇಳಿದರೆಂದು, ಅಲ್ಲದೆ ಛಾಪಾ ಕಾಗದದಲ್ಲಿ ನೋಟರಿ ಮಾಡಿಸಿ, ಸ್ವಯಂ ಘೋಷಣೆ ಮಾಡಿದ್ದಾರೆ, ಚುನಾವಣಾಧಿಕಾರಿಗಳು, ನಾಮಪತ್ರ ತಿರಸ್ಕೃತ ಮಾಡುತ್ತಾ ರೆಂಬ ಭಯದಿಂದ, ಹಣ ವೆಚ್ಚ ಮಾಡಿ ಛಾಪಾ ಕಾಗದ ಖರೀದಿಸಿ ನೋಟರಿ ಮಾಡಿಸಬಾರದೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
![SHIVAMOGGA](https://www.udayavani.com/wp-content/uploads/2024/07/SHIVAMOGGA-150x90.jpg)
Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ
![ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ](https://www.udayavani.com/wp-content/uploads/2024/07/8-3-150x90.jpg)
ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು](https://www.udayavani.com/wp-content/uploads/2024/07/karavali-150x83.jpg)
Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.