ಹೆಸರಿಗಷೇ ಹಾರೋಹಳ್ಳಿ ತಾಲೂಕು ರಚನೆ


Team Udayavani, Sep 22, 2019, 3:21 PM IST

Udayavani Kannada Newspaper

ರಾಮನಗರ: 2019 ಫೆಬ್ರವರಿ 8, ಅಂದಿನ ಸಿಎಂ ಆಗಿದ್ದ ಎಚ್‌.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್‌ನಲ್ಲಿ ಕನಕಪುರ ತಾಲೂಕಿನ ಹೋಬಳಿ ಹಾರೋಹಳ್ಳಿಯನ್ನು ನೂತನ ತಾಲೂಕಾಗಿ ರಚಿಸಲು ನಿರ್ಧರಿಸಲಾಗಿತ್ತು. ಜಿಲ್ಲಾಡಳಿತದಿಂದ ವರದಿ ತರಿಸಿಕೊಂಡು ತಿಂಗಳುಗಳೇ ಉರುಳಿವೆ. ನೂತನ ತಾಲೂಕು ರಚನೆ ಬಗ್ಗೆ ಸರ್ಕಾರ ಇನ್ನಷ್ಟೇ ಗಮನಹರಿಸಬೇಕಾಗಿದೆ.

2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರ, ಕನಕಪುರ, ಚನ್ನಪಟ್ಟಣ ಮತ್ತು ಮಾಗಡಿ ತಾಲೂಕುಗಳನ್ನು ಬೇರ್ಪಡಿಸಿ ರಾಮನಗರ ಜಿಲ್ಲೆಯ ರಚನೆಗೆ ಕಾರಣವಾಗಿದ್ದರು. 2018ರಲ್ಲಿ ಮತ್ತೆ ಸಿಎಂ ಪಟ್ಟ ಅಲಂಕರಿಸಿದ ಕುಮಾರ ಸ್ವಾಮಿ, ಕನಕಪುರ ತಾಲೂಕಿನ ಹೋಬಳಿ ಹಾರೋಹಳ್ಳಿ ಯನ್ನು ಹೊಸ ತಾಲೂಕು ರಚಿಸಲು ಮುನ್ನುಡಿ ಬರೆದಿದ್ದಾರೆ.

ಫೆ.8ರಂದು ಹೊಸ ತಾಲೂಕು ರಚನೆಗೆ ತೀರ್ಮಾನ: ಫೆಬ್ರವರಿ 8ರಂದು ಹೊಸ ತಾಲೂಕು ರಚನೆಗೆ ನಿರ್ಧರಿಸಿದ ನಂತರ ಫೆಬ್ರವರಿ 28 ಮತ್ತು ಮಾರ್ಚ್‌ 5ರಂದು ಸರ್ಕಾರ ಹೊರಡಿಸಿರುವ ಸೂಚನೆಯಗಳನ್ವಯ ರಾಮನಗರ ಉಪವಿಭಾಗದ ಉಪವಿಭಾಗಾಧಿಕಾರಿಗಳು ವರದಿ ನೀಡಿದ್ದಾರೆ. ಜುಲೈ 5ರಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಕೆ.ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆಗಳಾಗಿವೆ. ಸದರಿ ಸಭೆಯ ನಡಾವಳಿಗಳು ಮತ್ತು ಉಪವಿಭಾಗಾಧಿಕಾರಿಗಳು ನೀಡಿರುವ ವರದಿ ಕ್ರೂಢೀಕರಿಸಿ ಜಿಲ್ಲಾಧಿಕಾರಿಗಳು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ (ಭೂ ಮಾಪನ) ಇವರಿಗೆ ನೂತನ ತಾಲೂಕಿಗೆ ಸೇರ್ಪಡೆಗೊಳ್ಳುವ ಹೋಬಳಿ ಮತ್ತು ಗ್ರಾಮಗಳ ವಿವರಗಳನ್ನು ಸಲ್ಲಿಸಲಾಗಿದೆ.

ಜಿಲ್ಲಾಧಿಕಾರಿಗಳ ಪತ್ರವನ್ನು ಆಧರಿಸಿ, ನೂತನ ತಾಲೂಕು ರಚನೆಗೆ ಸರ್ಕಾರ ಇನ್ನಷ್ಟೇ ಕ್ರಮವಹಿಸಬೇಕಾಗಿದೆ. ನೂತನ ತಾಲೂಕು ರಚನೆ ಸಂಬಂಧ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ.

ನೂತನ ತಾಲೂಕಿನಲ್ಲಿ ಯಾವ್ಯಾವ ಹಳ್ಳಿಗಳ ಸೇರ್ಪಡೆ: ಕನಕಪುರ ತಾಲೂಕಿನಲ್ಲಿ ಹಾಲಿ 81 ಕಂದಾಯ ವೃತ್ತಗಳಿವೆ. ಈ ಪೈಕಿ 26 ವೃತ್ತಗಳನ್ನು ಕನಕಪುರ ತಾಲೂಕಿನಿಂದ ಬೇರ್ಪಡಿಸಿ ನೂತನ ಹಾರೋಹಳ್ಳಿ ತಾಲೂಕನ್ನು ಸೃಜಿಸುವುದಾಗಿ ರಾಜ್ಯ ಸರ್ಕಾರ ಗೆಜೆಟ್‌ ಹೊರೆಡಿಸಿದೆ. ಹಾರೋಹಳ್ಳಿ, ಗಬ್ಟಾಡಿ, ಕಗ್ಗಲಹಳ್ಳಿ, ಕಾಡು ಜಕ್ಕಸಂದ್ರ, ಕೋನಸಂದ್ರ, ಬನ್ನಿಕುಪ್ಪೆ, ಮೇಡಮಾರನಹಳ್ಳಿ, ಕೊಲ್ಲಿಗನಹಳ್ಳಿ, ಪಿಚ್ಚನಕೆರೆ, ಚಿಕ್ಕಕಬ್ಟಾಳು, ದೊಡ್ಡಮುದುವಾಡಿ, ಚಿಕ್ಕಮರಳವಾಡಿ, ತೇರುಬೀದಿ, ಯಲಚವಾಡಿ, ಕಲ್ಲನಕುಪ್ಪೆ, ಬನವಾಸಿ, ತಟ್ಟೆಕೆರೆ, ಮಲ್ಲಿಗೆಮೆಟ್ಲು, ತೋಕಸಂದ್ರ. ಎಂ.ಮನಿಯಂಬಾಳ್‌, ಟಿ.ಹೊಸಹಳ್ಳಿ, ಚೀಲೂರು, ದೊಡ್ಡಮರಳವಾಡಿ, ದೊಡ್ಡಸದೇನಹಳ್ಳಿ, ಅವರೆಮಾಳ, ಗೋಡೂರು ವೃತ್ತಗಳ ವ್ಯಾಪ್ತಿಗೆ ಬರುವ 83 ಗ್ರಾಮಗಳನ್ನು ಒಳಗೊಂಡಂತೆ ನೂತನ ತಾಲೂಕು ಸೃಜಿಸಲು ಸರ್ಕಾರ ಗೆಜೆಟ್‌ ಹೊರಡಿಸಿದೆ.

ನೂತನ ಹಾರೋಹಳ್ಳಿ ತಾಲೂಕಿಗೆ ಗಡಿ: ಕನಕಪುರ ತಾಲೂಕಿನಿಂದ ಬೇರ್ಪಡಿಸಿ ನೂತನವಾಗಿ ಸೃಜನೆಯಾಗುವ ಹಾರೋಹಳ್ಳಿ ತಾಲೂಕಿನ ಪೂರ್ವಕ್ಕೆ ತಮಿಳುನಾಡಿನ ಧರ್ಮಪುರಿ ಜಿಲ್ಲೆ, ಪಶ್ವಿ‌ಮಕ್ಕೆ ರಾಮನಗರ ತಾಲೂಕು, ಉತ್ತರಕ್ಕೆ ಬೆಂಗಳೂರು ದಕ್ಷಿಣ ತಾಲೂಕು ಮತ್ತು ಆನೇಕಲ್‌ ತಾಲೂಕುಗಳ ಗಡಿ ಹಾಗೂ ದಕ್ಷಿಣದಲ್ಲಿ ಕನಕಪುರ ತಾಲೂಕಿನ ಗಡಿ ಇರಲಿದೆ.

ನೂತನ ತಾಲೂಕು ರಚನೆ ಸಂಬಂಧ ಲೋಕೋಪ ಯೋಗಿ ಇಲಾಖೆ ಸರ್ಕಾರಿ ಇಲಾಖೆಗಳ ಹೊಸ ಕಚೇರಿ ನಿರ್ಮಾಣಕ್ಕೆ ಅಂದಾಜು

ವೆಚ್ಚದ ಪಟ್ಟಿ ಸಿದ್ಧಪಡಿಸಿ 109 ಕೋಟಿ ರೂ.ಗಳ ಅಂದಾಜು ಪಟ್ಟಿ ನೀಡಿದೆ. ತಾಲೂಕು ಕಚೇರಿ ಸೇರಿದಂತೆ ಒಟ್ಟು 31 ಸರ್ಕಾರಿ ಕಚೇರಿಗಳು ನೂತನ ತಾಲೂಕಿನ ಆಡಳಿತ ನಡೆಸಲಿವೆ. ಹಾರೋಹಳ್ಳಿ ತಾಲೂಕು ಅಸ್ತಿತ್ವಕ್ಕೆ ಬಂದರೆ ತಾತ್ಕಾಲಿಕವಾಗಿ ಹೊಸ ಕಚೇರಿ ಆರಂಭಿಸಲು ಬೇಕಾದ ಆರ್ಥಿಕ ಲೆಕ್ಕಾಚಾರಗಳನ್ನು ಲೋಕೋಪಯೋಗಿ ಇಲಾಖೆ ವರದಿ ನೀಡಿದೆ.

 

-ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.