Ayodhya ರಾಮಮೂರ್ತಿ ರಾಮದೇವರ ಬೆಟ್ಟದಲ್ಲಿ ಪ್ರತಿಷ್ಠಾಪನೆ: ಇಕ್ಬಾಲ್
ಸಿಎಂ, ಡಿಸಿಎಂ ಒಪ್ಪಿಗೆ: ಶಾಸಕ ಇಕ್ಬಾಲ್ ಹುಸೇನ್
Team Udayavani, Jul 31, 2024, 9:40 PM IST
ರಾಮನಗರ: ಪಟ್ಟಣಕ್ಕೆ ಸಮೀಪದ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮ ಮಂದಿರ ನಿರ್ಮಿಸಲು ನಾವು ಸಿದ್ಧವಿದ್ದೇವೆ. ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಗಾಗಿ ಹಲವು ಶಿಲ್ಪಿಗಳ ಮೂಲಕ ಕೆತ್ತನೆ ಮಾಡಿಸಲಾಗಿದ್ದ ಮೂರ್ತಿಗಳಲ್ಲಿ ನಾಡಿನ ಶಿಲ್ಪಿ ಗಣೇಶ್ ಭಟ್ ಕೆತ್ತನೆ ರಾಮನ ಮೂರ್ತಿಯನ್ನು ರಾಮದೇವರ ಬೆಟ್ಟದಲ್ಲಿ ಪ್ರತಿಷ್ಠಾಪಿಸಲು ಚಿಂತನೆ ನಡೆಸಿದ್ದೇವೆ. ಈ ಸಂಬಂಧ ಶಿಲ್ಪಿ ಗಣೇಶ್ಭಟ್ ಅವರಿಗೂ ಮನವಿ ಮಾಡಿದ್ದೇನೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಅಯೋಧ್ಯೆಯಲ್ಲಿ ಗಣೇಶ್ಭಟ್ ಕೆತ್ತನೆಯ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗದ ಹಿನ್ನೆಲೆಯಲ್ಲಿ ಈ ಮೂರ್ತಿಯನ್ನು ಕರ್ನಾಟಕದಲ್ಲಿ ಯಾರಾದರೂ ತಂದು ಪ್ರತಿಷ್ಠಾಪಿಸಲಿ ಎಂಬ ಗಣೇಶ್ಭಟ್ ಅವರ ಆಶಯವನ್ನು “ಉದಯವಾಣಿ’ ಪ್ರಕಟಿಸಿತ್ತು.
ಈ ವರದಿ ಬೆನ್ನಲ್ಲೇ ರಾಮನಗರದಲ್ಲಿ ಪ್ರತಿಷ್ಠಾಪಿಸಲು ಶಾಸಕ ಇಕ್ಬಾಲ್ ಹುಸೇನ್ ಸಿದ್ಧವಿರುವ ಬಗ್ಗೆ ಸಹ ಪತ್ರಿಕೆ ವರದಿ ಮಾಡಿತ್ತು.
ಬುಧವಾರ ರಾಮದೇವರ ಬೆಟ್ಟದ ಅಭಿವೃದ್ಧಿ ಕಾರ್ಯದ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಭೇಟಿದ ನೀಡಿದ ವೇಳೆ ಮಾತನಾಡಿ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಸುರೇಶ್ ಹಾಗೂ ಪ್ರವಾಸೋದ್ಯಮ ಸಚಿವರ ಜೊತೆ ಮಾತನಾಡಿದ್ದು, ಅವರು ಒಪ್ಪಿಗೆ ನೀಡಿದ್ದಾರೆ. ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಈ ಬಗ್ಗೆ ಸಾಕಷ್ಟು ಶ್ರಮ ಹಾಕಿದ್ದಾರೆಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು
Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು
CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ
Ramanagara: ಎಚ್ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ
Ramnagar: ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಕಿಮೀ ಎಸ್ಟಿಆರ್ಆರ್ ರಸ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.