ನೀರಾವರಿ ಯೋಜನೆ ಪೂರ್ಣಗೊಳಿಸಿದ ವೆಂಕಟೇಗೌಡ


Team Udayavani, Jun 28, 2023, 1:36 PM IST

ನೀರಾವರಿ ಯೋಜನೆ ಪೂರ್ಣಗೊಳಿಸಿದ ವೆಂಕಟೇಗೌಡ

ಚನ್ನಪಟ್ಟಣ: ತಾಲೂಕಿನಲ್ಲಿ ನೀರಾವರಿ ಯೋಜ ನೆಗಳು ಸಮರ್ಪಕವಾಗಿ ಸಾಕಾರಗೊಳ್ಳುವಲ್ಲಿ ತಮ್ಮದೇ ಆದ ಗಣನೀಯ ಪಾತ್ರ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ತಾಲೂಕಿನ ಎ.ವಿ.ಹಳ್ಳಿ ಗ್ರಾಮದ ವೆಂಕಟೇಗೌಡರು, ಕಾವೇರಿ ನೀರಾವರಿ ನಿಗಮ ನಿಯಮಿತ, ಮಂಚನಬೆಲೆ ಜಲಾಶಯದ ಕಾರ್ಯಪಾಲಕ ಎಂಜಿನಿಯರ್‌ ವೃತ್ತಿಯಿಂದ ನಿವೃತ್ತಿಯಾಗಿದ್ದಾರೆ.

ರಾಜ್ಯವೇ ಚನ್ನಪಟ್ಟಣ ತಾಲೂಕಿನ ಕಡೆಗೆ ತಿರುಗಿ ನೋಡುವಂತೆ ನೀರಾವರಿ ಕ್ಷೇತ್ರವನ್ನು ಅಭಿವೃದ್ಧಿ ಮಾಡಿ ಬರಗಾಲದಲ್ಲೂ ಕೆರೆ-ಕಟ್ಟೆಗೆ ನೀರು ತುಂಬಿಸಿ ಬಾಗಿನ ಅರ್ಪಿಸುವ ಜತೆಗೆ ಬತ್ತಿಹೋಗಿದ್ದ ಕೊಳವೆ ಬಾವಿಗಳಲ್ಲಿ ಬೊಗಸೆ ಇಟ್ಟರೆ, ನೀರು ಸಿಗುವಂತೆ ಮಾಡಿದವರು. ಕ್ಷೇತ್ರಕ್ಕೆ ನೀರಾವರಿ ಯೋಜನೆ ರೂಪು – ರೇಷೆಯಿಂದ ಹಿಡಿದು ಯೋಜನೆಯನ್ನು ಸಂಪೂರ್ಣಗೊಳಿಸುವ ಹಂತದವರೆಗೆ ಶ್ರಮಿಸಿ ದವರಲ್ಲಿ ತಾಲೂಕಿನ ಎ.ವಿ.ಹಳ್ಳಿ ಎಂಜಿನಿಯರ್‌ ಮೊದಲಿಗರು. ವೆಂಕಟೇಗೌಡರು ತಾಲೂಕಿನಲ್ಲಿ ಕಾವೇರಿ ನೀರಾವರಿ ನಿಗಮದಲ್ಲಿ ಜೆಇ, ಎಇ, ಎಇಇ ಆಗಿ ಸೇವೆ ಸಲ್ಲಿಸಿ ಬಳಿಕ ವಿವಿಧ ಇಲಾಖೆ ಗಳಲ್ಲಿ ಇಇ ಆಗಿ ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ ರಾಮನಗರ ಜಿಲ್ಲಾ ಕಾವೇರಿ ನೀರಾವರಿ ನಿಗಮದ ಮಂಚನಬೆಲೆ ಜಲಾಶಯದ ಕಾರ್ಯಪಾಲಕ ಎಂಜಿನಿಯರ್‌ ಆಗಿ ಸೇವೆ ಸಲ್ಲಿಸಿದ್ದರು. ಕಣ್ವ-ಶಿಂಷಾ ಕುಡಿವ ನೀರು ಯೋಜನೆಗೆ ಹೆಗಲು ಕೊಟ್ಟು ಪೈಪ್‌ಲೈನ್‌ ಕಾಮಗಾರಿಯಿಂದ ಮೋಟಾರ್‌ ಅಳವಡಿಕೆವರೆಗೆ ಗುಣಮಟ್ಟ ಕಾಯ್ದು ಕೊಳ್ಳುವ ಜತೆಗೆ ತನ್ನ ತಾಲೂಕಿನ ಯೋಜನೆ ತಮ್ಮ ಕನಸು ಎಂಬಂತೆ ನಿಷ್ಠೆಯಿಂದ ಹಗಲಿರುಳು ಶ್ರಮಿಸಿದರು.

ಸತ್ತೇಗಾಲ ಯೋಜನೆ ರೂವಾರಿ: ತಾಲೂಕಿನ ಕಣ್ವಾ-ಶಿಂಷಾ ಕುಡಿವ ನೀರು ಯೋಜನೆ ಸಾಕಾರ ಗೊಂಡ ಬಳಿಕ, ಸತ್ತೇಗಾಲ ಯೋಜನೆ ರೂಪಿಸಿದ್ದು ಇವರೇ. 2018ರಲ್ಲಿ ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ಸರ್ಕಾರದಲ್ಲಿ ಅನುಮತಿ ಪಡೆಯಲು ಈ ಯೋಜನೆ ಮಾಹಿತಿಯನ್ನು ಡಿಕೆಶಿ ಸಹೋದರರಿಗೆ ನೀಡುವ ಮೂಲಕ 540 ಕೋಟಿ ರೂ.ವೆಚ್ಚದ ಸತ್ತೇಗಾಲ ಯೋಜನೆಗೆ ನೀರಾವರಿ ಸಚಿವರಾಗಿದ್ದ ಡಿಕೆಶಿ ಅವರಿಂದಲೇ ಡಿಪಿಆರ್‌ ಮಾಡಿಸಿ ಸಿಎಂ ಆಗಿದ್ದ ಎಚ್‌.ಡಿ.ಕುಮಾರಸ್ವಾಮಿ ಅವರಿಂದ ಅನು ಮೋದನೆ ಮಾಡಿಸಿ ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಗೂ ಚಾಲನೆ ನೀಡಿದ್ದರು. ಇದೀಗ ಶೇ.60 ಕಾಮಗಾರಿ ಮುಗಿದಿದ್ದು ವರ್ಷಾಂತ್ಯದಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಮೊದಲಿಗೆ ಏತ ನೀರಾವರಿ ಮೂಲಕ ಕೆರೆ ತುಂಬಿಸಿದ ಕೀರ್ತಿ ರಾಮನಗರ ಜಿಲ್ಲೆ ಯ ಚನ್ನಪಟ್ಟಣ ತಾಲೂಕಿಗೆ ಸಲ್ಲುತ್ತದೆ. ಇಲ್ಲಿಯ ಕಣ್ವ ಮತ್ತು ಗರಕಹಳ್ಳಿ ಏತ ನೀರಾವರಿ ಯೋಜನೆ ನಾಡಿಗೆ ಮಾದರಿ ಯಾಗಿವೆ. ಗರಕಹಳ್ಳಿ ಯೋಜನೆಯಡಿ 14, ಕಣ್ವ ಯೋಜನೆಯಡಿ 106 ಕೆರೆಗೆ ನೀರು ಹರಿಸಲಾಗಿದೆ. ಕಣ್ವದ 86 ಕೆರೆ ಭರ್ತಿಯಾಗಿದೆ. ಇದು ಸಾಕಾರಗೊ ಳ್ಳಲು ಸರ್ವರೂ ಸಹಕಾರ ನೀಡಿದ್ದಾರೆ. ಈ ಹೊಣೆಗಾರಿಕೆ ದೊರೆತದ್ದು ನನ್ನ ಜೀವಮಾನದ ಸುಕೃತವೇ ಸರಿ. ●ಎ.ವಿ.ಹಳ್ಳಿ ವೆಂಕಟೇಗೌಡ, ಕಾರ್ಯ ಪಾಲಕ ಎಂಜಿನಿಯರ್‌, ಕಾವೇರಿ ನೀರಾವರಿ ನಿಗಮ ನಿಯಮಿತ, ಮಂಚನಬೆಲೆ ಜಲಾಶಯ

-ಎಂ.ಶಿವಮಾದು

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.