![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Oct 7, 2023, 10:09 AM IST
ಕುದೂರು: ಸಂಗೀತ ಹೇಳಿ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪಟ್ಟಣದ ಮಹಾತ್ಮನಗರದಲ್ಲಿ ನಡೆದಿದೆ.
ಘಟನೆಯ ವಿವರ:
ಬಾಲಕಿ ಶಾಲೆಯಲ್ಲಿ ಹೂಟ್ಟೆ ನೋವು ಎಂದು ಹೇಳಿದಾಗ ಪೋಷಕರನ್ನು ಕರೆಸಿ ನಿಮ್ಮ ಮಗಳಿಗೆ ಹೂಟ್ಟೆನೋವು ಎಂದು ಹೇಳುತ್ತಿದ್ದಾರೆ ಚಿಕಿತ್ಸೆ ಕೂಡಿಸಿ ಎಂದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಆಸ್ಪತ್ರೆಗೆ ಕರೆದುಕೂಂಡು ಹೋದಾಗ ಪೋಷಕರಿಗೆ ಮಗಳು ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಕುದೂರಿನ ನಿವಾಸಿ ರಾಮಾಂಜನೇಯ (48) ಕೃತ್ಯವೆಸೆಗಿರುವ ಬಂಧಿತ ಆರೋಪಿ.
15 ವರ್ಷದ ಅಪ್ರಾಪ್ತ ಬಾಲಕಿಗೆ ಸಂಗೀತ ಹೇಳಿ ಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸೆಗಿದ್ದು, ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದ ವೇಳೆ ತೀವ್ರ ಹೂಟ್ಟೆ ನೋವಿನಿಂದ ಬಳಲಿದ್ದಾಳೆ. ಕೂಡಲೇ ಶಿಕ್ಷಕರು ಪೋಷಕರನ್ನು ಕರೆಸಿ ಮನೆಗೆ ಕಳುಹಿಸಿಕೂಟ್ಟಿದ್ದಾರೆ. ನಂತರ ಪೋಷಕರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೂಂಡು ಹೋಗಿ ಪರೀಕ್ಷಿಸಿದಾಗ ಪೋಷಕರಿಗೆ ಬಾಲಕಿ ಗರ್ಭಿಣಿಯಾಗಿರುವ ವಿಷಯ ತಿಳಿದಿದೆ.
ಬಳಿಕ ಪೋಷಕರು ಬಾಲಕಿಯನ್ನು ವಿಚಾರಿಸಿದಾಗ ಸಂಗೀತ ಮಾಸ್ಟರ್ ನ ಕೃತ್ಯ ಎಂದು ಬಾಲಕಿ ತಿಳಿಸಿದ್ದಾಳೆ. ವಿಷಯ ತಿಳಿದ ಪೋಷಕರು ಆರೋಪಿ ವಿರುದ್ಧ ಪೂಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಆರಂಭಿಸಿದ ಪೋಷಕರು ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ
Ramanagara: ಬೆಂ.-ಮೈ. ಎಕ್ಸ್ ಪ್ರೆಸ್ವೇ ಬಿಡದಿ ಎಕ್ಸಿಟ್ ಬಂದ್
Ramanagara: ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?
Kudur: ಬಿಡಿಸಿಸಿ ಬ್ಯಾಂಕ್ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
You seem to have an Ad Blocker on.
To continue reading, please turn it off or whitelist Udayavani.