ಚಿರತೆ ದಾಳಿಗೆ ಮಹಿಳೆ ಬಲಿ
Team Udayavani, Jan 19, 2018, 6:30 AM IST
ರಾಮನಗರ: ಹಸು ಮೇಲೆ ದಾಳಿ ಮಾಡಿದ ಚಿರತೆಗೆ ಪ್ರತಿರೋಧ ಒಡ್ಡಿದ ಮಹಿಳೆಯ ಮೇಲೆ ಎರಗಿದ ಚಿರತೆಯೊಂದು ಆಕೆಯನ್ನು ಬಲಿತೆಗೆದುಕೊಂಡ ಘಟನೆ ತಾಲೂಕಿನ ಚಿಕ್ಕಸೂಲಿಕರೆ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಗ್ರಾಮದ ಪುಟ್ಟಹಲಗಮ್ಮ (40) ಚಿರತೆ ದಾಳಿಗೆ ಬಲಿಯಾಗಿರುವ ಮಹಿಳೆ. ಹಸುಗಳನ್ನು ಮೇಯಿಸಲು ಗ್ರಾಮದ ಬಳಿ ಇರುವ ಅರಣ್ಯ ಪ್ರದೇಶಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಹಸುವೊಂದರ ಮೇಲೆ ಎರಗಿದ ಚಿರತೆಯನ್ನು ಕಂಡ ಪುಟ್ಟಹಲಗಮ್ಮ ಕೂಗಿಕೊಂಡು ಚಿರತೆಗೆ ಪ್ರತಿರೋಧ ಒಡ್ಡಿದರು. ಇದರಿಂದ ಆಕ್ರೋಶಗೊಂಡ ಚಿರತೆ ಹಸುವನ್ನು ಬಿಟ್ಟು ಪುಟ್ಟಹಲಗಮ್ಮನ ಮೇಲೆ ಎರಗಿತು. ತಕ್ಷಣ ಅಲ್ಲೇ ಇದ್ದ ಈಕೆಯ ಪತಿ ಶಿವಪ್ಪಕಿರುಚಾಡಿದರು. ಕೂಗಾಟ ಕೇಳಿ ಗ್ರಾಮಸ್ಥರು ಆಗಮಿಸಿದರಾದರೂ ಅಷ್ಟರಲ್ಲಾಗಲೆ ಚಿರತೆ ಪುಟ್ಟಹಲಗಮ್ಮ ಅವರ ದೇಹವನ್ನು ಕಚ್ಚಿಕೊಂಡು ಕರಡಿ ಹಳ್ಳದ ಬಳಿಯ ಗವಿಯ ಬಳಿಗೆ ಎಳೆದೊಯ್ದಿತ್ತು. ಬಳಿಕ, ಜನರ ಕೂಗಾಟ ಕೇಳಿ ಚಿರತೆ ದೇಹವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Lokayukta ಪತ್ರ ಸೋರಿಕೆ ಹೇಗಾಯ್ತು: ರಾಜ್ಯಪಾಲರ ಪ್ರಶ್ನೆ
Court ಕಲಾಪ ನೇರಪ್ರಸಾರ ಚಿತ್ರೀಕರಣಕ್ಕೆ ನಿರ್ಬಂಧ; ಪೂರ್ವಾನುಮತಿ ಅಗತ್ಯ: ಹೈಕೋರ್ಟ್ ಸೂಚನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.