ಕೇಂದ್ರದಿಂದ ತಂದ ಅನುದಾನದ ವರದಿ ನೀಡಲಿ


Team Udayavani, Mar 29, 2019, 1:06 PM IST

kendradinda

ರಾಮನಗರ: ಕಳೆದ 5 ವರ್ಷಗಳಲ್ಲಿ ಶ್ರಮವಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಹೇರಿ ಕ್ಷೇತ್ರಕ್ಕೆ ತಂದ ಅನುದಾನ ಎಷ್ಟು ಎಂಬ ವರದಿಯನ್ನು ನೀಡುವಂತೆ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣ ಆಗ್ರಹಿಸಿದರು.

ತಾಲೂಕಿನ ಬಿಡದಿ ಹೋಬಳಿಯ ಮೇಡನಹಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ಹಿಂದೆ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಶ್ರಮವಿದೆ. ಹೀಗೆ ಶ್ರಮವಹಿಸಿ ತಂದ ಹಣ ಎಷ್ಟು ಎಂದು ಅವರು ಪ್ರಶ್ನಿಸಿದರು. ರಾಜ್ಯದ ಬಿಜೆಪಿ ಸಂಸದರ ರಿಪೋರ್ಟ್‌ ಕಾರ್ಡನ್ನು ತಮ್ಮ ಪಕ್ಷ ನಾಗರಿಕರಿಗಾಗಿ ಬಿಡುಗಡೆ ಮಾಡಿದೆ ಎಂದರು.

ಹಣದ ಮೂಲಕ ರಾಜಕೀಯ: ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ಮಾತನಾಡಿ, ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷದಲ್ಲಿ ಯಾವ ಗೊಂದಲಗಳು, ಭಿನ್ನಾಭಿಪ್ರಾಯಗಳು ಇಲ್ಲ. ಕ್ಷೇತ್ರದಲ್ಲಿ 14 ಸಾವಿರ ಕಾರ್ಯಕರ್ತರನ್ನು ಗುರುತಿಸಲಾಗಿದೆ. ತಲಾ ಕಾರ್ಯಕರ್ತರಿಗೆ 20 ಮನೆಗಳನ್ನು ವಿಂಗಡಿಸಿದ್ದು, ಮತದಾರರ ಮನವೊಲಸಲಿದ್ದಾರೆ ಎಂದರು.

ಪರೋಕ್ಷವಾಗಿ ಮೈತ್ರಿ ಅಭ್ಯರ್ಥಿಯ ವಿರುದ್ಧ ಹರಿಹಾಯ್ದ ಅವರು, ಅವರಂತೆ ಹಣದ ಮೂಲಕ ರಾಜಕೀಯ ಮಾಡುವ ಶಕ್ತಿ ತಮ್ಮ ಪಕ್ಷಕ್ಕಿಲ್ಲ. ತಮ್ಮದೇನಿದ್ದರು ಬೇರು ಮಟ್ಟದ ಕಾರ್ಯಕರ್ತರ ಮೂಲಕ ಗೆಲುವು ಸಾಧಿಸುವುದಾಗಿ ಹೇಳಿದರು. ರಾಜ್ಯದಲ್ಲಿ ಗುರುವಾರ ನಡೆದ ಐಟಿ ದಾಳಿಯ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ, ಐಟಿ ಒಂದು ಸ್ವತಂತ್ರ ಸಾಂವಿಧಾನಿಕ ಸಂಸ್ಥೆ. ಅವರ ಕೆಲಸ ಅವರು ಮಾಡುತ್ತಿದ್ದಾರೆ ಎಂದರು.

ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲವಿಲ್ಲ: ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ರುದ್ರೇಶ್‌ ಮಾತನಾಡಿ, ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ತಮ್ಮ ಪಕ್ಷದಲ್ಲಿ ಯಾವ ಗೊಂದಲಗಳು ಇಲ್ಲ. ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸುತ್ತೇವೆ. ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಆರ್‌.ಅಶೋಕ್‌ ಅವರ ಸಹಕಾರ ಮತ್ತು ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.

ಈ ವೇಳೆ ಬಿಜೆಪಿ ಪ್ರಮುಖರಾದ ಮುನಿರಾಜು ಗೌಡ, ಮಾಳವಿಕ, ಎಸ್‌.ಆರ್‌.ನಾಗರಾಜ್‌, ಪ್ರವೀಣ್‌ ಗೌಡ, ಜಿ.ವಿ.ಪದ್ಮಭಾಭ, ಮುರಳೀಧರ, ಆನಂದ ಸ್ವಾಮಿ, ಡಾ.ನವೀನ್‌, ಮಲವೇಗೌಡ ಮುಂತಾದವರು ಹಾಜರಿದ್ದರು.

ಡಿ.ಕೆ ಸಹೋದರರ ಅನುಮತಿ ಇಲ್ಲದೇ ಕ್ರಷರ್‌ ಸದ್ದು ಮಾಡೋಲ್ಲ
ರಾಮನಗರ: ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ನಾಮಪತ್ರ ಸಲ್ಲಿಸಿದ ವೇಳೆ ತಮ್ಮ ಒಟ್ಟು ಆಸ್ತಿ 338 ಕೋಟಿ ರೂ ಇದೆ ಎಂದು ಘೋಷಿಸಿಕೊಂಡಿದ್ದಾರೆ. 20 ವರ್ಷಗಳ ಅವರ ಬದುಕು ಹೇಗಿತ್ತು? ಇಂದು ಹೇಗಿದ್ದಾರೆ ಎಂಬುದನ್ನು ಗಮನಿಸಬೇಕಾಗಿದೆ. ಇವರ ಅನುಮತಿ ಇಲ್ಲದೇ ಜಿಲ್ಲೆಯಲ್ಲಿ ಯಾವ ಕ್ರಷರ್‌ ಕೂಡ ಸದ್ದು ಮಾಡೋಲ್ಲ – ಹೀಗೆ ಡಿ.ಕೆ. ಸುರೇಶ್‌ರನ್ನು ತರಾಟೆಗೆ ತೆಗೆದುಕೊಂಡಿದ್ದು ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌.

ತಾಲೂಕಿನ ಮೇಡನಹಳ್ಳಿಯಲ್ಲಿ ಮಾತನಾಡಿದ ಅವರು, ಈ ಭಾಗದ ಎಲ್ಲಾ ರಾಜ್ಯ, ರಾಷ್ಟ್ರೀಯ ಹೆದ್ದಾರಿ, ರಸ್ತೆಗಳ ಗುತ್ತಿಗೆಯನ್ನು ಡಿ.ಕೆ.ಸುರೇಶ್‌ ಅವರೇ ಬೇನಾಮಿ ಗುತ್ತಿಗೆ ಪಡೆದುಕೊಂಡಿದ್ದಾರೆ. ರಾಜಕಾರಣ ಮಾಡಿಕೊಂಡು ತಮ್ಮ ವ್ಯಾಪಾರವನ್ನು ವಿಸ್ತರಿಸಿಕೊಂಡು ಅವರು ಶ್ರೀಮಂತರಾಗುತ್ತಿದ್ದಾರೆ ಹೊರತು, ಜಿಲ್ಲೆಯ ರೈತರ, ಜನರ ಸಮಸ್ಯೆಗಳು ಮಾತ್ರ ಬಗೆಹರಿಯುತ್ತಿಲ್ಲ ಎಂದು ಆರೋಪಿಸಿದರು.

ಸಚಿವ ಡಿಕೆಶಿ ಅವರದ್ದು ಮಂದ ಚರ್ಮ: ತನಿಖಾ ಸಂಸ್ಥೆಗಳು ಡಿ.ಕೆ.ಸಹೋದರರಿಗೆ ಸೇರಿದ ಕೆಲವು ಬೇನಾಮಿ ಆಸ್ತಿಯನ್ನು ಮುಟ್ಟುಗೊಳು ಹಾಕಿಕೊಂಡಿದ್ದಾರೆ. ಹುಡುಕಿದರೆ ಅಂತಹ ನೂರಾರು ಬೇನಾಮಿ ಆಸ್ತಿಗಳು ಸಿಗುತ್ತವೆ. ಸಚಿವ ಡಿ.ಕೆ.ಶಿವಕುಮಾರ್‌ ಅವರದ್ದ ಮಂದ ಚರ್ಮ ಇಲ್ಲದಿದ್ದರೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು. ಜನ ತಮ್ಮನ್ನು ಕಳ್ಳ ಎನ್ನುತ್ತಿದ್ದರು, ತಾವು ಮಾಡಿದ 300 ಕೋಟಿ ಹೋದರು ಪರವಾಗಿಲ್ಲ, 600 ಕೋಟಿ ಮಾಡ್ತೇವೆ ಎನ್ನುವಂತ್ತಿದೆ ಅವರ ಧೋರಣೆ ಎಂದರು.

ಜನ ಸೇವೆ ಅವರ ಉದ್ದೇಶವಲ್ಲ: ಎಚ್‌.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಸಹೋದರರ ಕುಟುಂಬಗಳಿಗೆ ಜನ ಸೇವೆ ಮಾಡುವ ಯಾವ ಉದ್ದೇಶವೂ ಇಲ್ಲ. ಅವರ ಕುಟುಂಬದ ಸದಸ್ಯರನ್ನು ರಾಜಕೀಯಕ್ಕೆ ತರುವುದೇ ಅವರಿಗೆ ಮುಖ್ಯ. ಈ ಎರಡೂ ಕುಟುಂಬಗಳಿಗೆ ಪಾಠ ಕಲಿಸುವ ಸಮಯ ಬಂದಿದೆ. ಮತದಾರರು ಬಿಜೆಪಿಯ ವೈಚಾರಿಕತೆಯುಳ್ಳ ಅಭ್ಯರ್ಥಿ ಅಶ್ವತ್ಥನಾರಾಯಣ ಅವರನ್ನು ಗೆಲ್ಲಿಸಬೇಕು ಎಂದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಎಚ್‌.ಡಿ.ಕುಮಾರಸ್ವಾಮಿ ಒಮ್ಮೆಯಾದರೂ ಕ್ಷೇತ್ರದ ಗ್ರಾಮೀಣ ಪ್ರದೇಶಕ್ಕೆ ಭೇಟಿ ನೀಡಿ ಕಷ್ಟಸುಖ ವಿಚಾರಿಸಲಿಲ್ಲ. ಈಗ ಪ್ರಜಾಪ್ರಭುತ್ವದ ದೌರ್ಬಲ್ಯಗಳನ್ನು ಬಳಸಿಕೊಂಡು ಮಂಡ್ಯದಲ್ಲಿ ತಮ್ಮ ಪುತ್ರ ನಿಖೀಲ್‌ನನ್ನು ಕಣಕ್ಕಿಳಿಸಿದ್ದಾರೆ ಎಂದು ಲೇವಡಿಯಾಡಿದರು.

ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ 54 ಹೊಸ ರೈಲುಗಳು ಮಂಜೂರಾಗಿವೆ. ಇತಿಹಾಸದಲ್ಲೇ ಈ ಪ್ರಮಾಣದಲ್ಲಿ ಹೊಸ ರೈಲುಗಳು ಸಿಕ್ಕಿದ್ದು ಇದೇ ಪ್ರಥಮ.
-ಅಶ್ವತ್ಥನಾರಾಯಣ, ಬೆಂ.ಗ್ರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.