ಸಂಘದ ಹಣ ಲೂಟಿ; ದೂರು ದಾಖಲು
Team Udayavani, Jan 2, 2022, 2:47 PM IST
ಕನಕಪುರ: ಮಹಿಳಾ ಸಂಘದಲ್ಲಿ ದುರ್ಬಳಕೆಯಾಗಿರುವ ಹಣವನ್ನು ವಸೂಲಿ ಮಾಡಲು ಮಹಿಳಾ ಶ್ರೀ ಶಕ್ತಿ ಸಂಘದ ಗ್ರಾಮೀಣ ಭಾಗದ ಮಹಿಳೆಯರು ಪರದಾಡುತ್ತಿದ್ದಾರೆ.
ತಾಲೂಕಿನ ಮರಳವಾಡಿ ಹೋಬಳಿಯ ಸಿಡಿ ದೇವರಹಳ್ಳಿ ಗ್ರಾಮದಲ್ಲಿ ಹಣ ಕಳೆದುಕೊಂಡಿರುವ ಶ್ರೀ ಶಕ್ತಿ ಸಂಘದ ಮಹಿಳೆಯರು ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಅಲೆದಾಡುತ್ತಿದ್ದಾರೆ. ಮಹಿಳಾ ಶ್ರೀ ಶಕ್ತಿ ಸಂಘಗಳ ಒಕ್ಕೂಟದವ್ಯವಸ್ಥಾಪಕ ಸತೀಶ್ ಮತ್ತು ಮಹಿಳಾ ಅಸೋಸಿಯೇಟೆಡ್ ಶಾಮೀಲಾಗಿ ಲಕ್ಷಾಂತರ ಹಣ ವಂಚಿಸಿರುವ ಆರೋಪ ಕೇಳಿಬಂದಿತ್ತು.
ಆರ್ಕಾವತಿ ಮಹಿಳಾ ಕಳಂಜಿಯಂ ಒಕ್ಕೂಟದ ಸದಸ್ಯರಾಗಿರುವ ಸಿಡಿದೇವರ ಹಳ್ಳಿ ಗ್ರಾಮದ ಮಹಿಳೆಯರು ಒಕ್ಕೂಟದ ವ್ಯವಸ್ಥಾಪಕ ಸತೀಶ್ ಮತ್ತು ಸಹಾಯಕಿಇಬ್ಬರು ಸೇರಿ ಸಂಘದ ಲಕ್ಷಾಂತರ ರೂ.ಹಣ ಲೂಟಿ ಮಾಡಿದ್ದಾರೆ. ಕಳೆದ ಡಿ.5ರಂದು ಗ್ರಾಮದಲ್ಲಿ ಸಭೆ ಸೇರಿ ಸಾರ್ವಜನಿಕವಾಗಿಯೇ ತರಾಟೆ ತೆಗೆದುಕೊಂಡಿದ್ದರು.
ವ್ಯವಸ್ಥಾಪಕ ಮತ್ತು ಅಸೋಸಿಯೇಟೆಡ್ ಇಬ್ಬರು ತಪ್ಪನ್ನು ಒಪ್ಪಿಕೊಳ್ಳದ ಹಿನ್ನೆಲೆ ಮಹಿಳೆಯರು ಹಾರೋಹಳ್ಳಿ ಠಾಣೆಗೆ ದೂರು ನೀಡಿದ್ದರು ಪ್ರಯೋಜನಆಗಿಲ್ಲ. ಕಸ್ತೂರಿ ಕರ್ನಾಟಕ ಜನಪರವೇದಿಕೆ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ವರಲಕ್ಷ್ಮಿ ಮಹಿಳೆಯರಹೋರಾಟಕ್ಕೆ ಕೈಜೋಡಿಸಿದ್ದಾರೆ. ಸಂಘಗಳಲ್ಲಿ ವಂಚನೆ ಪ್ರಕರಣಗಳು ಬೆಳಕಿಗೆ ಬಂದಾಗ ಗ್ರಾಮೀಣ ಭಾಗದ ಮಹಿಳೆಯರಿಗೆ ಕಾನೂನು ಹೋರಾಟ ಮತ್ತು ಕಳೆದುಕೊಂಡ ಹಣ ಮರಳಿ ಪಡೆಯುವ ತಿಳಿವಳಿಕೆ ಇಲ್ಲದೇ ಇರುವುದು
ದಂಧೆಕೋರರಿಗೆ ಹಾಸಿಗೆ ಹಾಸಿ ಕೊಟ್ಟಂತಾಗಿದೆ. ಗ್ರಾಮೀಣ ಮಟ್ಟದಲ್ಲಿ ಸರ್ಕಾರಿ ಸೌಲಭ್ಯ ಬಳಸಿಕೊಳ್ಳುವ ಅರಿವಿರುವ ಮಹಿಳೆಯರಿಗೆ ಕಾನೂನು ಕೋಶಾಧಿಕಾರಿಗಳು, ಅಥವಾ ನ್ಯಾಯವಾದಿಗಳ ಬಳಿ ಈ ಬಗ್ಗೆ ಚರ್ಚಿಸಿದ್ದರೇ ಸಮಸ್ಯೆ ಇಷ್ಟು ಕಂಗ್ಗಟಾಗುತ್ತಿರಲಿಲ್ಲ ಎಂಬುದು ಕಾನೂನು ಬಲ್ಲವರ ಮಾತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು
ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡುತ್ತಿದ್ದರಾ ಮುನಿರತ್ನ?
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.