ಮಾನಸಿಕ ರೋಗಿಗಳ ಬಗ್ಗೆ ಕಾಳಜಿ ಇರಲಿ: ವೆಂಕಟಪ್ಪ
Team Udayavani, Oct 11, 2020, 1:43 PM IST
ರಾಮನಗರ: ಮಾನಸಿಕ ರೋಗಿಗಳಿಗೂ ಕಾನೂನು ಇದೆ. ಹೀಗಾಗಿ ಜನಸಾಮಾನ್ಯರಲ್ಲಿ ಈ ವಿಚಾರದ ಬಗ್ಗೆ ತಿಳಿವಳಿಕೆ ಮೂಡಿಸಿ ಕಾನೂನುಅವಶ್ಯಕತೆ ಇದ್ದರೆ ಪ್ರಾಧಿಕಾರದ ಗಮನಕ್ಕೆ ತರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಬಿ.ವೆಂಕಟಪ್ಪ ತಿಳಿಸಿದರು.
ಜಿಲ್ಲೆಯ ಚನ್ನಪಟ್ಟಣದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ “ಸದೃಢ ಮಾಸಿಕ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಿ’ ಎಂಬ ಘೋಷಣೆಯೊಡನೆ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಮಾನಸಿಕ ಆರೋಗ್ಯ ದಿನ ಉದ್ಘಾಟಿಸಿ ಮಾತನಾಡಿದರು. ಮಾನಸಿಕ ರೋಗಿಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡುವುದರ ಮೂಲಕ ಅಂತಹ ರೋಗಿಗಳಿಗೂ ನ್ಯಾಯ ಒದಗಿಸಬೇಕು ಎಂದರು.
ಆಪ್ತ ಸಮಾಲೋಚನೆ:ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯ ವಿಭಾಗದಿಂದ ಆಯೋಜಿಸುತ್ತಿರುವ ಶಿಬಿರಗಳ ಬಗ್ಗೆ ಮಾಹಿತಿ ನೀಡಿದರು. ಮಾನಸಿಕವಾಗಿ ಕುಗ್ಗಿರುವ ವ್ಯಕ್ತಿಗಳಿಗೆ ಆಪ್ತ ಸಮಾಲೋಚನೆ ನಡೆಸುತ್ತಿರುವುದಾಗಿ, ಅಗತ್ಯವಿದ್ದವರಿಗೆ ಚಿಕಿತ್ಸೆ ನೀಡುತ್ತಿರುವು ದಾಗಿ ವಿವರಿಸಿದರು. ಇದೇ ವೇಳೆ ಮಾನಸಿಕ ರೋಗಿಗಳಿಗೆ ಲಭ್ಯವಿರುವ ಆರೋಗ್ಯ ಸವಲತ್ತಿನ ಬಗ್ಗೆ ಕರಪತ್ರ ಬಿಡುಗಡೆ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲ ವಿ.ಶೈಲೇಂದ್ರ, ಭೌತಿಕ ಆರೋಗ್ಯ ಸಮಸ್ಯೆ ಗಳಿಗೆ ಹೆಚ್ಚು ಒತ್ತು ಕೊಡುತ್ತಿದ್ದೇವೆ. ಮಾನಸಿಕ ಸಮಸ್ಯೆಗಳ ಬಗ್ಗೆಯೂ ತಿಳಿವಳಿಕೆ ಮೂಡಿಸಿಕೊಂಡು ಆರೋಗ್ಯಇಲಾಖೆಕಾರ್ಯಕ್ರಮದ ಅಧಿಕಾರಿ, ಸಿಬ್ಬಂದಿಯೊಂದಿಗೆ ಮುಕ್ತವಾಗಿ ವಿನಿಮಯ ಮಾಡಿಕೊಂಡರೆ ಉತ್ತಮ ಜೀವನ ನಡೆಸಲು ಸಾಧ್ಯವಿದೆ ಎಂದರು.
ಮನೋರೋಗ ತಜ್ಞ ಡಾ.ಆದರ್ಶ ಉಪನ್ಯಾಸ ನೀಡಿ, ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣ ಮತ್ತು ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದರು. ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರನ್ನು ಪತ್ತೆ ಹಚ್ಚುವುದುಹೇಗೆ,ಪೂರ್ಣಚಿಕಿತ್ಸೆಮಹತ್ವ,ಯೋಗ, ಧ್ಯಾನಗಳಿಂದಾಗುವ ಲಾಭ, ಇತ್ಯಾದಿ ವಿಷಯಗಳ ಬಗ್ಗೆ ಬೆಳಕು ಚೆಲ್ಲಿದರು.
ಆರ್ಸಿಎಚ್ ಅಧಿಕಾರಿ ಡಾ.ಪದ್ಮಾ, ಡಿಎಸ್ಒಡಾ.ಕಿರಣ್ ಶಂಕರ್,ಡಿಟಿಒಡಾ.ಕುಮಾರ,ಡಿವೈಎಸ್ಪಿಗಳಾದ ಗುರುಪ್ರಸಾದ್, ಶ್ರೀನಿವಾಸ್,ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್.ಗಂಗಾಧರ್, ಪ್ರಮುಖರಾದ ಪದ್ಮರೇಖಾ, ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ತರಬೇತಿ ಶಾಲೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Channapatna: ಜೆಡಿಎಸ್ಗೇ ಉಳಿಸಿಕೊಳ್ಳಲು ತೀರ್ಮಾನ? ಮೈತ್ರಿ ಅಭ್ಯರ್ಥಿ ಜಿಜ್ಞಾಸೆ
Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ
Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ
Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.