ಭವಿಷ್ಯದಲ್ಲಿ ರಾಮನಗರದಿಂದ ನಿಖಿಲ್‌ ಸ್ಪರ್ಧೆ: ಎಚ್‌ಡಿಡಿ ಸುಳಿವು


Team Udayavani, Mar 4, 2020, 3:00 AM IST

bhavishyadalli

ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸುವ ಸೂಚನೆಯನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನೀಡಿದ್ದಾರೆ. ರಾಮನಗರದ ಹೊರ ವಲಯದಲ್ಲಿರುವ ಜಾನಪದ ಲೋಕದ ಬಳಿಯ ಖಾಸಗಿ ಭೂಮಿಯಲ್ಲಿ ನಿಖಿಲ್‌-ರೇವತಿ ವಿವಾಹ ಸಿದ್ಧತೆ ಕಾರ್ಯ ವೀಕ್ಷಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಇಲ್ಲಿನ ಜನರ ಆಶೀರ್ವಾದವಿದ್ದರೆ ನಿಖಿಲ್‌ ರಾಮನಗರದಿಂದ ಸ್ಪರ್ಧಿಸಬಹುದು ಎಂದು ಪ್ರತಿಕ್ರಿಯಿಸಿದ್ದಾರೆ. ಹಾಸನಕ್ಕೆ ರೇವಣ್ಣ, ಪ್ರಜ್ವಲ್‌ ಸೀಮಿತರಾಗಿದ್ದಾರೆ, ರಾಮನಗರದಲ್ಲಿ ನಾನು ಮತ್ತು ಕುಮಾರಸ್ವಾಮಿ ಸೀಮಿತರಾಗಿದ್ದೆವು. ಮುಂದೆ ಜನಾಭಿಪ್ರಾಯಕ್ಕೆ ಮಣಿಯಬೇಕಾಗಿದೆ. ಜನರ ಆರ್ಶಿವಾದವಿದ್ದರೆ ನಿಖಿಲ್‌ ಇಲ್ಲಿಂದ ಸ್ಪರ್ಧೆ ಮಾಡಬಹುದು ಎಂದರು.

ರಾಮನಗರದಲ್ಲಿ ನಿಖಿಲ್‌ ಮದುವೆ ಮಾಡುತ್ತಿರುವುದು ರಾಜಕೀಯಗಳಿಕೆಗಾಗಿ ಎಂಬ ಆಕ್ಷೇಪಗಳು ಕೇಳಿ ಬಂದಿವೆ ಎಂದು ಸುದ್ದಿಗಾರರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು, ತಮ್ಮ ಕುಟುಂಬದಿಂದ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದು, ನಿಖಿಲ್‌ ಮಾತ್ರ. ಹೀಗಾಗಿ ಆತನ ಮದುವೆಗೆ ಸಾಕಷ್ಟು ಮಂದಿಯನ್ನು ಕರೆಯಬೇಕಾಗಿದೆ. ಬೆಂಗಳೂರಿನಲ್ಲಿ ಕಲ್ಯಾಣ ಮಂಟಪಗಳಲ್ಲಿ ಮದುವೆ ಮಾಡುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕಾಗಿ ಇಲ್ಲಿ ಮದುವೆ ಮಾಡುತ್ತಿರುವುದಾಗಿ ತಿಳಿಸಿದರು.

ಮದುವೆ ಸರಳವಾಗಿ ನಡೆಯಲಿದೆ. ದೊಡ್ಡ ಪ್ರಮಾಣದಲ್ಲಿ ಇಲ್ಲ. ಊಟ ಒಂದು ಪ್ಲೇಟಿಗೆ 3ರಿಂದ 4 ಸಾವಿರ ಇಲ್ಲ. 200 ರೂ. ನಿಗದಿ ಮಾಡುವವರಿದ್ದಾರೆ. ಜೆಡಿಎಸ್‌ ಬಲಗೊಳಿಸುವ ವಿಚಾರದಲ್ಲಿ ಪ್ರಶಾಂತ್‌ ಕಿಶೋರ್‌ ಸಂಪರ್ಕದಲ್ಲಿರುವ ಕುಮಾರಸ್ವಾಮಿ ಮಾತನಾಡುತ್ತಾರೆ. ಮಧು ಬಂಗಾರಪ್ಪ ವಿಚಾರದಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ನನಗೆವಯಸ್ಸಾಗಿದ್ದು, ರಾಜಕೀಯವನ್ನು ಮಕ್ಕಳು ಮುಂದುವರೆಸಲಿದ್ದಾರೆ ಎಂದರು.

ನಿಖಿಲ್‌ ಮದುವೆಗೂ ಆತನ ರಾಜಕೀಯ ಭವಿಷ್ಯಕ್ಕೂ ಸಂಬಂಧವಿಲ್ಲ: ರಾಮನಗರದಲ್ಲಿ ಪುತ್ರ ನಿಖಿಲ್‌ ವಿವಾಹ ಮಾಡುತ್ತಿರುವುದು ತಮ್ಮ ಪರ್ಸನಲ್‌ ಕಮಿಟ್ಮೆಂಟ್‌, ಮದುವೆಗೂ ನಿಖಿಲ್‌ ರಾಜಕೀಯ ಭವಿಷ್ಯಕ್ಕೂ ಯಾವುದೆ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು. ನಗರದ ಹೊರವಲಯದಲ್ಲಿರುವ ಜಾನಪದ ಲೋಕದ ಬಳಿಯ ಖಾಸಗಿ ಜಮೀನಿನಲ್ಲಿ ಪುತ್ರನ ಮದುವೆ ತಯಾರಿ ವೀಕ್ಷಿಸಲು ಆಗಮಿಸಿದ್ದ ಸುದ್ದಿಗಾರರೊಂದಿಗೆ ಮಾತನಾಡಿದರು.

ನಿಖಿಲ್‌ ರಾಜಕೀಯ ಭವಿಷ್ಯದ ವಿಚಾರದಲ್ಲಿ ದೈವದಾಟ ಏನೋ ಗೊತ್ತಿಲ್ಲ. ಮಂಡ್ಯಕ್ಕೆ ಹೋಗೋದು ಬೇಡ ಎಂದು ನಾನು ಹೇಳಿದ್ದೆ, ಆದರೆ ಕೆಲವೊಮ್ಮೆ ದೈವ ನಮನ್ನು ಕರೆದುಕೊಂಡು ಹೋಗುತ್ತದೆ. ಭವಿಷ್ಯದಲ್ಲೂ ನಿಖಿಲ್‌ನ ರಾಜಕೀಯ ಭವಿಷ್ಯದ ಬಗ್ಗೆಯೂ ದೈವದ ಆಟ ಗೊತ್ತಿಲ್ಲ. ರಾಜಕೀಯವಾಗಿ ಜನ್ಮ ನೀಡಿದ ರಾಮನಗರ, ಚನ್ನಪಟ್ಟಣ ಜನರ ನಡುವೆ ಮಗನ ಮದುವೆ ಮಾಡಲು ನಿಶ್ಚಯಿಸಿರುವುದಾಗಿ ತಿಳಿಸಿದರು.

ಉಡುಗೂರೆ ನಿರ್ಧಾರ ತಮ್ಮದಲ್ಲ: ಪುತ್ರ ನಿಖಿಲ್‌ ಮದುವೆಯ ಆಮಂತ್ರಣದ ಜೊತೆಗೆ ಪಂಚೆ, ಸೀರೆ ಉಡುಗೂರೆ ಕೊಡುವ ವಿಚಾರದಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅದು ತಮ್ಮ ನಿರ್ಧಾರವಲ್ಲ. ಮದುವೆಯನ್ನು ಕಾರ್ಯಕರ್ತರೇ ನಿಂತು ಮಾಡುತ್ತಿರುವ ಸಮಾರಂಭ, ಕೆಲವು ಕಾರ್ಯಕರ್ತರು ಪಂಚೆ, ಸೀರೆ ಕೊಡುವುದಾಗಿ ಹೇಳಿದ್ದಾರೆ. ಅದನ್ನು ಅವರೇ ತೀರ್ಮಾನ ಮಾಡ್ತಾರೆ ಎಂದು ಸ್ಪಷ್ಟ ಪಡಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.