ವಾಹನ ಸವಾರರಿಗೆ ಕಂಟಕಪ್ರಾಯವಾದ ಹೆದ್ದಾರಿ ರಸ್ತೆ


Team Udayavani, Jun 28, 2022, 2:50 PM IST

ವಾಹನ ಸವಾರರಿಗೆ ಕಂಟಕಪ್ರಾಯವಾದ ಹೆದ್ದಾರಿ ರಸ್ತೆ

ಕನಕಪುರ: ನಗರಸಭೆ ಅಧಿಕಾರಿಗಳ ಬೇಜವಾ ಬ್ದಾರಿಯಿಂದ ಅಗೆದು ಹಾಕಿರುವ ರಸ್ತೆ ಗುಂಡಿಗಳು, ಸಾರ್ವಜನಿಕರ ಪ್ರಾಣಕ್ಕೆ ಕಂಟಕ ಪ್ರಾಯವಾಗಿ ಪರಿಣಮಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಯುಜಿಡಿ ಕಾಮಗಾರಿ ನೆಪದಲ್ಲಿ ಹೆದ್ದಾರಿ ರಸ್ತೆ ಅಗೆದು ಹಾಕಿರುವ ನಗರಸಭೆ ಅಧಿಕಾರಿಗಳು, ತಿಂಗಳು ಕಳೆದರೂ, ರಸ್ತೆ ಸರಿಯಾಗಿ ಮುಚ್ಚದೆ ಹೆದ್ದಾರಿಯಲ್ಲಿ ಓಡಾಡುವ ಸವಾರರು ಅಪಘಾತಕ್ಕೀಡಾಗುವ ಪರಿಸ್ಥಿತಿ ನಿರ್ಮಾಣ ಮಾಡಿರುವ ನಗರಸಭೆ ಅಧಿಕಾರಿಗಳ ವರ್ತನೆಗೆ ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.

ನಗರದಲ್ಲಿ ಕೊಳಾಯಿ ಸಂಪರ್ಕ, ದುರಸ್ತಿ, ಯುಜಿಡಿ ಕಾಮಗಾರಿ ಸೇರಿದಂತೆ ನಾನಾ ಕಾರಣಗಳಿಗೆ ರಸ್ತೆಯನ್ನು ಅಗೆಯುವ ನಗರಸಭೆ ಅಧಿಕಾರಿಗಳು ಗುಂಡಿಗಳನ್ನು ಸರಿಯಾಗಿ ಮುಚ್ಚದೆ ಇರುವುದು ಅಧಿಕಾರಿಗಳ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಂತಿದೆ.

ಕಾಟಾಚಾರಕ್ಕೆ ಗುಂಡಿ ಮುಚ್ಚಿದ್ದಾರೆ: ಯಾವುದೇ ರಸ್ತೆಗಳಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೂ ಮುನ್ನ ಯುಜಿಡಿ ಮತ್ತು ಕೊಳಾಯಿ ಸಂಪರ್ಕ ಕಲ್ಪಿಸಿ ನಂತರ ವೈಜ್ಞಾನಿಕವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು. ಆದರೆ, ನಗರಸಭೆ ಅಧಿಕಾರಿಗಳು ಅಭಿವೃದ್ಧಿಯಾಗಿರುವ ಕಾಂಕ್ರೀಟ್‌ ರಸ್ತೆಗಳನ್ನು ಅಗೆದು ಗುಂಡಿಗಳು ಬಿದ್ದಿದ್ದರೂ, ಅದರ ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ. ರಸ್ತೆಗಳನ್ನು ಅಗೆದು ಕೆಲಸ ಮುಗಿದ ನಂತರ ಕಾಟಾಚಾರಕ್ಕೆ ಗುಂಡಿ ಮುಚ್ಚಿ ಕೈತೊಳೆದುಕೊಳ್ಳುವ ಅಧಿಕಾರಿಗಳು, ರಸ್ತೆ ಗುಂಡಿ ಸರಿಯಾಗಿ ಮುಚ್ಚಿದ್ದಾರೂ, ಇಲ್ಲವೂ ಎಂದು ತಿರುಗಿ ಸಹ ನೋಡುವುದಿಲ್ಲ ಎಂಬುದು ಸಾರ್ವಜನಿಕರಿಂದ ಕೇಳಿ ಬಂದಿರುವ ಆರೋಪ.

ಕಾಮಗಾರಿ ನೆಪದಲ್ಲಿ ರಸ್ತೆ ಅಗೆದ ಅಧಿಕಾರಿಗಳು: ನಗರದ ಕೆಎನ್‌ಎಸ್‌ ವೃತ್ತದ ಸಮೀಪವಿರುವ ಎಸ್‌ಬಿಎಂ ಬ್ಯಾಂಕಿನ ಮುಂಭಾಗದಲ್ಲಿ 209 ರಾಷ್ಟ್ರೀಯ ಹೆದ್ದಾರಿ ರಸ್ತೆ ಯುಜಿಡಿ ಕಾಮಗಾರಿ ನೆಪದಲ್ಲಿ ಅಗೆದು ಹಾಕಿರುವ ನಗರಸಭೆ ಅಧಿಕಾರಿಗಳು, ಗುಂಡಿಗಳನ್ನು ಮುಚ್ಚದೆ ಇರುವುದು ಸಾರ್ವಜನಿಕರ ಪ್ರಾಣಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿದೆ. ಯುಜಿಡಿ ಕಾಮಗಾರಿ ನೆಪದಲ್ಲಿ ರಸ್ತೆ ಅಗೆದ ನಗರಸಭೆ ಅಧಿಕಾರಿಗಳು ಕಾಮಗಾರಿ ಮುಗಿದು ತಿಂಗಳು ಕಳೆದರೂ ರಸ್ತೆ ಗುಂಡಿಯನ್ನು ಸರಿಯಾಗಿ ಮುಚ್ಚಿ ಸಮತಟ್ಟು ಮಾಡುವ ಗೋಜಿಗೆ ಹೋಗಿಲ್ಲ.

ಹೆದ್ದಾರಿ ರಸ್ತೆ ದುರಸ್ತಿಗೊಳಿಸಿ: ಗುಂಡಿ ಬಗೆದ ಮಣ್ಣನ್ನು ಬೇಕಾಬಿಟ್ಟಿಯಾಗಿ ಹಾಕಿರುವುದು ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಅಪಾಯಕ್ಕೆ ಅಹ್ವಾನ ನೀಡುತ್ತಿದೆ. ಹೆದ್ದಾರಿಯಲ್ಲಿ ವೇಗವಾಗಿ ಓಡಾಡುವ ಸವಾರರು ಗುಂಡಿಗಳಲ್ಲಿ ವಾಹನಗಳನ್ನು ಚಲಾಯಿಸಿ ಸ್ವಲ್ಪದರಲ್ಲೇ ಅಪಾಯಗಳಿಂದ ಪಾರಾಗಿರುವ ಉದಾಹರಣೆಗಳು ಸಾಕಷ್ಟಿವೆ. ವಾಹನ ಸವಾರರು ಅಪಘಾತಕ್ಕೀಡಾಗಿ ಅಪಾಯ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ಹೆದ್ದಾರಿ ರಸ್ತೆ ದುರಸ್ತಿಗೊಳಿಸಬೇಕು ಎಂಬುದು ಸಾರ್ವ ಜನಿಕರ ಆಗ್ರಹ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.