ನಿಖೀಲ್ ಗೆಲುವಿಗೆ ಅಭಿಮಾನಿಗಳಿಂದ ಪ್ರಾರ್ಥನೆ

ಚಾಮುಂಡೇಶ್ವರಿ ದೇವಿಗೆ 101 ಈಡುಗಾಯಿ ಸೇವೆ

Team Udayavani, May 22, 2019, 10:31 AM IST

ramanagar-tdy-2..

ರಾಮನಗರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲದಯ ಮುಂದೆ ಈಡುಗಾಯಿ ಸೇವೆ ಸಲ್ಲಿಸಿದ ಕುಮಾರಣ್ಣ ಅಭಿಮಾನಿಗಳ ಬಳಗದ ಸದಸ್ಯರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖೀಲ್ ಗೆಲುವಿಗೆ ಪ್ರಾರ್ಥನೆ ಸಲ್ಲಿಸಿದರು.

ರಾಮನಗರ: ಮಂಡ್ಯ ಲೋಕಸಭೆ ಮೈತ್ರಿ ಅಭ್ಯರ್ಥಿ ಹಾಗೂ ಸಿಎಂ ಕುಮಾರಸ್ವಾಮಿ ಪುತ್ರ ನಿಖೀಲ್ ಕುಮಾರಸ್ವಾಮಿ ಗೆಲುವಿಗೆ ಇಲ್ಲಿನ ಕುಮಾರಣ್ಣ ಅಭಿಮಾನಿ ಬಳಗದವತಿಯಿಂದ ನಗರದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಮತ್ತು ಈಡುಗಾಯಿ ಸೇವೆಯನ್ನು ಹಮ್ಮಿಕೊಳ್ಳಲಾಗಿತ್ತು.

ಚಾಮುಂಡೇಶ್ವರಿ ದೇವಿಗೆ ವಿಶೇಷ ಪ್ರಾರ್ಥನೆ: ಮಂಗಳವಾರ ಬೆಳಿಗ್ಗೆ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಕುಮಾರಣ್ಣ ಅಭಿಮಾನಿಗಳ ಬಳಗದ ಪದಾಧಿಕಾರಿಗಳು ಮತ್ತು ಸದಸ್ಯರು ಶ್ರೀ ಮಾತೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು ನಂತರ ದೇವಾಲಯದ ಮುಂಭಾಗ 101 ಈಡುಗಾಯಿ ಸೇವೆ ಸಲ್ಲಿಸಿದರು. ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ದಂಪತಿ ಪುತ್ರ ನಿಖೀಲ್ ಕುಮಾರಸ್ವಾಮಿ ಅತಿ ಹೆಚ್ಚು ಮತಗಳ ಅಂತರದಿಂದ ಜಯಶಾಲಿಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾಗಿ ಅಭಿಮಾನಿಗಳು ತಿಳಿಸಿದರು.

ಮಂಡ್ಯದ ಮಗ ನಿಖೀಲ್ ಗೆಲ್ಲುವ ವಿಶ್ವಾಸ: ಈ ವೇಳೆ ಜೆಡಿಎಸ್‌ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್‌ ಮಾತನಾಡಿ, ಮಂಡ್ಯ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸ್ಪರ್ಧೆ ಮಾಡಿರುವ ನಿಖೀಲ್ ಕುಮಾರಸ್ವಾಮಿ ಜನಾನುರಾಗಿ ನಾಯಕರಾಗಿ, ಮಂಡ್ಯದ ಮನೆಮಗನಾಗಿ, ಜನರ ಧ್ವನಿಯಾಗಿ ಲೋಕಸಭೆಗೆ ಆಯ್ಕೆಯಾಗಲೆಂದು ಅನುಗ್ರಹ ಮಾಡುವಂತೆ ಶ್ರೀ ಚಾಮುಂಡೇಶ್ವರಿ ತಾಯಿಗೆ ಪ್ರಾರ್ಥನೆ ಸಲ್ಲಿಸಿದ್ದೇವೆ. ಅಲ್ಲದೆ ಚಾಮುಂಡೇಶ್ವರಿ ದೇವಿ ಸಕಲ ರೀತಿಯಲ್ಲೂ ಆಶೀರ್ವಾದ ಮಾಡಲಿ ಎಂಬ ಕಾರಣಕ್ಕೆ ಈ ವಿಶೇಷ ಪೂಜೆ ಸಲ್ಲಿಸಿದ್ದೇವೆ. ದೇವಿ ನಂಬಿದವರನ್ನು ಕೈಬಿಡು ವುದಿಲ್ಲ ಎಂಬ ನಂಬಿಕೆಯಿದೆ ಎಂದರು.

ನಿಖೀಲ್ಗೆ ನಾಯಕತ್ವದ ಗುಣ ರಕ್ತಗತವಾಗಿದೆ: ಜೆಡಿಎಸ್‌ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಸ್‌.ಜಯಕುಮಾರ್‌ ಮಾತನಾಡಿ, ನಿಖೀಲ್ ಕುಮಾರಸ್ವಾಮಿ ರವರಿಗೆ ಸಿಎಂ ಕುಮಾರಸ್ವಾಮಿಯವರ ಸರಳತೆ, ಸಜ್ಜನಿಕೆ, ಅಭಿವೃದ್ಧಿ ಪರ ಚಿಂತನೆಗಳು ರಕ್ತಗತವಾಗಿಯೇ ಬಂದಿವೆ. ಸಕ್ಕರೆ ಜಿಲ್ಲೆಗೆ ಇಂತಹ ಯುವ ನಾಯಕನ ಅಗತ್ಯವಿದೆ. ಅಲ್ಲದೆ ನಿಖೀಲ್ ಮೇಲೆ ದೇವಿಯ ಆಶಿರ್ವಾದ ಸದಾ ಇರಲಿದೆ. ಇಂತಹ ಯುವ ನಾಯಕ ಮಂಡ್ಯದ ಜನರ ಆಶೀರ್ವಾದದಿಂದ ಕನಿಷ್ಠ ಒಂದು ಲಕ್ಷ ಅಂತರದಿಂದ ಜಯಗಳಿಸುತ್ತಾರೆಂಬ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್‌ ವಿದ್ಯಾರ್ಥಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಕ್ಕಿ ಉಲ್ಲಾ ಖಾನ್, ಜೆಡಿಎಸ್‌ ಸೇವಾದಳ ಜಿಲ್ಲಾಧ್ಯಕ್ಷ ಯೋಗೇಶ್‌ ಕುಮಾರ್‌, ಜೆಡಿಎಸ್‌ ವಿದ್ಯಾರ್ಥಿ ಘಟಕದ ಜಿಲ್ಲಾ ಉಪಾಧ್ಯಕ್ಷ ರಘು.ಪಿ, ಜೆ.ಡಿ.ಎಸ್‌ ಮುಖಂಡ ರಮೇಶ್‌, ಸಿ.ಎಸ್‌.ರಾಜು, ಪ್ರಭ, ಅರುಣ್‌ ಕುಮಾರ್‌, ಜಿಲ್ಲಾ ರಕ್ಷಣಾ ವೇದಿಕೆ ಅಧ್ಯಕ್ಷ ಶಿವಲಿಂಗಯ್ಯ, ಹಿರಿಯರಾದ ಹನುಮಯ್ಯ, ಶಿವಾಜಿರಾವ್‌ ಮುಂತಾದವರು ಹಾಜರಿದ್ದರು.

ನಗರದ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಎಲ್ಲ ಜೆಡಿಎಸ್‌ ಕಾರ್ಯಕರ್ತರು ಹಾಗೂ ಅಭಿಮಾನಿಗಳು ನೂರೊಂದು ಈಡುಗಾಯಿಗಳನ್ನು ಒಡೆದು ನಿಖೀಲ್ಗೆಲುವಿಗಾಗಿ ತಮ್ಮ ಪ್ರಾರ್ಥನೆ ಯನ್ನು ಸಲ್ಲಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.