ಸಿಎಂ ತವರಲ್ಲಿ ಕುಡಿವ ನೀರಿಗೇ ಹಾಹಾಕಾರ

ಒಂದೆಡೆ ರಣ ಬಿಸಿಲು ಮತ್ತೂಂದೆಡೆ ಜಿಲ್ಲಾ ಕೇಂದ್ರವನ್ನು ಬಿಟ್ಟು ಬಿಡದೆ ಕಾಡುತ್ತಿರುವ ನೀರಿನ ಸಮಸ್ಯೆ

Team Udayavani, Apr 30, 2019, 3:44 PM IST

ramanagar-tdy-..1

ರಾಮನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವೊಂದರ ದೃಶ

ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿ ಕುಡಿಯುವ ನೀರಿಗೆ ಪರದಾಟ ಆರಂಭವಾಗಿದೆ. 10 ದಿನ ಕಳೆದರು ನೀರು ಪೂರೈಸಲಾಗದ ಜಲಮಂಡಳಿ, ವಿದ್ಯುತ್‌ ಸರಬರಾಜು ವ್ಯತ್ಯಯದ ನೆಪವೊಡ್ಡಿದ್ದಾರೆ. ಚುನಾಯಿತ ಪ್ರತಿನಿಧಿಗಳ ಅವಧಿ ಮುಗಿದಿದ್ದು,

ಜಲಮಂಡಳಿ ಮತ್ತು ನಗರಸಭೆಯಲ್ಲಿ ಅಧಿಕಾರಿಗಳದ್ದೇ ಕಾರುಬಾರು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಗ ನಿಖೀಲ್‌ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ ಇನ್ನು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಇತ್ತ ಕ್ಷೇತ್ರದ ಮತದಾರರು ಹನಿ ನೀರಿಗೂ ಪರದಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ನೀರು ಬಂದರೂ ಕುಡಿಯುವ ಹಾಗಿಲ್ಲ!: ನಗರಕ್ಕೆ ಮಂಡ್ಯ ಜಿಲ್ಲೆಯ ತೊರೆಕಾಡನಹಳ್ಳಿ ಬಳಿಯಿಂದ ಕಾವೇರಿ ನೀರು ಪೂರೈಕೆಯಾಗುತ್ತಿದೆ. ಜಿಲ್ಲಾ ಕೇಂದ್ರಕ್ಕೆ ದಿನ ನಿತ್ಯ 15 ರಿಂದ 16 ಎಂಎಲ್‌ಡಿ ಯಷ್ಟು ನೀರು ಅಗತ್ಯವಿದೆ. ಆದರೆ ಪೂರೈಕೆಯಾಗುತ್ತಿರುವುದು 6 ರಿಂದ 8 ಎಂ.ಎಲ್‌.ಡಿ ಮಾತ್ರ. ಕೊಳವೆ ಬಾವಿಗಳಿಂದ 3-4 ಎಂ.ಎಲ್‌.ಡಿ ನೀರು ಪೂರೈಕೆಯಾಗುತ್ತಿದೆ. ಈ ಕೊರತೆ ನೀಗಿಸಲು ಜಿಲ್ಲಾಡಳಿತ ಮಂಚನಬೆಲೆ ಜಲಾಶಯದಿಂದ  ಅರ್ಕಾವತಿ ನದಿಗೆ ಆಗಾಗ್ಗೆ ನೀರು ಹರಿಸುತ್ತಿದೆ. ಈ ನೀರನ್ನು ಜಲಮಂಡಳಿ ರಾಮ ನಗರದ ಬಳಿ ಅರ್ಕಾವತಿ ನದಿಯಲ್ಲೇ ಶೇಖರಿಸಿ ಕೊಂಡು 1ನೇ ವಾರ್ಡಿನಿಂದ 10ನೇ ವಾರ್ಡಿನ ಮನೆಗಳಿಗೆ ಸರಬರಾಜು ಮಾಡುತ್ತದೆ. ಆದರೆ ಜಲ ಮಂಡಳಿಯೇ ನೀಡಿರುವ ಎಚ್ಚರಿಕೆಯಂತೆ ಈ ನೀರು ಕುಡಿಯಲು ಯೋಗ್ಯವಲ್ಲ! ಹೀಗಾಗಿ ಈ ಭಾಗದ ನಾಗರಿಕರು ಅಡುಗೆ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅವಲಂಭಿಸುವ ಅನಿವಾರ್ಯ ಪರಿಸ್ಥಿತಿ ಉಂಟಾಗಿದೆ.

ಪಾರದರ್ಶಕವಿಲ್ಲದ ಜಲಮಂಡಳಿ ಆಡಳಿತ!: ಕುಡಿಯಲು ಯೋಗ್ಯವಲ್ಲದ ನೀರಿಗೂ ಜಲಮಂಡಳಿ ಮಾಸಿಕ 218 ರೂ. ಶುಲ್ಕವನ್ನು ಈ ವಾರ್ಡುಗಳ ನಾಗರಿಕರಿಂದ ಪೀಕುತ್ತಿದೆ. ನಗರದಲ್ಲಿ ಸುಮಾರು 12 ಸಾವಿರ ನೀರಿನ ಸಂಪರ್ಕಗಳಿವೆ ಎಂದು ಗೊತ್ತಾಗಿದೆ.

ಕಳೆದ 10 ವರ್ಷಗಳಲ್ಲಿ ಒಮ್ಮೆಯಾದರೂ ಜಲ ಮಂಡಳಿ ತನ್ನ ಹಣಕಾಸಿನ ಶ್ವೇತ ಪತ್ರವನ್ನು ಹೊರೆಡಿಸಿಲ್ಲ.

ನಗರ ವ್ಯಾಪ್ತಿಯಲ್ಲಿ ಇರುವ ಅಧಿಕೃತ ಮತ್ತು ಅನಧಿಕೃತ ಸಂಪರ್ಕಗಳೆಷ್ಟು, ವಾಣಿಜ್ಯ ಮತ್ತು ಗೃಹಬಳಕೆ ಸಂಪರ್ಕಗಳೆಷ್ಟು, ವಸೂಲಾಗುತ್ತಿರುವ ಶುಲ್ಕ, ಸಿಬ್ಬಂದಿ ಎಷ್ಟು ಮಂದಿ, ಅವರಿಗೆಷ್ಟು ಸಂಬಳ, ನಿರ್ವಹಣಾ ವೆಚ್ಚ ಎಷ್ಟು , ವಿದ್ಯುತ್‌ಗಾಗಿ ಪಾವತಿಸುತ್ತಿರುವ ಹಣ ಎಷ್ಟು ಹೀಗೆ ಹತ್ತು ಹಲವು ಪ್ರಶ್ನೆಗಳಿಗೆ ಜಲಮಂಡಳಿ ಒಮ್ಮೆಯಾದರೂ ಉತ್ತರ ನೀಡಿಲ್ಲ. ಜಲಮಂಡಳಿ ಅಧಿಕಾರಿಗಳ ಈ ಕಾರ್ಯವೈಖರಿಯ ವಿರುದ್ಧ ಆಗಾಗ್ಗೆ ಸಭೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಘರ್ಜಿಸಿ ಸುಮ್ಮನಾಗುತ್ತಿರುವುದು ಜನಸಾಮಾನ್ಯರಲ್ಲಿ ಸೋಜಿಗ ವ್ಯಕ್ತವಾಗಿದೆ.

ಖಾಸಗಿ ನೀರಿಗೆ ನಾಗರಿಕರ ಮೊರೆ: ಜಲಮಂಡಳಿ ಮತ್ತು ನಗರಸಭೆಯ ವಿರುದ್ಧ ಪ್ರತಿಭಟನೆ ನಡೆಸಿ ಹೈರಾಣಾಗಿರುವ ನಾಗರಿಕರು ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ತಮ್ಮ ಕುಟುಂಬಗಳಿಗೆ ಬೇಕಾದ ನೀರಿಗೆ ಖಾಸಗಿ ಟ್ಯಾಂಕರ್‌ಗಳ ಮೊರೆ ಹೋಗುತ್ತಿದ್ದಾರೆ. ಒಂದು ಟ್ಯಾಂಕರ್‌ಗೆ 300 ರಿಂದ 400 ರೂ. ಕೊಡುತ್ತಿದ್ದಾರೆ. ನಗರದಲ್ಲಿ ಸುಮಾರು 30 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು ಇವುಗಳಿಂದ

ನೀರು ಹೊತ್ತು ತರುವುದು ಬಹುತೇಕ ಪ್ರತಿಯೊಂದು ಕುಟುಂಬದ ಒಬ್ಬ ಸದಸ್ಯರ ನಿತ್ಯದ ಕಾಯಕವಾಗಿದೆ. ದುರಾದೃಷ್ಟವೆಂದರೆ ವಿದ್ಯುತ್‌ ಸಮಸ್ಯೆಯಿಂದಾಗಿ ಶುದ್ಧ ಕುಡಿಯುವ ನೀರಿನ ಘಟಕಗಳು ಗಂಟೆಗಟ್ಟಲೆ ಕೆಲಸ ಮಾಡುವುದೇ ಇಲ್ಲ. ಕೆಲವು ಘಟಕಗಳು ತಾಂತ್ರಿಕ ದೋಷದಿಂದಾಗಿ ಬಾಗಿಲು ಮುಚ್ಚಿರುತ್ತವೆ. ಇಂತಹ ಸಂದರ್ಭಗಳಲ್ಲಿ ಮತ್ತೂಂದು ಬಡಾವಣೆಯ ಘಟಕದಿಂದ ನೀರು ಹೊತ್ತು ತರಬೇಕಾದ ಅನಿವಾ ರ್ಯತೆ ಸೃಷ್ಟಿಯಾಗುತ್ತಿದೆ. ಜಿಲ್ಲಾ ಕೇಂದ್ರವಾಗಿ ಅಸ್ತಿತ್ವಕ್ಕೆ ಬಂದು ದಶಕ ಕಳೆದರೂ ಕುಡಿವ ನೀರಿನ ವಿಚಾರದಲ್ಲಿ ಪರಿಹಾರ ಕಾಣದ ನಾಗರಿಕರು ಚುನಾಯಿತ ಪ್ರತಿನಿಧಿಗಳ ಮೇಲೆ ಬೇಸರಗೊಂಡಿದ್ದಾರೆ .

.ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Nikhil

Political: ಎಚ್‌.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವರು: ನಿಖಿಲ್‌

CM-Siid

By Election: ಚನ್ನಪಟ್ಟಣ ಮುಖಂಡರ ಜತೆ ಸಿಎಂ ಸಿದ್ದರಾಮಯ್ಯ ಸಭೆ

Chennapatana

Teachers Village: ಚನ್ನಪಟ್ಟಣದ ಚಕ್ಕೆರೆಯಲ್ಲಿ ಮನೆಗೊಬ್ಬ ಶಿಕ್ಷಕರು!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.