ನಿಗದಿತ ಸ್ಥಳದಲ್ಲೇ ರೇಷ್ಮೆ ಮಾರುಕಟ್ಟೆ ನಿರ್ಮಾಣ


Team Udayavani, Feb 23, 2021, 1:08 PM IST

ನಿಗದಿತ ಸ್ಥಳದಲ್ಲೇ ರೇಷ್ಮೆ ಮಾರುಕಟ್ಟೆ ನಿರ್ಮಾಣ

ರಾಮನಗರ: ಅವಳಿ ನಗರದಗಳ ಮಧ್ಯಭಾಗದಲ್ಲಿ 15 ರಿಂದ 20 ಎಕರೆ ಜಾಗದಲ್ಲಿ ಹೈಟೆಕ್‌ ಮಾರುಕಟ್ಟೆ ನಿರ್ಮಾಣವಾಗಲಿದೆ. ರಾಮನಗರ ಅಥವಾ ಚನ್ನಪಟ್ಟಣದ ರೇಷ್ಮೆ ಮಾರುಕಟ್ಟೆಗಳು ಯಥಾಸ್ಥಿತಿ ಮುಂದುವರೆಯಲಿದ್ದು, ಸ್ಥಳಾಂತರ ಮಾಡಲಾಗುವುದಿಲ್ಲ ಎಂದು ಶಾಸಕ ಎ.ಮಂಜು ನಾಥ್‌ ಸ್ಪಷ್ಟಪಡಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೂತನ ಮಾರುಕಟ್ಟೆಗೆ ರಾಮನಗರದ ಹೆಸರನ್ನೇ ಇಡಲಾಗುತ್ತದೆ. ವಂದಾರಗುಪ್ಪೆ ಬಳಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್‌ ಮಾರುಕಟ್ಟೆ ನಿರ್ಮಿಸುವ ಯೋಜನೆ ಸಿದ್ಧವಾಗಿದೆ. ಈಗಾಗಲೇ, ನಬಾರ್ಡ್‌ನಿಂದ 35 ಕೋಟಿ ರೂ. ಬಿಡುಗಡೆಯೂಆಗಿದೆ. ಪ್ರಬಲವಾದ ಕಾರಣಗಳಿಲ್ಲದೇ, ರೀಲರ್‌ಗಳು ಉತ್ತಮವಾದ ಯೋಜನೆ ಅನುಷ್ಠಾನಕ್ಕೆ ಅಡ್ಡಿ ಪಡಿಸುವುದು ಸರಿಯಲ್ಲ ಎಂದರು.

ಬೆದರಿಕೆಗಳಿಗೆ ಹೆದರುವುದಿಲ್ಲ: ರೇಷ್ಮೆ ಬೆಳೆಗಾರರು ಹಾಗೂ ರೀಲರ್‌ಗಳಿಗೆ ಅನುಕೂಲವಾಗುವಂತಹ ಹೈಟೆಕ್‌ ರೇಷ್ಮೆ ಮಾರುಕಟ್ಟೆ ನಿರ್ಮಾಣ ವಾಗಲಿದೆ. ಬೆಳೆಗಾರರು ಹಾಗೂ ರೀಲರ್ಸ್‌ಗಳು ಬೇಕಾದರೆ ರಾಮನಗರದ ಹಳೇ ಮಾರುಕಟ್ಟೆಯಲ್ಲೇ ವಹಿ ವಾಟು ನಡೆಸಬಹುದು. ಯಾರಿಗೂ ಬಲವಂತ ಮಾಡುವ ಪ್ರಶ್ನೆಯೇ ಇಲ್ಲ. ನೂತನ ಮಾರುಕಟ್ಟೆಯ ನಿರ್ಮಾಣ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ರೋಲ್‌ ಕಾಲ್‌ ಮಾಡುವ, ಚಂದಾ ಎತ್ತುವವರ ಬೆದರಿಕೆ ಗಳಿಗೆ ಹೆದರುವುದಿಲ್ಲ. ಯಾರು ಏನು ಮಾಡುತ್ತಾರೊ,ನಾವೂ ನೋಡುತ್ತೇವೆ ಎಂದು ಸವಾಲೆಸೆದರು.

ಭವಿಷ್ಯದಲ್ಲಿ ಅವಳಿ ಪಟ್ಟಣ: ರಾಮನಗರ ಮತ್ತು ಚನ್ನಪಟ್ಟಣ ನಗರಗಳನ್ನು ಭವಿಷ್ಯದಲ್ಲಿ ಅವಳಿ ನಗರಗಳು ಎಂದು ಘೋಷಿಸಿ, ಮಹಾನಗರ ಪಾಲಿಕೆಯಾಗಿ ಘೋಷಿಸಿದರೂ, ಆಶ್ಚರ್ಯವಿಲ್ಲ. ಹೀಗಾಗಿ ಎರಡೂ ನಗರಗಳ ನಡುವೆ ಇರುವ ಜಾಗದದಲ್ಲಿ ಹೈಟೆಕ್‌ ಮಾರುಕಟ್ಟೆ ನಿರ್ಮಾಣವಾದರೇ, ಅವಳಿ ಪಟ್ಟಣಗಳು ಕ್ಷೀಪ್ರ ಗತಿಯಲ್ಲಿ ಪ್ರಗತಿ ಹೊಂದುತ್ತವೆ. ನೂತನ ಮಾರುಕಟ್ಟೆ ಸ್ಥಾಪನೆಗೆ ವಿರೋಧ ಮಾಡುತ್ತಿರುವವರುಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ನಿರುದ್ಯೋಗಿ ರಾಜಕಾರಣಿಗಳ ವಿರೋಧ: ನೂತನ ಹೈಟೆಕ್‌ ಮಾರುಕಟ್ಟೆಯನ್ನು ನಿರುದ್ಯೋಗಿ ರಾಜ ಕಾರಣಿಗಳು ಮಾತ್ರ ವಿರೋಧಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ರಾಮನಗರ ಬಂದ್‌ಗೆ ಕರೆ ನೀಡಿದ್ದ ರಾಜಕರಣಿಗಳ ವಿರುದ್ಧ ಕುಟುಕಿದರು. ಅವರೆಲ್ಲರು ರಾಮನಗರ ಜಿಲ್ಲೆ ರಚನೆ, ರಾಜೀವ್‌ ಗಾಂಧಿ ಆರೋಗ್ಯ ವಿವಿ ಸ್ಥಾಪನೆಗೂ ವಿರೋಧ ಮಾಡಿದವರು. ಇಂತಹ ರೋಲ್‌ಕಾಲ್‌ ವ್ಯಕ್ತಿಗಳ ಮಾತುಗಳಿಗೆ ರೀಲರ್‌ಗಳು ಕಿವಿಗೋಡಬಾರದು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ರೇಷ್ಮೆ ಬೆಳೆಗಾರರ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ರವಿ, ಜೆಡಿಎಸ್‌ ತಾಲೂಕು ಅಧ್ಯಕ್ಷ ರಾಜಶೇಖರ್‌, ರೇಷ್ಮೆ ಬೆಳೆಗಾರರ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ಗೌತಮ್‌ ಗೌಡ ಇದ್ದರು

ಏತಕ್ಕಾಗಿ ನೂತನ ಮಾರುಕಟ್ಟೆ? :

ನೂತನ ಮಾರುಕಟ್ಟೆ ನಿರ್ಮಾಣ ಏತಕ್ಕಾಗಿ ಎಂಬ ಬಗ್ಗೆ ವಿವರಣೆ ನೀಡಿದ ಶಾಸಕ ಎ.ಮಂಜುನಾಥ್‌, ಹಾಲಿ ಮಾರುಕಟ್ಟೆಯಲ್ಲಿ ಸ್ಥಳದ ಕೊರತೆ ಇದೆ. ಇಲ್ಲಿ ಪ್ರತಿ ನಿತ್ಯ 20 ರಿಂದ 24 ಟನ್‌ ವಹಿವಾಟು ನಡೆಸಲು ಮಾತ್ರ ಸಾಧ್ಯವಿದೆ. ಪ್ರಸ್ತುತ ದಿನಗಳಲ್ಲಿ ಕಲಬುರ್ಗಿ, ಬಳ್ಳಾರಿ ಸೇರಿದಂತೆ ಕೇರಳ, ಮಹಾರಾಷ್ಟ್ರ, ತೆಲಂಗಾಣ ರಾಜ್ಯಗಳಿಂದಲೂ ರೈತರು ರೇಷ್ಮೆಗೂಡು ತಂದು ಮಾರಾಟ ಮಾಡು ತ್ತಿರುವುದ್ದಾರೆ. ನಿತ್ಯ 40 ರಿಂದ 50 ಟನ್‌ ರೇಷ್ಮೆವಹಿವಾಟು ನಡೆಯುತ್ತಿದೆ. ಮಾರುಕಟ್ಟೆಯಲ್ಲಿ ವಾಹನ ಪಾರ್ಕಿಂಗ್‌ಗೆ ಸ್ಥಳಾವಕಾಶದ ಕೊರತೆಯಿದೆ. ಹೆಚ್ಚಿನ ಗೂಡು ಬಂದಾಗ ಸ್ಥಳದ ಅಭಾವ, ರೈತರಿಗೆ ಉಪಹಾರ, ವಾಸ್ತವ್ಯದ ವ್ಯವಸ್ಥೆ ಇಲ್ಲ. ರೈತರಿಗೆ ಭದ್ರತೆ, ಆರೋಗ್ಯ ಸಮಸ್ಯೆ ಎದುರಾದಲ್ಲಿ ಪ್ರಥಮ ಚಿಕಿತ್ಸೆ ನೀಡಲು ಸೌಲಭ್ಯಗಳಿಲ್ಲ. ಹೈಟೆಕ್‌ ಮಾರುಕಟ್ಟೆಯಲ್ಲಿ ಈ ಸಮಸ್ಯೆಗಳು ನೀಗಲಿವೆ ಎಂದು ಸಮರ್ಥಿಸಿಕೊಂಡರು.

ನೂತನ ಮಾರುಕಟ್ಟೆ ನಿರ್ಮಾಣ ದಿಂದ ರೀಲರ್‌ಗಳಿಗೆ ಸಮಸ್ಯೆ ಇದ್ದರೆ ಅಥವಾ ಬೇಡಿಕೆಗಳನ್ನು ಗಮನಕ್ಕೆ ತರಬ ಹುದು. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಡಿಸಿಎಂ ಡಾ. ಸಿ. ಎನ್‌.ಅಶ್ವತ್ಥನಾರಾಯಣ, ಸಚಿವ ಸಿ.ಪಿ.ಯೋಗೇಶ್ವರ್‌, ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್‌ ಹಾಗೂ ಸಂಸದ ಡಿ.ಕೆ.ಸುರೇಶ್‌ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಸಹಕಾರ ನೀಡುತ್ತೇನೆ. ಎ.ಮಂಜುನಾಥ್‌, ಶಾಸಕ

ರಾಮನಗರ-ಚನ್ನಪಟ್ಟಣ ಮಧ್ಯ ಭಾಗದಲ್ಲಿ ಹೈಟೆಕ್‌ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಬೆಳೆಗಾರರ ಸಂಪೂರ್ಣ ಸಹಕಾರವಿದೆ. ಪ್ರತಿ ವಿಚಾರದಲ್ಲಿಯೂ, ರೀಲರ್‌ಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಕೆ.ರವಿ, ಪ್ರಧಾನ ಕಾರ್ಯದರ್ಶಿ, ರೇಷ್ಮೆ ಬೆಳೆಗಾರರ ಹಿತರಕ್ಷಣಾ ಸಮಿತಿ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.