ಸಾಲಿಗ್ರಾಮದ ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ


Team Udayavani, Dec 16, 2019, 5:45 PM IST

rn-tdy-1

ರಾಮನಗರ: ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ದಲಿತರ ಮೇಲೆ ನಡೆದಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ಘಟನೆಗೆ ಕಾರಣರಾಗಿರುವ ಶಾಸಕ ಸಾ.ರಾ.ಮಹೇಶ್‌ ಸಹೋದರರನ್ನು ಬಂಧಿಸಬೇಕು, ಸಾ.ರಾ. ಮಹೇಶ್‌ ತಮ್ಮಶಾಸಕ ಸ್ಥಾನಕ್ಕೆ ರಾಜೀನಾಮೆ ಆಗ್ರಹಿಸಿ ಸಮತಾ ಸೈನಿಕ ದಳದ ಮತ್ತು ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಸಾ.ರಾ.ಮಹೇಶ್‌ ಮತ್ತು ಅವರ ಸಹೋದರರ ವಿರುದ್ಧ ದಿಕ್ಕಾರ ಕೂಗಿದರು. ಕೆಲಕಾಲ ಹೆದ್ದಾರಿ ತಡೆ ನಡೆಸಿ, ಟೈರ್‌ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಉಗ್ರ ಹೋರಾಟ: ಈ ವೇಳೆ ಮಾತನಾಡಿದ ದಲಿತ ಮುಖಂಡ ಶಿವಕುಮಾರಸ್ವಾಮಿ, ದಲಿತರ ಮೇಲೆ ನಿರಂತರ ದೌರ್ಜನ್ಯ, ಹಲ್ಲೆ, ದಬ್ಟಾಳಿಕೆ ನಡೆ ಯುತ್ತಲೇ ಇವೆ. ಅಮಾಯಕರನ್ನು ಕಾಡುತ್ತಿರುವವನ್ನು ಸಹ ಗುಂಡಿಟ್ಟು ಕೊಲ್ಲಬೇಕಾಗಿದೆ. ಉಳ್ಳವರಿಂದಲೇ ಇಂದು ದೌರ್ಜನ್ಯಗಳು ನಡೆಯುತ್ತಿವೆ. ಇಂದು ನಡೆಸುತ್ತಿರುವುದು ಸಾಂಕೇತಿಕ ಪ್ರತಿಭಟನೆ ನಡೆಸಲಾಗಿದೆ. ದೌರ್ಜನ್ಯಕ್ಕೆ ಕಾರಣರಾದವರನ್ನು ತಕ್ಷಣ ಬಂಧಿಸದಿದ್ದರೆ ಉಗ್ರಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು. ಸಮತಾ ಸೈನಿಕ ದಳದ ವಿದ್ಯಾರ್ಥಿ ಘಟಕದ ರಾಜ್ಯಾಧ್ಯಕ್ಷ ಡಾ.ಜಿ.ಗೋವಿಂದಯ್ಯ ಮಾತನಾಡಿ, ಮೈಸೂರು ಜಿಲ್ಲೆಯ ಸಾಲಿಗ್ರಾಮವೆಂಬಲ್ಲಿ ದಲಿತರ ಕಾಲೋನಿಗೆ ನುಗ್ಗಿ ಮಾಜಿ ಸಚಿವ ಸಾ.ರಾ.ಮಹೇಶ್‌ ಮತ್ತು ಸಹಚರರ ಗುಂಪು ದಲಿತರ ಮೇಲೆ ಗುಂಡಾಗಿರಿ, ದುರ್ವರ್ತನೆ, ದಬ್ಟಾಳಿಕೆ, ಹಾಗೂ ದೌರ್ಜನ್ಯ ವೆಸಗಿದೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾ.ರಾ.ಮಹೇಶ್‌ ಅವರ ಸಹೋದರ ಸಾ.ರಾ. ರವೀಶ್‌ ಹಾಗೂ ಸಹಚರರಿಗೆ ಮಹೇಶ್‌ ಅವರೇ ಕುಮ್ಮಕ್ಕು ನೀಡಿರುವ ಕಾರಣ ಈ ಘಟನೆ ಜರುಗಿದೆ. ಸರ್ಕಾರ ಇದರ ಬಗ್ಗೆ ಸಮಗ್ರ ಹಾಗೂ ಸೂಕ್ತ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ನಿರ್ದಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕರ್ತವ್ಯ ಲೋಪ: 2019ರಲ್ಲಿ ಸರ್ವೋತ್ಛ ನ್ಯಾಯಾಲಯ ದಲಿತರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳನ್ನು ದೂರು ದಾಖಲಾದ 24 ಗಂಟೆಯೊಳಗೆ ಕೋರ್ಟ್‌ಗೆ ಒಪ್ಪಿಸಬೇಕೆಂಬ ನಿರ್ದೇಶನ ನೀಡಿದೆ. ಸಾಲಿಗ್ರಾಮದಲ್ಲಿ ನಡೆದಿರುವ ಘಟನೆಯಲ್ಲಿ ಕರ್ತವ್ಯ ಲೋಪ ಎದ್ದು ಕಾಣುತ್ತಿದೆ. ಈ ಕೂಡಲೇ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಕಾರಿಯನ್ನು ಕೂಡಲೇ ಅಮಾನತ್ತು ಪಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ದಲಿತ ಮುಖಂಡರಾದಚಲುವರಾಜು, ಗುರುಮೂರ್ತಿ, ಚಂದ್ರು ಪದಾಧಿಕಾರಿಗಳಾದ ಬನಶಂಕರಿ ನಾಗು, ಶಿವರಾಜ್ ಭರಣಿ, ಜಗದೀಶ, ರುದ್ರೇಶ್‌, ಕೋಟೆ ಪ್ರಕಾಶ್‌, ನರೇಶ್‌, ಲಕ್ಷ್ಮಣ… ಪುಟ್ಟಸ್ವಾಮಿ, ಮಹಲಿಂಗ ವಿ.ಎಸ್‌.ದೊಡ್ಡಿ, ವೆಂಕಟೇಶ್‌, ಗೋವಿಂದರಾಜು, ಹೇಮಂತ್‌ ಬೈರಮಂಗಲ, ಚಕ್ಕೇರೆ ಲೋಕೇಶ್‌, ಹೊಂಬಾಳಯ್ಯ, ಗುಂಡಾ ದೇವರಹಳ್ಳಿ ಇದ್ದರು.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.