![Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ](https://www.udayavani.com/wp-content/uploads/2024/07/aa-415x234.jpg)
Ramanagar: ಜೆಡಿಎಸ್ ಕೊನೆಗಾಣುವ ಎಲ್ಲಾ ಲಕ್ಷಣ ಕಾಣಿಸುತ್ತಿದೆ: ಡಿ ಕೆ ಸುರೇಶ್
Team Udayavani, Sep 30, 2023, 5:22 PM IST
![Ramanagar: ಜೆಡಿಎಸ್ ಕೊನೆಗಾಣುವ ಎಲ್ಲಾ ಲಕ್ಷಣ ಕಾಣಿಸುತ್ತಿದೆ: ಡಿ ಕೆ ಸುರೇಶ್](https://www.udayavani.com/wp-content/uploads/2023/09/sures-620x342.jpg)
ರಾಮನಗರ: ಜೆಡಿಎಸ್ ಕೊನೆಗಾಣುವ ಎಲ್ಲಾ ಲಕ್ಷಣ ಕೂಡ ಕಾಣಿಸುತ್ತಿದೆ. ಜೆಡಿಎಸ್ ಪಕ್ಷದ ಹಲವು ಮುಖಂಡರು, ನಾಯಕರು ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೂ ಅವರಿಗೆ ಬೆಲೆ ಇಲ್ಲವೆಂದು ನಮ್ಮ ಪಕ್ಷ ಸೇರುತ್ತಿದ್ದಾರೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿದರು.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಎಂ.ಸಿ ಅಶ್ವಥ್ 30 ವರ್ಷ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಮೊದಲಿಂದಲೂ ಡಿ.ಕೆ. ಶಿವಕುಮಾರ್ ಜೊತೆ ವಿಶೇಷ ಸ್ನೇಹ ಸಂಬಂಧ ಇಟ್ಟುಕೊಂಡಿದ್ದರು. ರಾಜಕೀಯ ಧ್ರುವೀಕರಣ ಸಂದರ್ಭದಲ್ಲಿ ಹಲವು ಪ್ರಮುಖ ನಾಯಕರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಕಳೆದ ವಾರ ಹಿರಿಯರ ಜೊತೆ ಸಭೆ ನಡೆಸಿ ಮಾತನಾಡಿದ್ದೆ. ಅಂದು ನಮ್ಮ ಪಕ್ಷಕ್ಕೆ ಬನ್ನಿ ಎಂದು ಅಹ್ವಾನ ಮಾಡಿದ್ದೆ. ಪಕ್ಷಕ್ಕೆ ಬರಲು ಒಪ್ಪಿದ್ದಾರೆ. ಗಾಂಧಿ ಜಯಂತಿ ದಿನ ಮಾಜಿ ಶಾಸಕ ಅಶ್ವಥ್ ನಾಯಕತ್ವದಲ್ಲಿ ಜೆಡಿಎಸ್ ಪಕ್ಷ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದರು.
ವಿಧಾನಸಭೆ ಚುನಾವಣೆಗೂ ಮೊದಲೇ ಅಹ್ವಾನ ಕೊಟ್ಟಿದ್ದೆ. ಆ ವೇಳೆ ಜೆಡಿಎಸ್ ಪಕ್ಷ ಬಿಡುವ ಮಾತಿಲ್ಲ ಎಂದಿದ್ದರು. ಆದರೆ ಬದಲಾದ ರಾಜಕಾರಣ ಸಂದರ್ಭದಲ್ಲಿ ಸಹಮತಿಕೊಟ್ಟು ಪಕ್ಷಕ್ಕೆ ಬರುತ್ತಿದ್ದಾರೆ. ಇಲ್ಲಿ ಲಾಭ ನಷ್ಟದ ಪ್ರಶ್ನೆ ಇಲ್ಲ. ಜೆಡಿಎಸ್ ನಲ್ಲಿ ಸ್ಥಾನಮಾನ ಸಿಗುವುದು ಕಷ್ಟ ಎಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.
ಅಲ್ಪಸಂಖ್ಯಾತರ ಬಗ್ಗೆ ಮಾಜಿ ಸಿಎಂ ಎಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಮತದಾರರು ತೀರ್ಪು ನೀಡಿದ್ದಾರೆ. ಅವರ ಮೈತ್ರಿ ಪವಿತ್ರವೋ ಅಪವಿತ್ರವೋ ಎಂಬುದನ್ನು ಜನರು ತಿರ್ಮಾನ ಮಾಡುತ್ತಾರೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅವರ ಮೇಲೆ ಕೇಸ್ಗಳಿವೆ. ಎಲ್ಲಾ ಸಾಕ್ಷಿಗಳು ಮಾಧ್ಯಮದಲ್ಲಿ ಪ್ರಸಾರಗೊಂಡಿದೆ. ಹೀಗಾಗಿ ನಮ್ಮ ಪಕ್ಷಕ್ಕೆ ಬಂದವರಿಗೆ ಅಹ್ವಾನ ನೀಡುತ್ತಿದ್ದೇವೆ ಎಂದು ಡಿ.ಕೆ. ಸುರೇಶ್ ಹೇಳಿದರು.
ಟಾಪ್ ನ್ಯೂಸ್
![Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ](https://www.udayavani.com/wp-content/uploads/2024/07/aa-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sa-dsadsa](https://www.udayavani.com/wp-content/uploads/2024/07/1-sa-dsadsa-150x84.jpg)
Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ
![1-asdsad](https://www.udayavani.com/wp-content/uploads/2024/07/1-asdsad-150x100.jpg)
Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ
![pejawar swamiji reacts to Rahul Gandhi’s Hindu remark on parliament](https://www.udayavani.com/wp-content/uploads/2024/07/pejara-150x83.jpg)
Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ
![“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್](https://www.udayavani.com/wp-content/uploads/2024/07/13-2-150x90.jpg)
“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್
![Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ](https://www.udayavani.com/wp-content/uploads/2024/07/12-3-150x90.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.