Ramanagara ಪಾದಯಾತ್ರೆ: ಜತೆಗೂಡಿ ಹೆಜ್ಜೆ ಹಾಕಿದ ವಿಜಯೇಂದ್ರ-ನಿಖಿಲ್
Team Udayavani, Aug 4, 2024, 9:26 PM IST
ರಾಮನಗರ: ಎರಡನೇ ದಿನ ಬಿಡದಿಯಿಂದ ಪ್ರಾರಂಭವಾದ ಪಾದಯಾತ್ರೆಯಲ್ಲಿ ಬಿ.ವೈ.ವಿಜಯೇಂದ್ರ ಮತ್ತು ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ಹೆಜ್ಜೆ ಹಾಕಿದರು.
ಇಬ್ಬರೂ ಮುಖಂಡರು, ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರು ಕೈ ಕೈಹಿಡಿದು ಹೆಜ್ಜೆ ಹಾಕುವ ಮೂಲಕ ಮೈತ್ರಿ ಒಗ್ಗಟ್ಟನ್ನು ಪ್ರದರ್ಶಿಸಿದ್ದು ವಿಶೇಷವೆನಿಸಿತ್ತು.
ಪಾದಯಾತ್ರೆಯ ಹಿನ್ನೆಲೆಯಲ್ಲಿ ಬಿಡದಿಯಿಂದ ಕೆಂಗಲ್ವರೆಗೆ ಎರಡೂ ಪಕ್ಷದ ಭಾವುಟಗಳು ರಾರಾಜಿಸುತ್ತಿದ್ದವು. ದಾರಿಯುದ್ದಕ್ಕೂ ಬ್ಯಾನರ್ಗಳನ್ನು ಹಾಕಿಸಲಾಗಿತ್ತು.
ದಾರಿಯುದ್ದಕ್ಕೂ ಹೂವಿನ ಹಾರ, ತೂರಾಯಿಗಳಿಂದಲೇ ತುಂಬಿ ಹೋಗಿದ್ದ ಇಬ್ಬರು ನಾಯಕರುಗಳೊಟ್ಟಿಗೆ ಬಿಜೆಪಿ-ಜೆಡಿಎಸ್ನ ಶಾಸಕರು, ಎಂಎಲ್ಸಿಗಳು ನಡಿಗೆ ಹಾಕಿದರು.
ಶನಿವಾರ ರಾತ್ರಿ ಪಾದಯಾತ್ರೆಯ ಮೂಲಕ ಆಗಮಿಸಿದ ಕಾರ್ಯಕರ್ತರಿಗೆ ಮಂಜುನಾಥ ಕನ್ವೆನನ್ ಹಾಲ್ನಲ್ಲಿ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇನ್ನು ಮಾಜಿ ಸಚಿವರು ಹಾಗೂ ಶಾಸಕರಿಗೆ ಈಗಲ್ಟನ್, ವಂಡರ್ಲಾ, ರವೀಶಿಂಗ್ ಸೇರಿ ವಿವಿಧ ರೆಸಾರ್ಟ್ಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಿ.ವೈ.ವಿಜಯೇಂದ್ರ ಸೇರಿ ಕೆಲ ಪ್ರಮುಖ ಮುಖಂಡರು ಬೆಂಗಳೂರಿನ ತಮ್ಮ ನಿವಾಸಕ್ಕೆ ಭಾನುವಾರ ಬೆಳಗ್ಗೆ ಮರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು
Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು
CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.